ಊರಿನಿಂದ ನಗರದ ಕಡೆ ವಾಪಸ್ ಬರ್ತಿದ್ದಾರೆ ವಲಸೆ ಕಾರ್ಮಿಕರು
ದೆಹಲಿ, ಜೂನ್ 27: ಕೊರೊನಾ ವೈರಸ್ ಲಾಕ್ಡೌನ್ ಕಾರಣದಿಂದ ಸ್ವಂತ ಊರುಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು, ಈಗ ಮತ್ತೆ ಕೆಲಸಗಳಿಗೆ ಮರಳುತ್ತಿದ್ದಾರೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.
Recommended Video
ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಶುಕ್ರವಾರ ಮಾತನಾಡಿದ್ದು "ಊರುಗಳಿಗೆ ತೆರಳಿದ್ದ ವಲಸೆ ಕಾರ್ಮಿಕರು ಸಾಮಾನ್ಯ ರೈಲುಗಳ ಮೂಲಕ ಮತ್ತೆ ವಾಪಸ್ ಬರುತ್ತಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಿಕೊಡಲು ಆರಂಭಿಸಿದ್ದ ಶ್ರಮಿಕ್ ರೈಲುಗಳಲ್ಲಿ ಶೇಕಡಾ 70ರಷ್ಟು ಜನರು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಹೋಗಿದ್ದರು. ಇದೀಗ, ಅಲ್ಲಿಂದ ಮುಂಬೈ, ಅಹಮದಬಾದ್, ಗುಜರಾತ್ ಕಡೆಗೆ ವಾಪಸ್ ಆಗುತ್ತಿದ್ದಾರೆ ಎಂದು ಯಾದವ್ ಹೇಳಿದ್ದಾರೆ.

ಪ್ರಸ್ತುತ 230 ವಿಶೇಷ ಪ್ಯಾಸೆಂಜರ್ ರೈಲುಗಳು ಸಂಚಾರ ಮಾಡುತ್ತಿದ್ದು, ಕಾರ್ಮಿಕರ ಚಲನವಲನ ಗಮನಿಸುತ್ತಿರುವ ಭಾರತೀಯ ರೈಲ್ವೆ ಮತ್ತಷ್ಟು ರೈಲು ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇನ್ನು "ಉತ್ತರ ಪ್ರದೇಶ, ಬಿಹಾರದ ಜನರು ಮುಂಬೈ ಮತ್ತು ಬೆಂಗಳೂರು ಕಡೆಗೆ ಹೋಗುತ್ತಿರುವುದು ಬಹಳ ಪ್ರೋತ್ಸಾಹದಾಯಕವಾಗಿದೆ" ಎಂದು ಯಾದವ್ ಹೇಳಿದ್ದಾರೆ.
ಕೊರೊನಾ ವೈರಸ್ ಲಾಕ್ಡೌನ್ ಕಾರಣದಿಂದ ರಾಷ್ಟ್ರವ್ಯಾಪಿ ಸುಮಾರು 12,000ಕ್ಕೂ ಹೆಚ್ಚು ಪ್ಯಾಸೆಂಜರ್ ರೈಲುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ, ಲಾಕ್ಡೌನ್ನಲ್ಲಿ ವಿನಾಯಿತಿ ಘೋಷಿಸಿದ ಬಳಿಕ ಜೂನ್ 1 ರಿಂದ ಸುಮಾರು 200 ಎಕ್ಸ್ಪ್ರೆಸ್ ರೈಲುಗಳು ಕಾರ್ಯಾಚರಣೆಯನ್ನು ಸಂಚಾರಕ್ಕೆ ಅನುಮತಿ ನೀಡಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications