ಮೋದಿ ಎಂದೂ ಟೀ ಮಾರಿಲ್ಲ, ಅದು ಚುನಾವಣೆ ಗಿಮಿಕ್ ಅಷ್ಟೆ: ತೊಗಾಡಿಯಾ
ಆಗ್ರಾ, ಜನವರಿ 22: ಚುನಾವಣೆಯಲ್ಲಿ ಲಾಭ ಪಡೆಯುವುದಕ್ಕಾಗಿ ಮೋದಿ ಟೀ ಮಾರುತ್ತಿದ್ದರು ಎಂದು ಸುಳ್ಳು ಹೇಳಿದ್ದಾರೆ ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷದ್ ಅಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಹೇಳಿದ್ದಾರೆ. ಇವರು ಮೋದಿ ಅವರ ಬಹು ಕಾಳದ ಗೆಳೆಯರು ಕೂಡಾ.
'ನಾನು ಮತ್ತು ನರೇಂದ್ರ ಮೋದಿ 43 ವರ್ಷದ ಗೆಳೆಯರು ಆದರೆ ಮೋದಿ ಟೀ ಮಾರುವುದನ್ನು ಎಂದೂ ನೋಡಿಲ್ಲ ಎಂದು ವಿಶ್ವಹಿಂದೂ ಪರಿಷದ್ನ ಮಾಜಿ ಅಧ್ಯಕ್ಷರೂ ಆಗಿರುವ ತೊಗಾಡಿಯಾ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಮತ್ತು ಆರ್ಎಸ್ಎಸ್ಗೆ ರಾಮಮಂದಿರ ಕಟ್ಟುವ ಉದ್ದೇಶವೇ ಇಲ್ಲ ಎಂದಿರುವ ಅವರು, ಬೇಕೆಂದೇ ರಾಮ ಮಂದಿರ ನಿರ್ಮಾಣವನ್ನು ಮುಂದಕ್ಕೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮೋದಿ ಹೇಳಿಕೆ ಬಳಿಕ ಆರ್ಎಸ್ಎಸ್ ಭಯ್ಯಾಜಿ ಜೋಷಿ ಸಹ ರಾಮ ಮಂದಿರ ನಿರ್ಮಾಣಕ್ಕೆ ಇನ್ನೂ ಐದು ವರ್ಷ ಬೇಕು ಎಂದು ಹೇಳಿದ್ದಾರೆ, ಬಿಜೆಪಿ ಮತ್ತು ಆರ್ಎಸ್ಎಸ್ ಹಿಂದೂಗಳನ್ನು ಕತ್ತಲಲ್ಲಿ ಇರಿಸಿದ್ದಾರೆ ಆದರೆ ಈಗ ಹಿಂದುಗಳು ಈಗ ಎಚ್ಚೆತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ತ್ರಿವಳಿ ತಲಾಖ್ ಮಸೂದೆಗೆ ಅಷ್ಟೋಂದು ಶ್ರಮವಹಿಸಿದ ಮೋದಿ ರಾಮಮಂದಿರದ ಬಗ್ಗೆ ಏಕೆ ಅಷ್ಟು ಆಸಕ್ತಿ ತೋರುತ್ತಿಲ್ಲ ಎಂದು ಪ್ರಶ್ನೆ ಮಾಡಿರುವ ಅವರು, ಮೋದಿ ಇನ್ನೊಮ್ಮೆ ಪ್ರಧಾನ ಮಂತ್ರಿ ಆದರೂ ರಾಮ ಮಂದಿರ ನಿರ್ಮಾಣ ಮಾಡುವುದಿಲ್ಲ. ಬಿಜೆಪಿ ಮತ್ತು ಆರ್ಎಸ್ಎಸ್ಗೆ ರಾಮಮಂದಿರ ಜೀವದ್ರವ್ಯ ಇದ್ದಂತೆ ಎಂದು ಟೀಕಿಸಿದ್ದಾರೆ.
ಫೆಬ್ರವರಿ 9 ಕ್ಕೆ ಹಿಂದುಗಳ ಪಕ್ಷವನ್ನು ಸ್ಥಾಪಿಸುತ್ತಿರುವುದಾಗಿ ಘೋಷಿಸಿರುವ ತೊಗಾಡಿಯಾ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮರುದಿನದಿಂದಲೇ ರಾಮ ಮಂದಿರ ನಿರ್ಮಾಣದ ಕಾರ್ಯ ಆರಂಭ ಮಾಡಲಾಗುವುದು. ಕಾಶ್ಮೀರದಲ್ಲಿ ಆರ್ಟಿಕಲ್ 35ಎ ಅನ್ನು ಸಹ ಕೂಡಲೇ ರದ್ದು ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರವೀಣ್ ಭಾಯ್ ತೊಗಾಡಿಯಾ ಅವರ ಈ ಹೇಳಿಕೆಯು ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಪ್ರಮುಖ ಸುದ್ದಿಪತ್ರಿಕೆಗಳಲ್ಲಿ ಪ್ರಕಟವಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications