ಕರ್ನಾಟಕ ಹೂಡಿಕೆದಾರ ಸಮಾವೇಶ- ವಿದೇಶಿ ರಾಯಭಾರಿ ಭೇಟಿಯಾಗಿ ಆಹ್ವಾನ ನೀಡಿದ ನಿರಾಣಿ

ನವದೆಹಲಿ, ಮೇ 9- ಕರ್ನಾಟಕವನ್ನು ಕೈಗಾರಿಕಾ ವಲಯದಲ್ಲಿ ದೇಶದಲ್ಲೇ ಮೊದಲ ಸ್ಥಾನಕ್ಕೆ ಕೊಂಡೊಯ್ಯಲೇ ಬೇಕೆಂದಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿವಿಧ ದೇಶದ ರಾಯಭಾರಿಗಳನ್ನು ಭೇಟಿ ಮಾಡಿ ಆಹ್ವಾನ ನೀಡಿದರು.

ರಾಜ್ಯದಲ್ಲಿ ಬಂಡವಾಳ ಹೂಡಲು ವಿದೇಶಿ ರಾಯಭಾರಿಗಳನ್ನು ಭೇಟಿಯಾದ ಸಚಿವ ಮುರುಗೇಶ್ ನಿರಾಣಿ

* ನವದೆಹಲಿಯಲ್ಲಿ ವಿವಿಧ ರಾಯಭಾರಿಗಳ ಜೊತೆ ಮಾತುಕತೆ

* ರಾಜ್ಯದಲ್ಲಿ ಬಂಡವಾಳ ಹೂಡುವವರಿಗೆ ರತ್ನಗಂಬಳಿ

* ಉದ್ದಿಮೆದಾರರಿಗೆ ವಿಶ್ವದರ್ಜೆಯ ಮೂಲಭೂತ ಸೌಕರ್ಯ

* ದೇಶದಲ್ಲೇ ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯ

* ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಾದ್ಯಂತ 50 ಸಾವಿರ ಎಕರೆ ಜಮೀನು ಮೀಸಲು

ಕರ್ನಾಟಕದಲ್ಲಿ ಹೂಡಿಕೆಗೆ ಮುಕ್ತ ಆಹ್ವಾನ

ಕರ್ನಾಟಕದಲ್ಲಿ ಹೂಡಿಕೆಗೆ ಮುಕ್ತ ಆಹ್ವಾನ

ಜರ್ಮನ್ ರಾಯಭಾರಿ ಕಚೇರಿಗೆ ಭೇಟಿ ಕೊಟ್ಟ ನಿರಾಣಿಯವರು ಜರ್ಮನಿಯ ಫೆಡೆರಲ್ ರಿಪಬ್ಲಿಕ್ ಆಂಡ್ ಮಿಷನ್ ಡೆಪ್ಯುಟಿ ಚೀಫ್ ಡಾ.ಸ್ಟೀಫನ್ ಗ್ರಾಬರ್, ನಂತರ ಕೊರಿಯಾದ ರಾಯಭಾರಿ ಚಾಂಗ್ ಜೆ-ಬೋಕ್, ಜಪಾನ್ ದೇಶದ ಡೆಪ್ಯುಟಿ ಚೀಫ್ ಕುಹಿನಿಕೊ ಕವಾಜು , ಬ್ರಿಟಿಷ್ ಡೆಪ್ಯುಟಿ ಟ್ರೇಡ್ ಕಮಿಷನರ್, ರೈಯಾನನ್ ಹ್ಯಾರಿಸ್, ಭಾರತದ ಬ್ರಿಟಿಷ್ ಹೈ ಕಮಿಷನ್ ನ ಅರ್ಥಶಾಸ್ತ್ರ ಮತ್ತು ಹಣಕಾಸು ಮುಖ್ಯಸ್ಥ ಆಡಮ್ ಟೇಲರ್, ಕೇಂದ್ರ ಸರ್ಕಾರದ ರಾಷ್ಟ್ರೀಯ ಹೂಡಿಕೆ ಉತ್ತೇಜನ ಸಂಸ್ಥೆಯಾದ ಇನ್ವೆಸ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ದೀಪಕ್ ಬಾಗ್ಲ ಸೇರಿದಂತೆ ಮತ್ತಿತರ ದೇಶಗಳ ರಾಯಭಾರಿಗಳನ್ನು ನವದೆಹಲಿಯಲ್ಲಿ ಖುದ್ದು ಭೇಟಿ ಮಾಡಿದ ನಿರಾಣಿಯವರು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ವಿಫುಲ ಅವಕಾಶಗಳನ್ನು ಸಚಿವ ಮುರುಗೇಶ್ ನಿರಾಣಿಯವರು ಮನವರಿಕೆ ಮಾಡಿಕೊಟ್ಟರು.

ಹೂಡಿಕೆದಾರರಿಗೆ ಕೆಂಪು ರತ್ನಗಂಬಳಿ

ಹೂಡಿಕೆದಾರರಿಗೆ ಕೆಂಪು ರತ್ನಗಂಬಳಿ

ಸಿಲಿಕಾನ್ ವ್ಯಾಲಿ ಎಂದೇ ಕರೆಯುವ ಬೆಂಗಳೂರನ್ನು ನಾಲೇಡ್ಜ್ ಹಬ್ ಎಂದೇ ಪ್ರಸಿದ್ದಿಯಾಗಿದೆ. ವಿಶ್ವದ ಸುಪ್ರಸಿದ್ದ ಕೈಗಾರಿಕೆಗಳು ಇಲ್ಲಿ ಸ್ಥಾಪಿತವಾಗಿದೆ. ಕೈಗಾರಿಕಾ ಸ್ನೇಹಿ ಸರ್ಕಾರ ನಮ್ಮದಾಗಿದ್ದು, ಹೂಡಿಕೆದಾರರಿಗೆ ಕೆಂಪು ರತ್ನಗಂಬಳಿ ಹಾಕುತ್ತೇವೆ ಎಂದು ತಿಳಿಸಿದರು.ರಾಜ್ಯ ಸರ್ಕಾರ ಜಾರಿಗೆ ತಂದಿರುವ 2020-25ರ ಕೈಗಾರಿಕಾ ನೀತಿ ಉದ್ಯಮಿಗಳಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದಾಗಿ ನಾನಾ ರಾಷ್ಟ್ರಗಳಿಂದ ಕರ್ನಾಟಕಕ್ಕೆ ಬಂಡವಾಳ ಹೂಡಲು ಉದ್ಯಮಿಗಳು ಮುಂದೆ ಬರುತ್ತಿದ್ದಾರೆ ಎಂದು ಮೆಚ್ಚುಗೆ ‌ವ್ಯಕ್ತಪಡಿಸಿದರು.

ಎರಡು ಮತ್ತು ಮೂರನೇ ಹಂತದ ನಗರದಲ್ಲೂ ಹೂಡಿಕೆ ಮಾಡಬಹುದು

ಎರಡು ಮತ್ತು ಮೂರನೇ ಹಂತದ ನಗರದಲ್ಲೂ ಹೂಡಿಕೆ ಮಾಡಬಹುದು

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಬರುವ ಉದ್ಯಮಿಗಳಿಗೆ ಇಲಾಖೆಯು ಅಗತ್ಯವಿರುವ ಭೂಮಿ, ನೀರು, ರಸ್ತೆ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿದ್ದೇವೆ. ಕಳೆದ ತ್ರೈಮಾಸಿಕ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಇದಕ್ಕೆ ನಮ್ಮ ಸರ್ಕಾರದ ಕೈಗಾರಿಕಾ ಸ್ನೇಹಿ ನೀತಿಗಳೇ ಕಾರಣ ಎಂದ ಸಚಿವರು ತಿಳಿಸಿದರು.

ಬೆಂಗಳೂರು ಮಾತ್ರವಲ್ಲದೆ 2ನೇ ಹಂತದ ನಗರಗಳಾದ ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ ಅದೇ ರೀತಿ 3ನೇ ಹಂತದ ನಗರಗಳಾದ ಶಿವಮೊಗ್ಗ, ತುಮಕೂರು, ಬಳ್ಳಾರಿ, ಬೀದರ್, ಬಾಗಲಕೋಟೆ ಸೇರಿದಂತೆ ಎಲ್ಲಾ ಕಡೆ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದೆ ಬರುತ್ತಿದ್ದಾರೆ. ಉದ್ಯಮಿಗಳಿಗೆ ನಮ್ಮ ಸರ್ಕಾರ ಸದಾ ಬೆಂಗಾವಲಿಗೆ ಇರುತ್ತದೆ ಎಂದು ಉದ್ಯಮಿಗಳಿಗೆ ಆಶ್ವಾಸನೆ ನೀಡಲಾಗಿದೆ.

ಕೈಗಾರಿಕೆಗೆ 50 ಸಾವಿರ ಎಕರೆ ಜಮೀನನ್ನು ಭೂಸ್ವಾಧೀನ

ಕೈಗಾರಿಕೆಗೆ 50 ಸಾವಿರ ಎಕರೆ ಜಮೀನನ್ನು ಭೂಸ್ವಾಧೀನ

ಈ ಹಿಂದೆ ನಮ್ಮ ಸರ್ಕಾರ ಎರಡು ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನಡೆಸಿತ್ತು. ಪರಿಣಾಮ ರಾಜ್ಯದ ಎಲ್ಲೆಡೆ ಇಂದು ಅನೇಕ ಕೈಗಾರಿಕೆಗಳು ತಲೆ ಎತ್ತಿನಿಂತಿವೆ. ನ.2ರಿಂದ 4ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಉದ್ದಿಮೆ ಆರಂಭಿಸುವವರಿಗೆ 50 ಸಾವಿರ ಎಕರೆ ಜಮೀನನ್ನು ಭೂಸ್ವಾಧೀನ ಪಡೆಸಿಕೊಂಡಿದ್ದೇವೆ. ಮುಕ್ತ ಮನಸ್ಸಿನಿಂದ ಬಂಡವಾಳ ಹೂಡುವಂತೆ ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ್ ನಿರಾಣಿ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ರಮಣ ರೆಡ್ಡಿ, ಆಯುಕ್ತರಾದ ಗುಂಜನ್ ಕೃಷ್ಣ, ಮತ್ತಿತರರು ಹಾಜರಿದ್ದರು.

ವಿವಿಧ ಕ್ಷೇತ್ರಗಳ ಕರ್ನಾಟಕ ಮುಂಜೂಣಿ

ವಿವಿಧ ಕ್ಷೇತ್ರಗಳ ಕರ್ನಾಟಕ ಮುಂಜೂಣಿ

ಸಚಿವ ‌ನಿರಾಣಿ ಅವರು""ಕರ್ನಾಟಕ ಇಂದು ದೇಶದಲ್ಲೇ ಅತ್ಯಂತ ಪ್ರಗತಿಪರ ರಾಜ್ಯವಾಗಿದೆ. ಇಲ್ಲಿನ ನೈಸರ್ಗಿಕ ಸಂಪನ್ಮೂಲಗಳು, ಐಟಿಬಿಟಿ, ರಕ್ಷಣಾ, ವೈಮಾನಿಕ, ಕೃಷಿ, ಸ್ಟಾರ್ಟ್ ಅಪ್, ಯೂನಿಕಾರ್ನ್, ಗಣಿ, ಆರೋಗ್ಯ, ಆಹಾರ ಮತ್ತು ಸಂಸ್ಕರಣಾ ಘಟಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದೇವೆ, ಹೂಡಿಕೆದಾರರಿಗೆ ಕರ್ನಾಟಕದಲ್ಲಿ ವಿಫುಲ ಅವಕಾಶವಿದೆ '' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+