ದೆಹಲಿ ಪತ್ರಿಕಾಗೋಷ್ಠಿಯಲ್ಲಿ ವಿಶ್ವಸುಂದರಿಯ ನುಡಿಮುತ್ತುಗಳು!
ನವದೆಹಲಿ, ನವೆಂಬರ್ 28: ನನ್ನ ದೇಶಕ್ಕೆ ಹೆಮ್ಮೆ ಪಡುವಂತೆ ಮಾಡುವುದಕ್ಕಿಂತ ಸಾರ್ಥಕ ಕ್ಷಣ ಬೇರೊಂದಿಲ್ಲ. ಅಂಥ ಕ್ಷಣ ನನಗೆ ಒದಗಿದ್ದು ನನ್ನ ಪುಣ್ಯ ಎಂದು ವಿಶ್ವಸುಂದರಿ ಮಾನುಷಿ ಚಿಲ್ಲರ್ ಹೆಮ್ಮೆಯಿಂದ ಹೇಳಿದರು.
ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ತಮ್ಮ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಎಲ್ಲ ಭಾರತೀಯರಿಗೂ ಧನ್ಯವಾದ ಅರ್ಪಿಸಿದರು.

"ಒಬ್ಬ ವೈದ್ಯ ಇರಬಹುದು, ಅಥವಾ ವಿಶ್ವಸುಂದರಿ ಇರಬಹುದು ಎಲ್ಲರ ಉದ್ದೇಶವೂ, 'ವಿಶ್ವವನ್ನು ಮತ್ತಷ್ಟು ಸುಧಾರಣೆಯತ್ತ ಕೊಂಡೊಯ್ಯುವುದೇ ಆಗಿದೆ" ಎಂದು ಅವರ ಇದೇ ಸಂದರ್ಭದಲ್ಲಿ ಹೇಳಿದರು.
ಭಾರತ ಬದಲಾಗುತ್ತಿದೆ. ಕೆಲವು ಮೌಢ್ಯ ಆಚರಣೆಗಳು ಈಗಾಗಲೇ ಮರೆಯಾಗಿವೆ ಎಂದು ನನಗೆ ಸಂತೋಷವಾಗುತ್ತಿದೆ. ನನ್ನ ದೇಶ ನನ್ನಿಂದ ಹೆಮ್ಮೆಪಡುವಂತೆ ಮಾಡುವುದಕ್ಕಿಂತ ಸಾರ್ಥಕ ಭಾವ ಬೇರೊಂದಿಲ್ಲ. ನನಗೆ ಅಂಥ ಅವಕಾಶ ಸಿಕ್ಕಿದ್ದು ಅದೃಷ್ಟ ಎಂದು 17 ವರ್ಷದ ನಂತರ ಭಾರತಕ್ಕೆ ಮತ್ತೊಮ್ಮೆ ವಿಶ್ವಸುಂದರಿ ಕಿರೀಟವನ್ನು ತಂದಿಟ್ಟ ಮಾನುಷಿ ಚಿಲ್ಲರ್ ಹೇಳಿದರು.
ತ್ರಿವಳಿ ತಲಾಕ್ ಬಗ್ಗೆ ಮಾತನಾಡಿದ ಅವರು, "ಮದುವೆ ಎಂಬುದು ವಿಶೇಷವಾದ ಸ್ನೇಹ. ಅದು ಇಬ್ಬರ ನಡುವೆ ಸಮಾನವಾಗಿ ಹಂಚಿಕೆಯಾಗಬೇಕು. ಸಂಬಂಧದಲ್ಲಿ ಒಂದೇ ವ್ಯಕ್ತಿಗೆ ಹೆಚ್ಚಿನ ಒಡದೆತನ ನೀಡುವುದಕ್ಕೆ ಸಾಧ್ಯವಿಲ್ಲ. ಮನೆಯಲ್ಲಿ ಒಬ್ಬ ಮಹಿಳೆಗೆ ಗೌರವ ನೀಡುವುದನ್ನು ಕಲಿತರೆ, ಸಮಾಜದಲ್ಲೂ ಮಹಿಳೆಗೆ ಗೌರವ ನೀಡುವುದು ಹೇಗೆಂಬುದು ತಿಳಿಯುತ್ತದೆ" ಎಂದರು.
ನವೆಂಬರ್ 18 ರಂದು ನಡೆದ ವಿಶ್ವ ಸುಂದರಿ ಸ್ಪರ್ಧೆಯ ಕೊನೆಯ ಸುತ್ತಿನಲ್ಲಿ ಜಯಗಳಿಸಿ, 2000 ನೇ ಇಸವಿಯ(ಪ್ರಿಯಾಂಕಾ ಚೋಪ್ರಾ) ನಂತರ ಭಾರತಕ್ಕೆ ವಿಶ್ವಸುಂದರಿ ಪಟ್ಟ ದಕ್ಕಲಿಲ್ಲ ಎಂಬ ಕೊರತೆಯನ್ನು ನೀಗಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications