ಮಾನವಸಂಪನ್ಮೂಲ ಸಚಿವಾಲಯ(HRD)ದ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ
ನವದೆಹಲಿ, ಜುಲೈ.29: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ(Ministry of Human Resource and Development)ದ ಹೆಸರನ್ನು ಶಿಕ್ಷಣ ಸಚಿವಾಲಯ(Ministry of Education) ಎಂದು ಮರುನಾಮಕರಣ ಮಾಡಲಾಗಿದೆ.
ಕೇಂದ್ರ ಸಚಿವ ಸಂಪುಟವು ಹೆಚ್ಆರ್ ಡಿ ಮರುನಾಮಕರಣಕ್ಕೆ ಅನುಮೋದನೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಬುಧವಾರ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಸಚಿವಾಲಯದ ಹೆಸರನ್ನು ಬದಲಾಯಿಸುವಂತೆ ಶಿಫಾರಸ್ಸು ಮಾಡಲಾಗಿತ್ತು.
ಕಳೆದ 1985ರಲ್ಲಿ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ರಚಿಸಲಾಗಿತ್ತು. ಅದೇ ಸಚಿವಾಲಯಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣಗೊಳಿಸಿದೆ.

ಶಿಕ್ಷಣ ಸಚಿವಾಲಯದ ಹೆಸರು ಬದಲಾಯಿಸಿದ್ದ ರಾಜೀವ್ ಗಾಂಧಿ:
ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಮತ್ತೆ ಬದಲಾಯಿಸುವಂತೆ ಇಸ್ರೋದ ಮಾಜಿ ಮುಖ್ಯಸ್ಥ ಕೆ.ಕಸ್ತೂರಿ ರಂಗನ್ ನೇತೃತ್ವದ ತಜ್ಞರ ತಂಡವು ಶಿಫಾರಸ್ಸು ಮಾಡಿದೆ. ಆರ್ಎಸ್ಎಸ್ ಸಲ್ಲಿಸಿದ ಅಫಿಡಿವಿಟ್ ನಲ್ಲಿಯೂ ಈ ಬಗ್ಗೆ ಉಲ್ಲೇಖಿಸಲಾಗಿದೆ. 1985ರಲ್ಲಿ ಕೆಲವು ಜನರು ಅಂದಿನ ಪ್ರಧಾನಮಂತ್ರಿ ರಾಜೀವ್ ಗಾಂಧಿ ಅವರನ್ನು ತಪ್ಪು ದಾರಿಗೆ ಎಳೆಯುವುದಕ್ಕಾಗಿ ಶಿಕ್ಷಣ ಸಚಿವಾಲಯಕ್ಕೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಂದು ಹೆಸರು ಬದಲಾಯಿಸಿದ್ದರು.
ಕೇಂದ್ರ ಸರ್ಕಾರವು ಸಚಿವಾಲಯದ ಹೆಸರನ್ನು ಬದಲಾಯಿಸಿದ ಹಿಂದಿನ ಉದ್ದೇಶ ಈ ಸಚಿವಾಲಯವು ಕೇವಲ ಶಿಕ್ಷಣ ಮತ್ತು ಕಲಿಕೆಗೆ ಸಂಬಂಧಿಸಿದಂತೆ ಹೆಚ್ಚು ನಿಗಾ ವಹಿಸುವುದೇ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
1986ರಲ್ಲಿ ದೇಶದಲ್ಲಿ ಜಾರಿಗೊಳಿಸಿದ ಶಿಕ್ಷಣ ನೀತಿಯನ್ನು 1992ರಲ್ಲಿ ಪರಿಷ್ಕರಿಸಲಾಗಿದ್ದು, ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲಕರವಾಗಿತ್ತು. ಶಿಕ್ಷಣ ಹಕ್ಕು ಕಾಯ್ದೆ 2009 ಅಡಿಯಲ್ಲಿ 3 ರಿಂದ 18 ವರ್ಷದ ವಿದ್ಯಾರ್ಥಿಗಳ ಶಾಲಾ ಶಿಕ್ಷಣ ಪಠ್ಯಕ್ರಮದಲ್ಲಿ ವಿಷಯದ ಹೊರೆ ಕಡಿಮೆ ಮಾಡಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications