ಮನಿಲಾಂಡ್ರಿಂಗ್ ಕೇಸ್: ಸೋನಿಯಾ ಅಳಿಯ ರಾಬರ್ಟ್ ಗೆ ಷರತ್ತುಬದ್ಧ ಜಾಮೀನು
ನವದೆಹಲಿ, ಏಪ್ರಿಲ್ 01: ಮನಿ ಲಾಂಡ್ರಿಂಗ್ ಕೇಸಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಸಿಬಿಐನ ವಿಶೇಷ ನ್ಯಾಯಾಲಯವು ಇಂದು ರಾಬರ್ಟ್ ವಾದ್ರಾ ಹಾಗೂ ಮತ್ತೊಬ್ಬ ಆರೋಪಿ ಮನೋಜ್ ಅರೋರಾ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ತನಿಖಾಧಿಕಾರಿಗಳು ವಿಚಾರಣೆಗೆ ಕರೆದಾಗೆಲ್ಲ ಹಾಜರಾಗಬೇಕು, ಕೋರ್ಟ್ ಪೂರ್ವನುಮತಿ ಇಲ್ಲದೆ ವಿದೇಶಕ್ಕೆ ತೆರಳುವಂತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನಾಶ ಮಾಡುವಂತಿಲ್ಲ ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಇಬ್ಬರು ಆರೋಪಿಗಳು 5 ಲಕ್ಷ ರು ಮೌಲ್ಯದ ವಯಕ್ತಿಕ ಬಾಂಡ್ ಸಲ್ಲಿಸಿ ಜಾಮೀನು ಪಡೆಯಲು ಅರ್ಹರಾಗಿದ್ದಾರೆ.
Money laundering case: Robert Vadra and Manoj Arora have to furnish a personal bail bond of Rs. 5 lakhs. https://t.co/wOuETeW44Y
— ANI (@ANI) April 1, 2019
ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವದ್ರಾ ಅವರಿಗೆ ಜಾರಿ ನಿರ್ದೇಶನಾಲಯವು ಬಿಸಿ ಮುಟ್ಟಿಸಿತ್ತು. ಭೂ ಹಗರಣ, ಮನಿ ಲಾಂಡ್ರಿಂಗ್ ಗೆ ಸಂಬಂಧಿಸಿದಂತೆ ಮೊದಲಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ, ನಂತರ ದೇಶದ ವಿವಿಧೆಡೆ ವಾದ್ರಾ ಅವರ ಆಪ್ತರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ನಿರಂತರವಾಗಿ ಜಾರಿ ನಿರ್ದೇಶನಾಲಯ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದರು. ಜೊತೆಗೆ ಬಂಧನದಿಂದ ತಾತ್ಕಾಲಿಕ ರಿಲೀಫ್ ಪಡೆದಿದ್ದರು.

ಲಂಡನ್ ಮೂಲದ ಸಂಸ್ಥೆಗೆ 17.77 ಕೋಟಿ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ. ಇದೇ ಪ್ರಕರಣದಲ್ಲಿ ವಾದ್ರಾ ಆಪ್ತ ಮನೋಜ್ ಅರೋರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಲಂಡನ್ನಿನಲ್ಲಿ ವಾದ್ರಾ ಹೆಸರಿನಲ್ಲಿ 2 ಮನೆ, 6 ಫ್ಲಾಟ್ ಹಾಗೂ ಇನ್ನಿತರ ಆಸ್ತಿ ಹೊಂದಿದ್ದಾರೆ ಎಂದು ಜಾರಿನಿರ್ದೇಶನಾಲಯ ಮಾಹಿತಿ ಕಲೆ ಹಾಕಿ ತನಿಖೆ ನಡೆಸುತ್ತಿದೆ.
ರಾಬರ್ಟ್ ವಾದ್ರಾ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ವಾದ್ರಾ, ರಾಜಕೀಯ ಪ್ರವೇಶಕ್ಕೆ ಸಮಯ ಇನ್ನು ಕೂಡಿ ಬಂದಿಲ್ಲ. ನನಗೆ ಯಾವುದೇ ಆತುರವಿಲ್ಲ, ನಾನು ಮೊದಲು ಅರ್ಹತೆ ಪಡೆದುಕೊಳ್ಳಬೇಕಿದೆ ಎಂದು ಹೇಳಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications