Breaking: ಮಂಕಿಪಾಕ್ಸ್ ಹೊಸ ರೋಗವಲ್ಲ ಭಯಬೇಡ; ಆರೋಗ್ಯ ಸಚಿವ
ನವದೆಹಲಿ, ಆ.02: ಕೇರಳದಲ್ಲಿ ಹೊಸ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಬೆನ್ನಲ್ಲೇ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಇದು ಹೊಸ ರೋಗವಲ್ಲ, ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ದೇಶದಲ್ಲಿ ಪ್ರಸ್ತುತ ಏಳು ಮಂಕಿಪಾಕ್ಸ್ ಪ್ರಕರಣಗಳಿವೆ. ಕೇರಳದಲ್ಲಿ ಐದು ಮಂಕಿಪಾಕ್ಸ್ ಪ್ರಕರಣಗಳಿವೆ. ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಭಾರತವು ಹಂತ-ಹಂತವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದರು.
"ನಾವು ಕೊರೊನಾ ವೈರಸ್ನಿಂದ ಅತ್ಯುತ್ತಮ ಪಾಠಗಳನ್ನು ಕಲಿತಿದ್ದೇವೆ. ಈ ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ. ಸರಕಾರದಿಂದ ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

"ಭಾರತ ಮತ್ತು ಪ್ರಪಂಚಕ್ಕೆ ಮಂಕಿಪಾಕ್ಸ್ ಹೊಸ ರೋಗವಲ್ಲ. 1970 ರಿಂದ ಆಫ್ರಿಕಾದಿಂದ ಹಿಡಿದು ಜಗತ್ತಿನಲ್ಲಿ ಬಹಳಷ್ಟು ಪ್ರಕರಣಗಳು ಕಂಡುಬಂದಿವೆ. ವಿಶ್ವ ಆರೋಗ್ಯ ಸಂಸ್ಥೆ ಈ ಬಗ್ಗೆ ವಿಶೇಷ ಗಮನ ಹರಿಸಿದೆ. ಭಾರತದಲ್ಲೂ ಮಾನಿಟರಿಂಗ್ ಆರಂಭವಾಗಿದೆ'' ಎಂದರು.
ಈ ಹಿಂದೆ ಪ್ರಾಥಮಿಕವಾಗಿ ಆಫ್ರಿಕಾಕ್ಕೆ ಸೀಮಿತವಾಗಿದ್ದ ವೈರಸ್, ಈ ವರ್ಷ ಕನಿಷ್ಠ 75 ದೇಶಗಳು ಮತ್ತು ಪ್ರಾಂತ್ಯಗಳಿಂದ ವರದಿಯಾಗಿದೆ. WHO ಇತ್ತೀಚೆಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಿತ್ತು. ಜಾಗತಿಕವಾಗಿ 22,000 ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ದಾಖಲಾಗಿವೆ.
"ಪ್ರಪಂಚದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದಾಗ, ಭಾರತವು ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಕೇರಳದಲ್ಲಿ ಮೊದಲ ಪ್ರಕರಣ ವರದಿಯಾಗುವ ಮೊದಲು, ನಾವು ಎಲ್ಲಾ ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ನೀಡಿದ್ದೇವೆ. ಪ್ರಯಾಣಿಕರ ಸ್ಕ್ರೀನಿಂಗ್ ವರದಿಯನ್ನು ನಮಗೆ ಕಳುಹಿಸಬೇಕು ಎಂದು ನಾವು ಅಂತರರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಗಳಿಗೆ ಪತ್ರ ಬರೆದಿದ್ದೇವೆ' ಎಂದು ಕೇಂದ್ರ ಆರೋಗ್ಯ ಸಚಿವರು ರಾಜ್ಯಸಭೆಗೆ ತಿಳಿಸಿದರು.

ಕೇರಳ ರಾಜ್ಯದಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ ಮಂಗಳವಾರ ವರದಿಯಾಗಿದೆ. 30 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದ್ದು, ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಯುಎಇಯಿಂದ ಜುಲೈ 27 ರಂದು ಕೋಝಿಕೋಡ್ ವಿಮಾನ ನಿಲ್ದಾಣಕ್ಕೆ ಬಂದಿದ್ದರು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
WHO ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ ಆಗಿದೆ. ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್. ಪ್ರಾಯೋಗಿಕವಾಗಿ ಕಡಿಮೆ ತೀವ್ರವಾಗಿದ್ದರೂ ಸಿಡುಬಿನಂತೆಯೇ ರೋಗಲಕ್ಷಣಗಳನ್ನು ಹೊಂದಿದೆ.
ಮಂಕಿಪಾಕ್ಸ್ ವಿಶಿಷ್ಟವಾಗಿ ಜ್ವರ, ದದ್ದು ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳೊಂದಿಗೆ ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಸ್ವಯಂ-ಸೀಮಿತ ರೋಗವಾಗಿದ್ದು, ರೋಗಲಕ್ಷಣಗಳು ಎರಡರಿಂದ ನಾಲ್ಕು ವಾರಗಳವರೆಗೆ ಇರುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications