ಪಾಕಿಸ್ತಾನದಲ್ಲಿ ಹಾಡಿದ್ದಕ್ಕೆ ಗಾಯಕ ಮಿಕಾ ಸಿಂಗ್ಗೆ ನಿಷೇಧ
ನವದೆಹಲಿ, ಆಗಸ್ಟ್ 14: ಉದ್ವಿಗ್ನ ಪರಿಸ್ಥಿತಿಯ ನಡುವೆ ಪಾಕಿಸ್ತಾನದ ಕರಾಚಿಯಲ್ಲಿ ಪ್ರದರ್ಶನ ನೀಡಿದ ಗಾಯಕ ಮಿಕಾ ಸಿಂಗ್ ಮೇಲೆ ಅಖಿಲ ಭಾರತ ಸಿನಿ ನೌಕರರ ಸಂಸ್ಥೆ (ಎಐಸಿಡಬ್ಲ್ಯೂಎ) ಭಾರತೀಯ ಸಿನಿಮಾ ಉದ್ಯಮದಿಂದ ನಿಷೇಧ ಹೇರಿದೆ.
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಹತ್ತಿರ ಸಂಬಂಧಿಯೊಬ್ಬರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಿಕಾ ಸಿಂಗ್ ಭಾಗವಹಿಸಿದ್ದರು. ಪಾಕಿಸ್ತಾನದ ಪತ್ರಕರ್ತರೊಬ್ಬರು ಮಾಡಿರುವ 30 ಸೆಕೆಂಡುಗಳ ವಿಡಿಯೋ ಟ್ವೀಟ್ನಲ್ಲಿ ಮಿಕಾ ಸಿಂಗ್ ಹಾಡುತ್ತಿರುವುದು ಪ್ರಸಾರವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯ ರದ್ದತಿ ಬಳಿಕ ಭಾರತವು ಪಾಕಿಸ್ತಾನದೊಂದಿಗಿನ ಎಲ್ಲ ಕಲಾ ಹಾಗೂ ಸಾಮಾಜಿಕ ಒಪ್ಪಂದಗಳನ್ನು ಕಡಿದುಕೊಳ್ಳುತ್ತಿದೆ. ಈ ನಡುವೆಯೂ ಮಿಕಾ ಸಿಂಗ್ ಅಲ್ಲಿ ಹಾಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ.
''ಕರಾಚಿಯಲ್ಲಿ ಆಗಸ್ಟ್ 8ರಂದು ವೈಭವೋಪೇತ ಸಮಾರಂಭದಲ್ಲಿ ಹಾಡಿರುವುದಕ್ಕೆ ಎಐಸಿಡಬ್ಲ್ಯೂಎ ಗಾಯಕ ಮಿಕಾ ಸಿಂಗ್ ಅವರನ್ನು ಭಾರತೀಯ ಚಿತ್ರೋದ್ಯಮದಿಂದ ನಿಷೇಧಿಸಿದೆ ಮತ್ತು ಬಹಿಷ್ಕರಿಸಿದೆ'' ಎಂದು ಎಐಸಿಡಬ್ಲ್ಯೂಎ ಅಧ್ಯಕ್ಷ ಸುರೇಶ್ ಶ್ಯಾಮಲಾಲ್ ಗುಪ್ತಾ ಪತ್ರದಲ್ಲಿ ತಿಳಿಸಿದ್ದಾರೆ.

''ಮಿಕಾ ಸಿಂಗ್ ಅವರ ಎಲ್ಲ ಸಿನಿಮಾ ನಿರ್ಮಾಣ ಸಂಸ್ಥೆಗಳು, ಸಂಗೀತ ಕಂಪೆನಿಗಳು ಮತ್ತು ಅಂತರ್ಜಾಲ ಸಂಗೀತ ವಿಷಯ ಪೂರೈಕೆದಾರರೊಂದಿಗಿನ ಎಲ್ಲ ಒಪ್ಪಂದಗಳಿಂದಲೂ ಅವರನ್ನು ತಕ್ಷಣದಿಂದಲೇ ಬಹಿಷ್ಕರಿಸುವ ಕಠಿಣ ನಿಲುವನ್ನು ತೆಗೆದುಕೊಂಡಿದೆ'' ಎಂದು ಹೇಳಿದ್ದಾರೆ.
''ಭಾರತದ ಯಾರೂ ಮಿಕಾ ಸಿಂಗ್ ಅವರೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಎಐಸಿಡಬ್ಲ್ಯೂಎ ಕೆಲಸಗಾರರು ಖಚಿತಪಡಿಸಲಿದ್ದಾರೆ. ಒಂದು ವೇಳೆ ಅವರೊಂದಿಗೆ ಕೆಲಸ ಮಾಡಿದರೆ ಅವರು ಕಾನೂನಿನ ಅಡಿಯಲ್ಲಿ ಕಾನೂನಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದ್ದಾರೆ.
''ಎರಡೂ ದೇಶಗಳ ನಡುವಿನ ಉದ್ವಿಗ್ನ ಸನ್ನಿವೇಶ ಉತ್ತುಂಗದಲ್ಲಿ ಇರುವ ಸಂದರ್ಭದಲ್ಲಿ ಮಿಕಾ ಸಿಂಗ್ ದೇಶದ ಮೇಲಿನ ಅಭಿಮಾನವನ್ನು ಹಣಕ್ಕೆ ಪಣವಾಗಿಟ್ಟಿದ್ದಾರೆ'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications