ಮೋದಿ ಭದ್ರತೆಗೆ ಮತ್ತಷ್ಟು ಎನ್ಎಸ್ಜಿ ಕಮಾಂಡೋಗಳು
ನವದೆಹಲಿ, ನ.11 : ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ರಕ್ಷಣೆಗೆ ಹೆಚ್ಚಿನ ಎನ್ಎಸ್ ಜಿ ಕಮಾಂಡೋಗಳನ್ನು ನೇಮಿಸಲು ಒಪ್ಪಿಗೆ ನೀಡಿದೆ. ಆದರೆ, ವಿಶೇಷ ಭದ್ರತಾ ಪಡೆಗಳ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ದೆಹಲಿಯಲ್ಲಿ ಸೋಮವಾರ ಮಾತನಾಡಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ)ಯ 108 ಕಮಾಂಡೋ ಪಡೆಗಳು ಭದ್ರತೆ ನೀಡುತ್ತಿವೆ. ಅದನ್ನು ಮತ್ತಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಆದರೆ, ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರಿಗೆ ವಿಶೇಷ ಭದ್ರತಾ ಪಡೆ (ಎಸ್ ಪಿಜಿ)ಪಡೆ ಮೂಲಕ ರಕ್ಷಣೆ ನೀಡುವುದು ಸಾಧ್ಯವಿಲ್ಲ. ಕಾನೂನು ಸಹ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಿಂಧೆ ಹೇಳಿದರು. ಎನ್ಎಸ್ಜಿಯೊಂದಿಗೆ ಗುಜರಾತ್ ಪೊಲೀಸರು ಮೋದಿ ಅವರ ಭದ್ರತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಶಿಂಧೆ ಹೇಳಿದರು.
ಬಿಹಾರದ ಪಾಟ್ನಾದಲ್ಲಿ ನರೇಂದ್ರ ಮೋದಿ ಅವರ ಸಮಾವೇಶದ ಸಂದರ್ಭದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಮತ್ತು ಖಲಿಸ್ತಾನ ಉಗ್ರರು ಮೋದಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ಮೋದಿ ಅವರಿಗೆ ಎಸ್ ಪಿಜಿ ಭದ್ರತೆ ಒದಗಿಸಬೇಕೆಂದು ಬಿಜೆಪಿ ಒತ್ತಾಯಿಸಿತ್ತು. (ಮೋದಿ ಹತ್ಯೆಗೆ ಖಲಿಸ್ಥಾನಿ ಉಗ್ರರು)
ಈ ಬೇಡಿಕೆಯನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರಿಗೆ ಈಗಿರುವ 108 ಎನ್ಎಸ್ಜಿ ಪಡೆಗಳ ಕಮಾಂಡೋಗಳನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು. ಸದ್ಯ ಎನ್ಎಸ್ಜಿ ಕಮಾಂಡೋಗಳಿಂದ ಮೂರು ಹಂತದ ಭದ್ರತೆ ಪಡೆದಿರುವ ಮೋದಿ ಅವರ ಭದ್ರತೆಗೆ ಮತ್ತಷ್ಟು ಕಮಾಂಡೋಗಳು ಆಗಮಿಸಲಿದ್ದಾರೆ.
ನರೇಂದ್ರ ಮೋದಿ ನ.17ರಂದು ಬೆಂಗಳೂರಿನಲ್ಲಿ ಭಾರತ ಗೆಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿತ್ತು. ಆದ್ದರಿಂದ ನರೇಂದ್ರ ಮೋದಿ ಸಮಾವೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ. ಮೋದಿ ಸಮಾವೇಶ ನಡೆಯುವ ಅರಮನೆ ಮೈದಾನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಸಮಾವೇಶಕ್ಕೆ ಒಂದು ವಾರ ಬಾಕಿ ಇರುವಂತೆಯೇ ಭದ್ರತೆಯ ಉಸ್ತುವಾರಿ ಕೈಗೊಂಡಿದ್ದಾರೆ. (ಅರಮನೆ ಮೈದಾನ ಪೊಲೀಸ್ ವಶಕ್ಕೆ)
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications