ಮುಫ್ತಿ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲ: ರಾಜನಾಥ್ ಸಿಂಗ್
ನವದೆಹಲಿ, ಮಾ.2: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಉದಯವಾದ ಮೊದಲ ದಿನವೇ ಪಾಕ್ ಹಾಗೂ ಪ್ರತ್ಯೇಕವಾದಿಗಳ ಪರ ಸಿಎಂ ಮುಫ್ತಿ ಅವರು ನೀಡಿದ ಹೇಳಿಕೆ ಬಿಜೆಪಿಗೆ ಆಘಾತ ತಂದಿದೆ. ರಾಜ್ಯಸಭೆ, ಲೋಕಸಭೆ ಯಲ್ಲಿ ಸೋಮವಾರ ಇದೇ ಗದ್ದಲ ಸದನದ ಕಲಾಪವನ್ನು ನುಂಗಿದೆ. ಮುಫ್ತಿ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಅವರ ವಿವಾದಾತ್ಮಕ ಹೇಳಿಕೆಗೆ ತಮ್ಮ ಸಹಮತ ಇಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ತಮ್ಮ ನಿಲುವನ್ನು ಸದನದಲ್ಲಿ ಮಂಡಿಸಿದ್ದಾರೆ. ಮುಫ್ತಿ ಹೇಳಿಕೆಗೆ ಪ್ರತಿ ಸ್ಪಷ್ಟನೆ ನೀಡಿದರು.
ಕಣಿವೆ ರಾಜ್ಯದಲ್ಲಿ ಶಾಂತಿಯುವ ಚುನಾವಣೆ ನಡೆಸಲು ಚುನಾವಣಾ ಆಯೋಗ, ಭದ್ರತಾ ಸೇನೆ, ಸಂಸದೀಯ ಸಮಿತಿ ಮತ್ತು ರಾಜ್ಯದ ಜನರಿಗೆ ಸಲ್ಲುತ್ತದೆ. ನಾನು ಪ್ರಧಾನಿಯವರೊಂದಿಗೆ ಚರ್ಚಿಸಿ ಅವರ ಸಹಮತದಿಂದಲೆ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಲೋಕಸಭೆಯಲ್ಲಿ ವಿಪಕ್ಷಗಳ ವಿರೋಧದ ನಡುವೆ ಹೇಳಿದ್ದಾರೆ.
ಸಯೀದ್ ಹೇಳಿಕೆ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಯಶಸ್ವಿಯಾಗಿ ನಡೆಯುವುದಕ್ಕೆ ಅವಕಾಶ ಕಲ್ಪಿಸಿದ್ದಕ್ಕಾಗಿ ಹುರಿಯತ್, ಪಾಕಿಸ್ತಾನ ಮತ್ತು ಉಗ್ರಗಾಮಿಗಳನ್ನು ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿ ಮುಫ್ತಿ ಮುಹಮ್ಮದ್ ಸಯೀದ್ ಅವರು ಭಾನುವಾರ ಹೇಳಿದ್ದರು.

ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತನ್ನ ಮೊದಲ ಸುದ್ದಿಗೋಷ್ಠಿಯಲ್ಲಿನ ಅವರ ಈ ಹೇಳಿಕೆಗೆ ಪ್ರತಿಪಕ್ಷಗಳಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಮಿತ್ರಪಕ್ಷ ಬಿಜೆಪಿ ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದೆ.
ಒಮರ್ ಅಬ್ದುಲ್ಲಾ ಖಂಡನೆ: ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಈ ವಿಷಯದಲ್ಲಿ ಬಿಜೆಪಿ ನಿಲುವನ್ನು ಪ್ರಶ್ನಿಸಿದ್ದಾರೆ.
,'ಜಮ್ಮು- ಕಾಶ್ಮೀರದಲ್ಲಿ ಚುನಾವಣೆಗೆ ಪಾಕಿಸ್ತಾನವು ಅವಕಾಶ ಕಲ್ಪಿಸಿದೆ'ಎಂಬ ನಿಮ್ಮ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಪಡೆಗಳು ಮತ್ತು ಚುನಾವಣಾ ಸಿಬ್ಬಂದಿಯ ಪಾತ್ರವನ್ನು ವಿವರಿಸಿ ಎಂದು ಅವರು ಟ್ವೀಟಿಸಿದ್ದಾರೆ.
Dear @BJP4India please explain roll of security forces & polling staff considering your CM just said "Pakistan allowed elections in J&K".
— Omar Abdullah (@abdullah_omar) March 1, 2015 ಯಾವುದೇ ವ್ಯಕ್ತಿಯ ಹೇಳಿಕೆಗಳಿಗಿಂತ ಜಮ್ಮು-ಕಾಶ್ಮೀರದ ಜನತೆಯ ಭವಿಷ್ಯ ತುಂಬ ಮಹತ್ತ್ವದ್ದಾಗಿದೆ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ ಅವರು ಎಚ್ಚರಿಕೆಯ ಪ್ರತಿಕ್ರಿಯೆ ನೀಡಿದರು.
ಇದಕ್ಕೂ ಮುನ್ನ ನೂತನ ಸರಕಾರದ ಕಾರ್ಯಸೂಚಿಯನ್ನು ಅನಾವರಣಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಯೀದ್, ರಾಜ್ಯದ ಜನತೆಯ ಹೃದಯಗಳನ್ನು ಮತ್ತು ಮನಸ್ಸುಗಳನ್ನು ಗೆಲ್ಲುವ ಮೂಲಕ ಮೈತ್ರಿಕೂಟವು ಚರಿತ್ರೆಗೆ ತಿರುವು ನೀಡಬೇಕೆಂದು ನಾವು ಬಯಸುತ್ತೇವೆ ಎಂದಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications