ಯಾವ ಹೊಗಳಿಕೆಯೂ ಸಾಲದು; ಕಿಡ್ನಿ ದಾನ ಮಾಡಿದ ಮಹಿಳೆಗೆ ಮೋದಿ ಮೆಚ್ಚುಗೆ ಪತ್ರ
ನವದೆಹಲಿ, ಫೆಬ್ರುವರಿ 15: ಅನಾಥ ವ್ಯಕ್ತಿಗೆ ಮೂತ್ರಪಿಂಡ ದಾನ ಮಾಡಿದ್ದ ಕೋಲ್ಕತ್ತಾ ಮೂಲದ ಮಹಿಳೆಗೆ ಪ್ರಧಾನಿ ಮೋದಿ ಅವರಿಂದ ಮೆಚ್ಚುಗೆ ಪತ್ರ ಬಂದಿದೆ. ಈ ನಿಸ್ವಾರ್ಥ ದಾನಕ್ಕೆ ಯಾವ ಹೊಗಳಿಕೆಯೂ ಸಮವಾಗಲಾಗದು ಎಂದು ಮೋದಿ ಮಹಿಳೆಗೆ ಪತ್ರದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂಗಾಂಗ ದಾನದ ಮಹತ್ವದ ಬಗ್ಗೆ ಮೋದಿಯವರ ಭಾಷಣದಿಂದ ಪ್ರೇರೇಪಿತಳಾಗಿ ತಾನು ಕಿಡ್ನಿ ದಾನ ಮಾಡಿರುವುದಾಗಿ ಕೋಲ್ಕತ್ತಾದ ಮನಾಶಿ ಹಲ್ದೆರ್ (48) ಎಂಬ ಮಹಿಳೆ ತಿಳಿಸಿದ್ದಾರೆ. 2014ರಲ್ಲೇ ಮಹಿಳೆಯು ಕಿಡ್ನಿ ದಾನ ಮಾಡಿದ್ದು, ಮೋದಿ ಅವರಿಗೆ ಕೆಲವೇ ತಿಂಗಳ ಹಿಂದೆ ಪತ್ರ ಬರೆದಿದ್ದರು. ಪತ್ರಕ್ಕೆ ಉತ್ತರ ಬಂದಿದ್ದು, ಮಹಿಳೆ ಸಂತಸ ವ್ಯಕ್ತಪಡಿಸಿದ್ದಾರೆ.
"ಒಂದು ಅಮೂಲ್ಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿರುವ ನಿಮ್ಮ ಉದಾತ್ತ ಕಾರ್ಯದ ಬಗ್ಗೆ ತಿಳಿದು ನನಗೆ ತುಂಬಾ ಸಂತೋಷವಾಯಿತು. ನಿಮ್ಮ ಈ ನಿಸ್ವಾರ್ಥ ದಾನಕ್ಕೆ ಯಾವ ಹೊಗಳಿಕೆಯೂ ಸಮವಾಗದು. ತ್ಯಾಗ ಮತ್ತು ಸಹಾನುಭೂತಿ ಎಂದಿಗೂ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯದ ಮೂಲ" ಎಂದು ಮಹಿಳೆಗೆ ಉತ್ತರಿಸಿದ್ದಾರೆ.

ಹೊಸ ಜೀವ, ಜೀವನ ನೀಡುವ ಅಂಗಾಂಗ ದಾನ ಅತಿ ದೊಡ್ಡ ದಾನ. ನಮ್ಮ ದೇಶದಲ್ಲಿ ಇದರ ಅಗತ್ಯವಿರುವ ಸಾಕಷ್ಟು ಮಂದಿ ಇದ್ದಾರೆ. ಅಂಗಾಂಗ ದಾನಕ್ಕಿಂತ ದೊಡ್ಡದು ಯಾವುದೂ ಇಲ್ಲ ಎಂದಿದ್ದಾರೆ. ನಿಮ್ಮ ಈ ದಾನ ಸ್ಫೂರ್ತಿದಾಯಕವಾಗಿದೆ. ಇನ್ನಷ್ಟು ಮಂದಿ ಅಂಗಾಂಗ ದಾನಕ್ಕೆ ಮುಂದೆ ಬರುವಂತೆ ಪ್ರೇರೇಪಿಸುತ್ತದೆ ಎಂದು ಶ್ಲಾಘಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications