ಭಾರತದ ಭಾಗ ಚೀನಾ ಪಾಲಾಗಿದೆ; ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ನವದೆಹಲಿ, ಫೆಬ್ರುವರಿ 11: ಲಡಾಖ್ ಗಡಿ ಪರಿಸ್ಥಿತಿ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ ಕುರಿತು ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರ ಭಾರತದ ಭಾಗವನ್ನು ಚೀನಾಗೆ ಹಸ್ತಾಂತರಿಸುತ್ತಿದೆ ಹಾಗೂ ಅದನ್ನು ಪ್ರಶ್ನಿಸಲು ವಿರೋಧ ಪಕ್ಷಗಳಿಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಗುರುವಾರ ರಕ್ಷಣಾ ಸಚಿವರು ರಾಜ್ಯ ಸಭೆಯಲ್ಲಿ ಲಡಾಖ್ ಗಡಿ ಪರಿಸ್ಥಿತಿ ಕುರಿತು ಪ್ರಸ್ತಾಪ ಮಾಡಿದ್ದು, ಲಡಾಖ್ನ ಪ್ಯಾಂಗಾಂಗ್ ತ್ಸೊ ಸರೋವರದ ಪ್ರದೇಶದಿಂದ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಭಾರತ ಮತ್ತು ಚೀನಾ ಒಪ್ಪಂದಕ್ಕೆ ಬಂದಿವೆ ಎಂದು ತಿಳಿಸಿದ್ದರು.
ಉಭಯ ರಾಷ್ಟ್ರಗಳ ಸಂಧಾನ ಮಾತುಕತೆ ಬಳಿಕ ಗಡಿಯಲ್ಲಿ ಸೇನಾ ಶಿಬಿರಗಳ ಪುನಾರಚನೆ ಮಾಡಿಕೊಳ್ಳಲಾಗುತ್ತಿದೆ. ಪ್ಯಾಂಗಾಂಗ್ ತ್ಸೋ ಸರೋವರದ ಉತ್ತರ ದಂಡೆಯ ಫಿಂಗರ್ 8ರ ಪೂರ್ವದಲ್ಲಿ ಚೀನಾ ಸೇನೆ ಇರಿಸಲಿದೆ. ಭಾರತವು ಅದೇ ಪ್ಯಾಂಗಾಂಗ್ ತ್ಸೋ ಸರೋವರದ ಫಿಂಗರ್ 3ರ ಬಳಿ ಶಾಶ್ವತ ನೆಲೆಗಳನ್ನು ಸ್ಥಾಪಿಸಲಿದೆ ಎಂದು ಹೇಳಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಫಿಂಗರ್ 3ರ ಬಳಿ ಶಾಶ್ವತ ನೆಲೆಗಳನ್ನು ಸ್ಥಾಪಿಸಲಿರುವುದಾಗಿ ರಕ್ಷಣಾ ಸಚಿವರು ತಿಳಿಸಿದ್ದಾರೆ. ಆದರೆ ಫಿಂಗರ್ 4 ನಮ್ಮ ನೆಲೆ. ನಾವು ಅಲ್ಲಿರಬೇಕು. ಫಿಂಗರ್ 4ಇಂದ ಫಿಂಗರ್ 3ಗೆ ಸರಿಯಲಾಗಿದೆ. ನಮ್ಮ ಜಾಗವನ್ನು ಮೋದಿ ಸರ್ಕಾರ ಚೀನಾಗೆ ಬಿಟ್ಟುಕೊಟ್ಟಿದೆ ಎಂದು ಪ್ರಶ್ನಿಸಿದ್ದಾರೆ.
ಭಾರತೀಯ ಪಡೆಗಳನ್ನು ಏಕೆ ವಾಪಸ್ ಕರೆಸಿಕೊಳ್ಳಲಾಗುತ್ತಿದೆ? ಪ್ರಧಾನಿ ನರೇಂದ್ರ ಮೋದಿ ಭಾರತದ ಭಾಗವನ್ನು ಚೀನಾಗೆ ನೀಡುತ್ತಿದ್ದಾರೆ ಎಂದು ಮೋದಿ ಸರ್ಕಾರವನ್ನು ಟೀಕಿಸಿ ಮಾತನಾಡಿದರು.
ಚೀನೀಯರ ವಿರುದ್ಧ ನಿಲಲ್ಲು ಸಾಧ್ಯವಾಗದೇ ಪ್ರಧಾನಿ ಹೇಡಿಯಂತಾಗಿದ್ದಾರೆ. ಪ್ರಧಾನಿ ನಮ್ಮ ಸೇನೆಯ ತ್ಯಾಗಕ್ಕೆ ಬೆಲೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಉಭಯ ದೇಶಗಳ ಪಡೆಗಳು ದೈನಂದಿನ ಗಸ್ತು ಚಟುವಟಿಕೆಗಳಿಂದ ದೂರ ಇರುವುದು ಸೇರಿದಂತೆ ಪ್ಯಾಂಗಾಂಗ್ ತ್ಸೊ ಸರೋವರದ ಉತ್ತರ ತೀರದಲ್ಲಿ ಯಾವುದೇ ಸೇನಾ ಚಟುವಟಿಕೆಗಳನ್ನು ನಡೆಸದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದೆಂದು ಒಪ್ಪಂದಕ್ಕೆ ಬರಲಾಗಿದೆ ಎಂದು ಕೂಡ ರಾಜನಾಥ್ ಸಿಂಗ್ ತಿಳಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications