ರೈತರಿಗೆ ಪಾಪ್ ಗಾಯಕಿ ಬೆಂಬಲ; ಗರಂ ಆದ ವಿದೇಶಾಂಗ ವ್ಯವಹಾರ ಸಚಿವಾಲಯ
ನವದೆಹಲಿ, ಫೆಬ್ರುವರಿ 03: ಕೇಂದ್ರದ ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕೆಲವು ಅಂತರಾಷ್ಟ್ರೀಯ ಕಲಾವಿದರು ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಖ್ಯಾತ ಪಾಪ್ ಗಾಯಕಿ ರಿಹಾನಾ ಹಾಗೂ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ ಬರ್ಗ್ ಅವರು ಕೂಡ ರೈತರ ಪ್ರತಿಭಟನೆಗೆ ಸಾಥ್ ನೀಡಿ ಟ್ವೀಟ್ ಮಾಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಟನೆ ಕುರಿತು ಚರ್ಚೆಗಳೂ ಸಾಗಿವೆ.
ಇವರ ಟ್ವೀಟ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. "ಕೆಲವು ಪಟ್ಟಭದ್ರ ಗುಂಪುಗಳಿಗೆ ಅಂತರರಾಷ್ಟ್ರೀಯ ಬೆಂಬಲವೂ ವ್ಯಕ್ತವಾಗುತ್ತಿರುವುದು ದುರದೃಷ್ಟಕರ" ಎಂದು ಹೇಳಿದೆ. ಮುಂದೆ ಓದಿ...
|
"ನಿಜಾಂಶವನ್ನು ಮೊದಲು ತಿಳಿದುಕೊಳ್ಳಿ"
ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಈ ಬಗ್ಗೆ ಟ್ವೀಟ್ ಮಾಡಿದ್ದು, "ಇಂಥ ವಿಚಾರಗಳ ಬಗ್ಗೆ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡುವ ಮುನ್ನ ಯೋಚಿಸಬೇಕು. ಮೊದಲು ವಿಷಯವನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕು. ನಿಜಾಂಶವನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ತಿಳಿಯದೇ ಕಮೆಂಟ್ ಗಳನ್ನು ಹಾಗೂ ಹ್ಯಾಷ್ ಟ್ಯಾಗ್ ಗಳನ್ನು ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಕೃಷಿ ಕಾಯ್ದೆಗಳನ್ನು ಸಮರ್ಥನೆ ಮಾಡಿಕೊಂಡ ಸರ್ಕಾರ
ಈ ಸಂದರ್ಭ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಸಮರ್ಥನೆ ಮಾಡಿಕೊಂಡಿರುವ ಸಚಿವಾಲಯ, ಕಾರ್ಯವಿಧಾನದಂತೆಯೇ ಈ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಜೊತೆಗೆ ರೈತರ ಹಿತಕ್ಕಾಗಿಯೇ ಈ ಕಾಯ್ದೆಗಳು ರೂಪುಗೊಂಡಿವೆ ಎಂದು ಸಮರ್ಥನೆ ಮಾಡಿಕೊಂಡಿದೆ.
"ಭಾರತದ ಒಂದು ಭಾಗದ ರೈತರಿಗೆ ಮಾತ್ರ ಈ ಕಾಯ್ದೆ ಬಗ್ಗೆ ವಿರೋಧವಿದೆ. ಪ್ರತಿಭಟನಾಕಾರರ ಭಾವನೆಗಳನ್ನು ಗೌರವಿಸಿ, ಸರ್ಕಾರವು ರೈತರೊಂದಿಗೆ ಸರಣಿ ಸಭೆಗಳನ್ನು ನಡೆಸಿದೆ. ಆದರೆ ಇದ್ಯಾವುದೂ ಫಲ ನೀಡಿಲ್ಲ" ಎಂದು ಸಚಿವಾಲಯ ತಿಳಿಸಿದೆ.
"ಪ್ರತಿಭಟನೆಯಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಕೆಲಸವಿದೆ"
ಈ ವಿವಾದ ಬಗೆಹರಿಯುವವರೆಗೂ ಈ ಕಾಯ್ದೆಗಳಿಗೆ ತಡೆ ಹಿಡಿಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ಆದರೂ ಪ್ರತಿಭಟನೆಯನ್ನು ಮುಂದುವರೆಸಲಾಗುತ್ತಿದೆ. ಕೆಲವು ಪಟ್ಟಭದ್ರ ಹಿತಾಸಕ್ತ ಗುಂಪುಗಳು ತಮ್ಮ ಅಜೆಂಡಾಗಳನ್ನು ಈ ಪ್ರತಿಭಟನೆ ಮೂಲಕ ಪ್ರತಿಪಾದಿಸಲು ನೋಡುತ್ತಿದ್ದಾರೆ. ಪ್ರತಿಭಟನೆಯ ಹಾದಿಯೇ ತಪ್ಪಿದೆ ಎಂದು ದೂರಿದೆ.

ರೈತರ ಪ್ರತಿಭಟನೆ ಬಗ್ಗೆ ರಿಹಾನಾ ಹೇಳಿದ್ದೇನು?
'ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು? ' ಎಂದು ಬರೆದುಕೊಂಡಿದ್ದ ರಿಹಾನಾ, ಸಿಎನ್ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು. ಇದೀಗ ವಿದೇಶಾಂಗ ವ್ಯವಹಾರ ಸಚಿವಾಲಯ ಇದಕ್ಕೆ ಪ್ರತಿಕ್ರಿಯಿಸಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications