ಮೋದಿ ಸಂಪುಟದ ಶ್ರೀಮಂತ ಸಚಿವರು ಹರ್ಸಿಮ್ರತ್ ಕೌರ್ ಬಾದಲ್!
ನವದೆಹಲಿ, ಜೂನ್ 01: ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಕೇಂದ್ರ ಸಚಿವ ಸಂಪುಟದ 58(ಪ್ರಧಾನಿಯನ್ನೂ ಸೇರಿ) ಮಂತ್ರಿಗಳಲ್ಲಿ 51 ಮಂತ್ರಿಗಳು ಕೋಟ್ಯಧಿಪತಿಗಳು. ಅವರಲ್ಲಿ 22 ಜನರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ!
ಮೇ 30 ರಂದು ಪ್ರಮಾಣ ವಚನ ಸ್ವೀಕರಿಸಿದ ಸಚಿವರಲ್ಲಿ ಆಹಾರ ಸಂಸ್ಕರಣ ಖಾತೆ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅತ್ಯಂತ ಶ್ರೀಮಂತ ಸಚಿವೆ ಎನ್ನಿಸಿದ್ದಾರೆ. ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದವರಲ್ಲಿ ಹರ್ಸಿಮ್ರತ್ ಕೌರ್ ಬಾದಲ್, ಪಿಯೂಶ್ ಗೋಯಲ್, ರಾವ್ ಇಂದ್ರಜಿತ್ ಸಿಂಗ್, ಅಮಿತ್ ಶಾ ಸಹ ಇದ್ದಾರೆ.
ಬಾದಲ್ ತಮ್ಮ ನಾಮಪತ್ರ ಸಲ್ಲಿಕೆಯ ಸಮಯದಲ್ಲಿ ನೀಡಿದ ಒಟ್ಟು ಆಸ್ತಿಯ ಮೌಲ್ಯ 217 ಕೋಟಿ ರೂ. ರೈಲ್ವೇ ಸಚಿವ ಪಿಯೂಶ್ ಗೋಯಲ್ ಅವರು 95 ಕೋಟಿ ರೂ. ಆಸ್ತಿ ಹೊಂದಿದ್ದರೆ, ರಾವ್ ಇಂದ್ರಜಿತ್ ಸಿಂಗ್ 42 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಸಂಪುಟದ ಸಚಿವರಾದ ಪ್ರತಾಪ್ ಚಂದ್ರ ಸಾರಂಗಿ, ಬಾಬುಲ್ ಸುಪ್ರಿಯೋ, ಗಿರಿರಾಜ್ ಸಿಂಗ್, ನಿತ್ಯಾನಂದ ರೈ, ಅಮಿತ್ ಶಾ, ಪ್ರಲ್ಹಾದ್ ಶೋಷಿ ಸೇರಿದಂತೆ 22 ಜನರ ವಿರುದ್ಧ ಕ್ರಿನಲ್ ಕೇಸುಗಳು ದಾಖಲಾಗಿವೆ.
ಭಯೋತ್ಪಾದನೆ, ಕೊಲೆ, ಅತ್ಯಾಚಾರ, ದರೋಡೆ, ಕೋಮುಗಲಭೆ, ಅಪಹರಣ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ.
ಇನ್ನು ಸಂಪುಟದ 8 ಸಚಿವರ ವಿದ್ಯಾರ್ಹತೆ 10 ನೇ ತರಗತಿಯಿಂದ 12ನೇ ತರಗತಿ. 47 ಕ್ಕೂ ಹೆಚ್ಚು ಸಚಿವರು ಪದವಿ ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದಿರುವುದಾಗಿ ಘೋಷಿದಿದ್ದಾರೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications