ಮೋದಿ ಭದ್ರತೆಗೆ ಮತ್ತಷ್ಟು ಎನ್ಎಸ್ಜಿ ಕಮಾಂಡೋಗಳು
ನವದೆಹಲಿ, ನ.11 : ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ರಕ್ಷಣೆಗೆ ಹೆಚ್ಚಿನ ಎನ್ಎಸ್ ಜಿ ಕಮಾಂಡೋಗಳನ್ನು ನೇಮಿಸಲು ಒಪ್ಪಿಗೆ ನೀಡಿದೆ. ಆದರೆ, ವಿಶೇಷ ಭದ್ರತಾ ಪಡೆಗಳ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
ದೆಹಲಿಯಲ್ಲಿ ಸೋಮವಾರ ಮಾತನಾಡಿದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗಾಗಲೇ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ)ಯ 108 ಕಮಾಂಡೋ ಪಡೆಗಳು ಭದ್ರತೆ ನೀಡುತ್ತಿವೆ. ಅದನ್ನು ಮತ್ತಷ್ಟು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಆದರೆ, ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಅವರಿಗೆ ವಿಶೇಷ ಭದ್ರತಾ ಪಡೆ (ಎಸ್ ಪಿಜಿ)ಪಡೆ ಮೂಲಕ ರಕ್ಷಣೆ ನೀಡುವುದು ಸಾಧ್ಯವಿಲ್ಲ. ಕಾನೂನು ಸಹ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಿಂಧೆ ಹೇಳಿದರು. ಎನ್ಎಸ್ಜಿಯೊಂದಿಗೆ ಗುಜರಾತ್ ಪೊಲೀಸರು ಮೋದಿ ಅವರ ಭದ್ರತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದಾರೆ ಎಂದು ಶಿಂಧೆ ಹೇಳಿದರು.
ಬಿಹಾರದ ಪಾಟ್ನಾದಲ್ಲಿ ನರೇಂದ್ರ ಮೋದಿ ಅವರ ಸಮಾವೇಶದ ಸಂದರ್ಭದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ನಂತರ ಮತ್ತು ಖಲಿಸ್ತಾನ ಉಗ್ರರು ಮೋದಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ಮೋದಿ ಅವರಿಗೆ ಎಸ್ ಪಿಜಿ ಭದ್ರತೆ ಒದಗಿಸಬೇಕೆಂದು ಬಿಜೆಪಿ ಒತ್ತಾಯಿಸಿತ್ತು. (ಮೋದಿ ಹತ್ಯೆಗೆ ಖಲಿಸ್ಥಾನಿ ಉಗ್ರರು)
ಈ ಬೇಡಿಕೆಯನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ ನರೇಂದ್ರ ಮೋದಿ ಅವರಿಗೆ ಈಗಿರುವ 108 ಎನ್ಎಸ್ಜಿ ಪಡೆಗಳ ಕಮಾಂಡೋಗಳನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು. ಸದ್ಯ ಎನ್ಎಸ್ಜಿ ಕಮಾಂಡೋಗಳಿಂದ ಮೂರು ಹಂತದ ಭದ್ರತೆ ಪಡೆದಿರುವ ಮೋದಿ ಅವರ ಭದ್ರತೆಗೆ ಮತ್ತಷ್ಟು ಕಮಾಂಡೋಗಳು ಆಗಮಿಸಲಿದ್ದಾರೆ.
ನರೇಂದ್ರ ಮೋದಿ ನ.17ರಂದು ಬೆಂಗಳೂರಿನಲ್ಲಿ ಭಾರತ ಗೆಲ್ಲಿಸಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ರಾಜ್ಯ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿತ್ತು. ಆದ್ದರಿಂದ ನರೇಂದ್ರ ಮೋದಿ ಸಮಾವೇಶಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ. ಮೋದಿ ಸಮಾವೇಶ ನಡೆಯುವ ಅರಮನೆ ಮೈದಾನವನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು, ಸಮಾವೇಶಕ್ಕೆ ಒಂದು ವಾರ ಬಾಕಿ ಇರುವಂತೆಯೇ ಭದ್ರತೆಯ ಉಸ್ತುವಾರಿ ಕೈಗೊಂಡಿದ್ದಾರೆ. (ಅರಮನೆ ಮೈದಾನ ಪೊಲೀಸ್ ವಶಕ್ಕೆ)
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications