ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಎಂಜೆ ಅಕ್ಬರ್ ಮಾನನಷ್ಟ ಮೊಕದ್ದಮೆ
ನವದೆಹಲಿ, ಅಕ್ಟೋಬರ್ 15 : ಕೇಂದ್ರ ಸಚಿವ ಎಂಜೆ ಅಕ್ಬರ್ ಅವರು, ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊರಿಸಿರುವ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ಸೋಮವಾರ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಕೆಲಸದ ಸ್ಥಳದಲ್ಲಿ ಆಗುತ್ತಿರುವ ಲೈಂಗಿಕ ದೌರ್ಜನ್ಯದ ವಿರುದ್ಧ ಭಾರತದಾದ್ಯಂತ #MeToo ಚಳವಳಿ ಗರೆಗೆದರುತ್ತಿದ್ದಂತೆ, ಹನ್ನೊಂದಕ್ಕೂ ಹೆಚ್ಚು ಪತ್ರಕರ್ತೆಯರು, ಏಷ್ಯನ್ ಏಜ್ ನ ಮಾಜಿ ಸಂಪಾದಕ ಎಂಜೆ ಅಕ್ಬರ್ ವಿರುದ್ಧ ಸಿಡಿದೆದ್ದಿದ್ದು, ಏಷ್ಯನ್ ಏಜ್ ನಲ್ಲಿ ತಮ್ಮ ಮೇಲಾದ ಕಿರುಕುಳವನ್ನು ಬಯಲಿಗೆಳೆದಿದ್ದಾರೆ.
ಆರೋಪಗಳ ಹಿನ್ನೆಲೆಯಲ್ಲಿ ಅಕ್ಬರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಡ ಹೇರಿತ್ತು. ರಾಜೀನಾಮೆಯ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದ ಅಕ್ಬರ್ ಅವರು, ಎಲ್ಲ ಆರೋಪಗಳನ್ನು ಪರಿಶೀಲಿಸಿ ತಮ್ಮ ವಕೀಲರು ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ ಎಂದು ಅವರು ಭಾನುವಾರ ನುಡಿದಿದ್ದರು. ಇದೀಗ ಕರಂಜಾವಾಲಾ ಅಂಡ್ ಕಂಪನಿಯ ಮೂಲಕ ಕೇಸನ್ನು ದಾಖಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ 499 ಸೆಕ್ಷನ್ ಅಡಿಯಲ್ಲಿ ಆರೋಪಿ (ಪ್ರಿಯಾ ರಮಣಿ) ವಿರುದ್ಧ ಸೂಕ್ತ ವಿಚಾರಣೆ ನಡೆಸಿ, ಕ್ರಮ ಜರುಗಿಸಬೇಕು, ತಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅಕ್ಬರ್ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿರುವ ಎಂಜೆ ಅಕ್ಬರ್ ಅವರು ವಾರಗಳ ಕಾಲ ಆಫ್ರಿಕಾ ಪ್ರವಾಸದಲ್ಲಿದ್ದರು. ಆಗಲೇ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳ ಸುರಿಮಳೆಯಾಗುತ್ತಿತ್ತು. ಇದರ ಬಗ್ಗೆ ಚಕಾರವೆತ್ತದ ಅವರು, ವಾಪಸ್ ಬರುತ್ತಿದ್ದಂತೆ, ನನ್ನ ಮೇಲೆ ಯಾವುದೇ ಸಾಕ್ಷ್ಯವಿಲ್ಲದೆ, ತಳಬುಡವಿಲ್ಲದ ಆರೋಪ ಹೊರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆ ಇನ್ನೂ ಕೆಲವೇ ತಿಂಗಳುಗಳು ಇರುವಾಗ, ತಮ್ಮ ಇಮೇಜ್ ಗೆ ಧಕ್ಕ ತರಬೇಕೆಂಬ ಉದ್ದೇಶದಿಂದ ಸಲ್ಲದ ಆರೋಪಗಳನ್ನು ಹೊರಿಸಲಾಗುತ್ತಿದೆ, ತಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು ಏಷ್ಯನ್ ಏಜ್ ನ ಮಾಜಿ ಸಂಪಾದಕ ಅಕ್ಬರ್. ಅವರ ವಿರುದ್ಧ ಅಕ್ಟೋಬರ್ 8ರಂದು ಪ್ರಕಟಿಸಲಾಗಿರುವ ಟ್ವೀಟ್ ನಲ್ಲಿ ಪ್ರಿಯಾ ರಮಣಿ ಅವರು ಆರೋಪ ಹೊರಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications