ಸಿದ್ದಗಂಗಾ ಶ್ರೀಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ ಮೋದಿ
ನವದೆಹಲಿ, ಜನವರಿ 18: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಶ್ರೀಗಳು ಶೀಘ್ರ ಚೇತರಿಸಿಕೊಳ್ಳಲು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.
ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳು ಇದೀಗ ಕೃತಕ ಉಸಿರಾಟದಲ್ಲಿದ್ದಾರೆ, ಕಳೆದ ವಾರ ಒಂದೆರೆಡು ಗಂಟೆಗಳಾದರೂ ಕೃತಕ ಉಸಿರಾಟವಿಲ್ಲದೆ ಅವರೇ ಉಸಿರಾಡುತ್ತಿದ್ದರು. ಆದರೆ ಇದೀಗ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೃತಕವಾಗಿ ಉಸಿರಾಡುವಂತಾಗಿದೆ. ಶ್ರೀಗಳು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ ಪ್ರಾರ್ಥಿಸಿದ್ದಾರೆ.
ಶ್ರೀಗಳಿಗೆ ಮಠದಲ್ಲೇ ಸಿದ್ಧವಾಗಿರುವ ಐಸಿಯು ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಮೆರಿಕದಿಂದ ಬಂದಿರುವ ಸ್ವಾಮೀಜಿ ಶಿಷ್ಯರಾಗಿರುವ ಡಾ. ನಾಗಣ್ಣ ವಿಶೇಷ ವೈದ್ಯರ ತಂಡದೊಂದಿಗೆ ಸೇರಿಕೊಂಡು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಶ್ರೀಗಳ ಆರೋಗ್ಯ ಇನ್ನಷ್ಟು ಸುಧಾರಿಸಲಿ ಎಂದು ಸಿದ್ದಲಿಂಗ ಬೆಟ್ಟದ ಮೇಲಿರುವ ಸಿದ್ದಲಿಂಗೇಶ್ವರನಿಗೆ ಗುರುವಾರ ರಾತ್ರಿ ವಿಶೇಷ ಪೂಜೆ ಸಲ್ಲಿಸಲಾಯ್ತು. ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ 8 ಮಂದಿ ಸ್ವಾಮೀಜಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ.
— Narendra Modi (@narendramodi) January 17, 2019
ಶ್ರೀಗಳಿಗೆ 111 ವರ್ಷ ವಯಸ್ಸಾಗಿದ್ದು ಈಗಾಗಲೇ 11 ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗಳು ನಡೆದಿವೆ. ನರೇಂದ್ರ ಮೋದಿಯವರು 'ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ' ಎಂದು ಟ್ವೀಟ್ ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications