ರಂಜಾನ್ ಪ್ರಾರ್ಥನೆ ಕುರಿತು ರಾಜ್ಯಗಳಿಗೆ ಎಚ್ಚರಿಸಿದ ಕೇಂದ್ರ ಸರ್ಕಾರ
ದೆಹಲಿ, ಏಪ್ರಿಲ್ 21: ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದ್ದು, ಜನರು ಗುಂಪು ಸೇರಬಾರದು ಹಾಗೂ ಧಾರ್ಮಿಕ ಪ್ರಾರ್ಥನಾಕೂಟಗಳಿಗೆ ಅವಕಾಶ ಇರುವುದಿಲ್ಲ. ಆದರೂ, ಕೆಲವು ಕಡೆ ಪೊಲೀಸರ ಕಣ್ಣು ತಪ್ಪಿಸಿ ಮಸೀದಿಯಲ್ಲಿ ನಮಾಜ್ ಮಾಡಿರುವ ಘಟನೆ ವರದಿಯಾಗಿದೆ.
ಇದೀಗ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಚ್ಚರಿಸಿದೆ. ಗುರುವಾರದಿಂದ ರಂಜಾನ್ ಹಬ್ಬ ಆರಂಭವಾಗುತ್ತಿದೆ. ಹಾಗಾಗಿ, ಎಲ್ಲಿಯೂ ಸಾಮೂಹಿಕ ಪ್ರಾರ್ಥನೆಗಳು ನಡೆಯದಂತೆ ಎಚ್ಚರ ವಹಿಸಿ ಎಂದು ಸೂಚಿಸಿದೆ.
ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ರಂಜಾನ್ ಹಬ್ಬದಲ್ಲೂ ಜನರು ಮನೆಯಲ್ಲಿ ಇದ್ದು ಪ್ರಾರ್ಥನೆ ಮಾಡಿಕೊಳ್ಳಬೇಕು ಎಂದು ಮುಸ್ಲಿಂ ಮುಖಂಡರ ಮೂಲಕ ಜನರಿಗೆ ಮನವರಿಕೆ ಮಾಡಿ ಕೊಡಲು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕೇಂದ್ರ ಸಲಹೆ ನೀಡಿದೆ.

ಮುಸ್ಲಿಂ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು, ಸಾಮೂಹಿಕ ಪ್ರಾರ್ಥನೆಗಳಿಗೆ ಅವಕಾಶ ಕೊಡದಂತೆ ಗಮನ ಹರಿಸಿ ಎಂದು ಸರ್ಕಾರ ನಿರ್ದೇಶಿಸಿದೆ.
ರಂಜಾನ್ ಆರಂಭವಾದ ಮೇಲೆ ಕೆಲವು ಕಡೆ, ಮಸೀದಿಗೆ ತೆರಳಿ ಸಮೂಹಿಕ ಪ್ರಾರ್ಥನೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾಹಿತಿ, ಕೇಂದ್ರ ಸರ್ಕಾರಕ್ಕೆ ಲಭ್ಯವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯಗಳು ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.
ಈಗಾಗಲೇ ಕೇಂದ್ರ ಸರ್ಕಾರ ಹೊರಡಿಸಿರುವ ಲಾಕ್ಡೌನ್ ಮಾರ್ಗಸೂಚಿ ಪ್ರಕಾರ, ಮೇ 3ರ ತನಕ ಯಾವುದೇ ಧಾರ್ಮಿಕ ಸಭೆ, ಕಾರ್ಯಕ್ರಮಗಳು ನಡೆಸುವಂತಿಲ್ಲ ಎಂದು ಗೃಹ ಇಲಾಖೆ ಆದೇಶ ನೀಡಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications