ಮೋದಿ ಸಂಪುಟದ ಶ್ರೀಮಂತ ಸಚಿವರು ಹರ್ಸಿಮ್ರತ್ ಕೌರ್ ಬಾದಲ್!
ನವದೆಹಲಿ, ಜೂನ್ 01: ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಕೇಂದ್ರ ಸಚಿವ ಸಂಪುಟದ 58(ಪ್ರಧಾನಿಯನ್ನೂ ಸೇರಿ) ಮಂತ್ರಿಗಳಲ್ಲಿ 51 ಮಂತ್ರಿಗಳು ಕೋಟ್ಯಧಿಪತಿಗಳು. ಅವರಲ್ಲಿ 22 ಜನರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ!
ಮೇ 30 ರಂದು ಪ್ರಮಾಣ ವಚನ ಸ್ವೀಕರಿಸಿದ ಸಚಿವರಲ್ಲಿ ಆಹಾರ ಸಂಸ್ಕರಣ ಖಾತೆ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅತ್ಯಂತ ಶ್ರೀಮಂತ ಸಚಿವೆ ಎನ್ನಿಸಿದ್ದಾರೆ. ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದವರಲ್ಲಿ ಹರ್ಸಿಮ್ರತ್ ಕೌರ್ ಬಾದಲ್, ಪಿಯೂಶ್ ಗೋಯಲ್, ರಾವ್ ಇಂದ್ರಜಿತ್ ಸಿಂಗ್, ಅಮಿತ್ ಶಾ ಸಹ ಇದ್ದಾರೆ.
ಬಾದಲ್ ತಮ್ಮ ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ನೀಡಿದ ಒಟ್ಟು ಆಸ್ತಿಯ ಮೌಲ್ಯ 217 ಕೋಟಿ ರೂ. ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು 95 ಕೋಟಿ ರೂ. ಆಸ್ತಿ ಹೊಂದಿದ್ದರೆ, ರಾವ್ ಇಂದ್ರಜಿತ್ ಸಿಂಗ್ 42 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸಂಪುಟದ ಸಚಿವರಾದ ಪ್ರತಾಪ್ ಚಂದ್ರ ಸಾರಂಗಿ, ಬಾಬುಲ್ ಸುಪ್ರಿಯೋ, ಗಿರಿರಾಜ್ ಸಿಂಗ್, ನಿತ್ಯಾನಂದ ರೈ, ಅಮಿತ್ ಶಾ, ಪ್ರಲ್ಹಾದ್ ಶೋಷಿ ಸೇರಿದಂತೆ 22 ಜನರ ವಿರುದ್ಧ ಕ್ರಿನಲ್ ಕೇಸುಗಳು ದಾಖಲಾಗಿವೆ.
ಭಯೋತ್ಪಾದನೆ, ಕೊಲೆ, ಅತ್ಯಾಚಾರ, ದರೋಡೆ, ಕೋಮುಗಲಭೆ, ಅಪಹರಣ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ.
ಇನ್ನು ಸಂಪುಟದ 8 ಸಚಿವರ ವಿದ್ಯಾರ್ಹತೆ 10 ನೇ ತರಗತಿಯಿಂದ 12ನೇ ತರಗತಿ. 47 ಕ್ಕೂ ಹೆಚ್ಚು ಸಚಿವರು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದಿರುವುದಾಗಿ ಘೋಷಿದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications