Get Updates
Get notified of breaking news, exclusive insights, and must-see stories!

ಮನಿ ಲಾಂಡರಿಂಗ್ ಪ್ರಕರಣ: ನ್ಯಾಷನಲ್ ಹೆರಾಲ್ಡ್ ಕಚೇರಿಯ ಸೀಲ್‌ ಮಾಡಿದ ಜಾರಿ ನಿರ್ದೇಶನಾಲಯ

ನವದೆಹಲಿ, ಆಗಸ್ಟ್ 3: ಜಾರಿ ನಿರ್ದೇಶನಾಲಯವು ಬುಧವಾರ ಕಾಂಗ್ರೆಸ್ ಪಕ್ಷದ ನೇತೃತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಚೇರಿ ಆವರಣದಲ್ಲಿರುವ ಯಂಗ್ ಇಂಡಿಯನ್ (ವೈಐ) ಕಚೇರಿಯನ್ನು ಸೀಲ್ ಮಾಡಿದೆ ಮತ್ತು ಏಜೆನ್ಸಿಯಿಂದ ಪೂರ್ವಾನುಮತಿ ಇಲ್ಲದೆ ಕಚೇರಿ ತೆರೆಯದಂತೆ ಆದೇಶಿಸಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯ ಹೊರಗೆ ಹೆಚ್ಚುವರಿ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ.

ಮಂಗಳವಾರ ನಡೆದ ದಾಳಿಯ ವೇಳೆ ಅಧಿಕೃತ ಪ್ರತಿನಿಧಿಗಳು ಹಾಜರಾಗದ ಕಾರಣ "ಸಾಕ್ಷ್ಯವನ್ನು ಸಂರಕ್ಷಿಸಲು" ತಾತ್ಕಾಲಿಕ ಮುದ್ರೆಯನ್ನು ಹಾಕಲಾಗಿದೆ. ನ್ಯಾಷನಲ್ ಹೆರಾಲ್ಡ್ ಕಚೇರಿಯ ಉಳಿದ ಭಾಗವು ಬಳಕೆಗೆ ಮುಕ್ತವಾಗಿದೆ ಎಂದು ಹೇಳಿದೆ ಜಾರಿ ನಿರ್ದೇಶನಾಲಯ ಸ್ಪಷ್ಟನೆ ನೀಡಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ ಒಂದು ವಾರದ ನಂತರ, ಸೋಮವಾರ ರಾಷ್ಟ್ರೀಯ ಹೆರಾಲ್ಡ್-ಎಜೆಎಲ್-ಯಂಗ್ ಇಂಡಿಯನ್ ಡೀಲ್‌ನಲ್ಲಿ ನಡೆಯುತ್ತಿರುವ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ನವದೆಹಲಿಯಲ್ಲಿರಯವ ಪತ್ರಿಕೆಯ ಮುಖ್ಯ ಕಚೇರಿ ಮತ್ತು ಇತರ 11 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿತು.

ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ " ಹಣಕ ಮೂಲಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪುರಾವೆಗಳನ್ನು ಸಂಗ್ರಹಿಸಲು" ಹುಡುಕಾಟ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಹುಡುಕಾಟ ಮುಕ್ತಾಯವಾದ ನಂತರ ಸೀಲ್ ತೆರವು

ಹುಡುಕಾಟ ಮುಕ್ತಾಯವಾದ ನಂತರ ಸೀಲ್ ತೆರವು

"ತಪಾಸಣೆ ನಡೆಸಲು ಅವರ ಕಡೆಯಿಂದ ಯಾರೂ ಇಲ್ಲದ ಕಾರಣ ಯಂಗ್ ಇಂಡಿಯನ್ ಕಚೇರಿಗೆ ಮಾತ್ರ ತಾತ್ಕಾಲಿಕವಾಗಿ ಮೊಹರು ಹಾಕಲಾಗಿದೆ. ಪ್ರಧಾನ ಅಧಿಕಾರಿ ಮಲ್ಲಿಕಾರ್ಜುನ ಖರ್ಗೆ ಬಂದರು, ಆದರೆ ಪರಿಶೀಲನೆ ನಡೆಸದೆ ಆವರಣದಿಂದ ನಿರ್ಗಮಿಸಿದರು. ಅಧಿಕೃತ ವ್ಯಕ್ತಿ ಹಾಜರಾಗಿ, ಹುಡುಕಾಟವನ್ನು ಮುಕ್ತಾಯಗೊಳಿಸಿದ ನಂತರ ಸೀಲ್ ಅನ್ನು ತೆಗೆದುಹಾಕಲಾಗುತ್ತದೆ" ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿದೆ.

 ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜನೆ

ನ್ಯಾಷನಲ್ ಕಚೇರಿಯನ್ನು ಸೀಲ್ ಮಾಡಿದ್ದು ಮುಂಜಾಗ್ರತಾ ಕ್ರಮವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯ ಮುಂಭಾಗದಲ್ಲಿ ಹೆಚ್ಚುವರಿ ಪೊಲೀಸ್‌ ನಿಯೋಜನೆ ಮಾಡಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಇ.ಡಿ. ಅಧಿಕಾರಿಗಳು ಪ್ರಶ್ನೆ ಮಾಡುವ ಸಮಯದಲ್ಲಿ ಕಾಂಗ್ರೆಸ್ ಭಾರಿ ಪ್ರತಿಭಟನೆ ನಡೆಸಿದ್ದವು.


ಕಚೇರಿ ಸೀಲ್ ಮಾಡಿರುವುದರಿಂದ ಕಾಂಗ್ರೆಸ್‌ ಮತ್ತೆ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಹೆಚ್ಚುವರಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 2013ರಲ್ಲಿ ದಾಖಲಾಗಿದ್ದ ದೂರು

2013ರಲ್ಲಿ ದಾಖಲಾಗಿದ್ದ ದೂರು

ನ್ಯಾಷನಲ್ ಹೆರಾಲ್ಡ್ ಪ್ರಕರಣವು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಪಾದಿತ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದೆ. ಬಿಜೆಪಿಯ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು 2013ರಲ್ಲಿ ದೂರು ಸಲ್ಲಿಸಿದ್ದರು. ವಿಚಾರಣಾ ನ್ಯಾಯಾಲಯವು ಖಾಸಗಿ ಕ್ರಿಮಿನಲ್ ಆಧಾರದ ಮೇಲೆ ನಡೆಸಲಾದ ಆದಾಯ ತೆರಿಗೆ ಇಲಾಖೆಯ ತನಿಖೆಯನ್ನು ಗಮನಿಸಿದ ನಂತರ ಒಂಬತ್ತು ತಿಂಗಳ ಹಿಂದೆ ಪ್ರಕರಣ ದಾಖಲಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಆಸ್ತಿಯನ್ನು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ಗೆ (ವೈಐಎಲ್) ವಂಚನೆಯಿಂದ ವರ್ಗಾಯಿಸಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ನ್ಯಾಯಾಲಯಕ್ಕೆ ದೂರು ನೀಡಿದ್ದರು.

 ಪ್ರತಿಭಟನೆ ನಡುವೆಯೂ ಸೋನಿಯಾ ಗಾಂಧಿ ವಿಚಾರಣೆ

ಪ್ರತಿಭಟನೆ ನಡುವೆಯೂ ಸೋನಿಯಾ ಗಾಂಧಿ ವಿಚಾರಣೆ

ಜುಲೈ 27 ರಂದು ತನಿಖಾ ಸಂಸ್ಥೆಯು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ ಈ ದಾಳಿ ನಡೆಸಲಾಯಿತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋನಿಯಾ ಗಾಂಧಿ ಅವರನ್ನು ಇ.ಡಿ ಮೂರು ಸುತ್ತಿನ ತನಿಖೆ ನಡೆಸಿದೆ.

ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಸೋನಿಯಾ ಗಾಂಧಿ ತೊಡಗಿಸಿಕೊಂಡಿರುವ ಬಗ್ಗೆ ಸುಮಾರು 30 ಪ್ರಶ್ನೆಗಳಿಗೆ ಪಕ್ಷದ ಅಧ್ಯಕ್ಷರ ಪ್ರತಿಕ್ರಿಯೆಯನ್ನು ಕೇಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+