ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಜಾದ್ ಹಿಂದ್ ಸರ್ಕಾರದ ವಜ್ರ ಮಹೋತ್ಸವದಲ್ಲಿ ಮೋದಿ ಭಾಷಣ

|
Google Oneindia Kannada News

ನವದೆಹಲಿ, ಅಕ್ಟೋಬರ್ 21: ಸ್ವಾತಂತ್ರ್ಯ ಸೇನಾನಿ, ನೇತಾಜಿ ಸುಭಾಷ್​ಚಂದ್ರ ಬೋಸ್ ಅವರು ನಮ್ಮ ಸ್ವಾತಂತ್ರ್ಯಕ್ಕಾಗಿ ಅಂದು ಕಂಡ ಕನಸು ನನಸಾಗಿಸಬೇಕಿದೆ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹೇಳಿದರು

ಆಜಾದ್ ಹಿಂದ್ ಫೌಜ್​ನ ತಾತ್ಕಾಲಿಕ ಸರ್ಕಾರದ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಭಾನುವಾರದಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಶಿರಡಿ ಬಾಬಾ ಆಶೀರ್ವಾದ ಪಡೆದು ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ ಮೋದಿಶಿರಡಿ ಬಾಬಾ ಆಶೀರ್ವಾದ ಪಡೆದು ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ ಮೋದಿ

ಆಜಾದ್ ಹಿಂದ್ ಫೌಜ್ ನೀಡಿದ ಸೇವೆ, ಕೊಡುಗೆಗಳನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

Modi hoists national flag at Red Fort on 75th Anniversary of Azad Hind government

'ದೇಶ ಸೇವೆ ಸಲ್ಲಿಸಿದವರನ್ನು ಬಿಜೆಪಿ ಗೌರವಿಸುತ್ತದೆ. ಕಾಂಗ್ರೆಸ್ ಆಡಳಿತದಲ್ಲಿ ಕಡೆಗಣಿಸಲಾದ ದೇಶದ ಮಹಾನ್ ನಾಯಕರ ಕೊಡುಗೆಗಳನ್ನು ನಮ್ಮ ಸರ್ಕಾರ ಸಂಭ್ರಮಿಸುತ್ತದೆ' ಎಂದು ಮೋದಿ ಹೇಳಿದರು.

ಡಿಜಿಟಲೀಕರಣ: ಮೋದಿ ಸರ್ಕಾರದ ಬಹುದೊಡ್ಡ ಕೊಡುಗೆಡಿಜಿಟಲೀಕರಣ: ಮೋದಿ ಸರ್ಕಾರದ ಬಹುದೊಡ್ಡ ಕೊಡುಗೆ

ಅಂಬೇಡ್ಕರ್, ವಲ್ಲಭಭಾಯಿ ಪಟೇಲ್ ಅವರನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಸರಕಾರದ ಡಿಜಿಟಲ್ ವ್ಯವಹಾರದ ಜಾದೂ ಭಾರತವನ್ನು ಬದಲಿಸಿದ್ದು ಹೇಗೆ?ಮೋದಿ ಸರಕಾರದ ಡಿಜಿಟಲ್ ವ್ಯವಹಾರದ ಜಾದೂ ಭಾರತವನ್ನು ಬದಲಿಸಿದ್ದು ಹೇಗೆ?

1943ರ ಅ.21ರಂದು ದೇಶದ ಮೊದಲ ಸ್ವತಂತ್ರ ಸರ್ಕಾರ ರಚನೆಯನ್ನು ಬೋಸ್ ಘೋಷಿಸಿದ್ದರು. ಇದನ್ನು ಆಜಾದ್ ಹಿಂದ್ ಗವರ್ನ್​ವೆುಂಟ್ ಎಂದು ಕರೆದಿದ್ದರು. ಈಗ ಈ ಸರ್ಕಾರದ 75ನೇ ವರ್ಷಾಚರಣೆ ಸಂಭ್ರಮ ಆಚರಿಸಲಾಗುತ್ತಿದೆ.

English summary
Prime Minister Narendra Modi on Sunday hoisted the national flag at Red Fort to celebrate the 75th anniversary of the formation of the government of 'free India'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X