ನೂತನ ಸಂಸತ್ ಕಟ್ಟಡದಲ್ಲಿ ರಾಷ್ಟ್ರೀಯ ಲಾಂಛನ ಅನಾವರಣಗೊಳಿಸಿದ ಮೋದಿ
ನವದೆಹಲಿ, ಜು.11: ಹೊಸ ಸಂಸತ್ ಭವನದ ಮೇಲ್ಛಾವಣಿಯ ಮೇಲೆ ಹಾಕಲಾದ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದರು.
ನಾಲ್ಕು ಸಿಂಹದ ಮುಖಗಳುಳ್ಳ ರಾಷ್ಟ್ರೀಯ ಲಾಂಛನವನ್ನು ಕಂಚಿನಿಂದ ಮಾಡಲಾಗಿದ್ದು ಒಟ್ಟು 9,500 ಕಿಲೋಗ್ರಾಂ ತೂಕ ಮತ್ತು 6.5 ಮೀಟರ್ ಎತ್ತರವಿದೆ. ಹೊಸ ಪಾರ್ಲಿಮೆಂಟ್ ಕಟ್ಟಡದ ಸೆಂಟ್ರಲ್ ಫೋಯರ್ನ ಮೇಲ್ಭಾಗದಲ್ಲಿ ಇದನ್ನು ನಿರ್ಮಿಸಲಾಗಿದೆ. ಲಾಂಛನಕ್ಕೆ ಪೂರಕವಾಗಿ ಸುಮಾರು 6,500 ಕೆಜಿ ತೂಕದ ಉಕ್ಕಿನ ಪೋಷಕಿನ ರಚನೆಯನ್ನು ನಿರ್ಮಿಸಲಾಗಿದೆ.
ಹೊಸ ಸಂಸತ್ತಿನ ಕಟ್ಟಡದ ಛಾವಣಿಯ ಮೇಲೆ ರಾಷ್ಟ್ರೀಯ ಲಾಂಛನದ ಪರಿಕಲ್ಪನೆಯ ಲಾಂಛನದ ರೇಖಾಚಿತ್ರ ಮತ್ತು ಪ್ರಕ್ರಿಯೆಯು ಕ್ಲೇ ಮಾಡೆಲಿಂಗ್ ಅಥವಾ ಕಂಪ್ಯೂಟರ್ ಗ್ರಾಫಿಕ್ನಿಂದ ಮೂಲಕ ಕಂಚಿನ ಎರಕಹೊಯ್ದ ಮತ್ತು ಪಾಲಿಶ್ ಮಾಡುವವರೆಗೆ ಎಂಟು ವಿಭಿನ್ನ ತಯಾರಿಕೆ ಹಂತದ ಮೂಲಕ ನಿರ್ಮಾಣ ಮಾಡಲಾಗಿದೆ. ಈ ವೇಳೆ ಹೊಸ ಸಂಸತ್ತಿನ ಕೆಲಸದಲ್ಲಿ ತೊಡಗಿರುವ ಕೆಲಸಗಾರರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಪುರಿ ಉಪಸ್ಥಿತರಿದ್ದರು.

ನೂತನ ಸಂಸತ್ ಕಟ್ಟಡ ಯೋಜನೆಗೆ ಸರ್ಕಾರ 1,250 ಕೋಟಿ ರುಪಾಯಿ ವೆಚ್ಚ ಮಾಡಿದೆ. ಇದು ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದ 977 ಕೋಟಿಗಿಂತ ವೆಚ್ಚವು ಶೇ. 29 ರಷ್ಟು ಹೆಚ್ಚಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ಟಾ ಯೋಜನೆಯ ಪ್ರಮುಖ ಭಾಗವಾಗಿರುವ ಈ ಕಟ್ಟಡವನ್ನು ಟಾಟಾ ಪ್ರಾಜೆಕ್ಟ್ಸ್ ನಿರ್ಮಿಸುತ್ತಿದೆ.
ರಾಷ್ಟ್ರಪತಿ ಭವನದಿಂದ ಅತ್ಯಲ್ಪ ದೂರದಲ್ಲಿರುವ 13 ಎಕರೆ ಪ್ರದೇಶದಲ್ಲಿ ಪ್ರಸ್ತಾವಿತ ನಾಲ್ಕು ಅಂತಸ್ತಿನ ಕಟ್ಟಡವನ್ನು ಈ ವರ್ಷ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಪೂರ್ಣಗೊಳಿಸಲು ಆರಂಭದಲ್ಲಿ ನಿರೀಕ್ಷಿಸಲಾಗಿತ್ತು. ನಂತರ ಗಡುವನ್ನು ಅಕ್ಟೋಬರ್ಗೆ ಹೆಚ್ಚುವರಿಯಾಗಿ ನೀಡಲಾಯಿತು.

-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications