ಮುಂಗಾರು ಅಧಿವೇಶನ LIVE: ನೂತನ ಸ್ಪೀಕರ್ ನಮ್ಮ ಹೆಮ್ಮೆ ಎಂದ ಮೋದಿ
ನವದೆಹಲಿ, ಜೂನ್ 19: ಮುಂಗಾರು ಅಧಿವೇಶನದ ಮೂರನೇ ದಿನವಾದ ಬುಧವಾರ, ಹದಿನೇಳನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿ ಓಂ ಬಿರ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
2019 ರ ಲೋಕಸಭೆ ಚುನಾವಣೆಯ ನಂತರ ಭರ್ಜರಿ ಜನಾದೇಶದೊಂದಿಗೆ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿರುವುದರಿಂದ ಸಾಕಷ್ಟು ಮಹತ್ವ ಪಡೆದಿದೆ.
ಮೂರನೇ ದಿನವಾದ ಇಂದು ಸ್ಪೀಕರ್ ಆಯ್ಕೆಯ ಜೊತೆಗೆ ಇನ್ನಿತರ ಹಲವು ವಿಷಯಗಳು ಚರ್ಚೆಯಾಗುವ ಸಾಧ್ಯತೆ ಇದೆ.

ಈ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಬಜೆಟ್, ತ್ರಿವಳಿ ತಲಾಕ್ ಸೇರಿದಂತೆ ಅನೇಕ ವಿಧೇಯಕಗಳ ಕುರಿತು ಚರ್ಚೆಯಾಗಲಿದೆ. ಸಂಸತ್ ಕಲಾಪದ ಮೊದಲೆರಡು ದಿನಗಳಲ್ಲಿ 542 ನೂತನ ಸದಸ್ಯರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅವರಲ್ಲಿ ಹಲವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದು, ಗೈರಾದ ಕೆಲವರ ಪ್ರಮಾಣ ವಚನ ಬಾಕಿ ಇದೆ.
"ಸ್ಪೀಕರ್ ಎಂದರೆ ನೀರಿನಲ್ಲಿರುವ ತಾವರೆಯ ಹಾಗೆ. ನೀವು ಬಿಜೆಪಿಯವರಿರವಬಹುದು. ಆದರೆ ನೀರಿಗೆ ಅಂತಿಕೊಳ್ಳದ ತಾವರೆಯ ಹಾಗಿರಬೇಕು" - ಟಿ.ಆರ್. ಬಾಲು, ಡಿಎಂಕೆ ಮುಖಂಡ
"ಕೆಳಮನೆಯ ಉಸ್ತುವಾರಿ ಹೊತ್ತಿರುವ ನೀವು ಅದರ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ಹೊಂದಿದ್ದೀರಿ. ಕಾಂಗ್ರೆಸ್ ಎಂದಿಗೂ ಇದರಲ್ಲಿ ಋಣಾತ್ಮಕ ಪಾತ್ರ ವಹಿಸುವುದಿಲ್ಲ ಎಂದು ನಾವು ಭರವಸೆ ನೀಡುತ್ತೇವೆ"- ಅಧೀರ್ ರಂಜನ್ ಚೌಧರಿ, ಕಾಂಗ್ರೆಸ್ ಪಕ್ಷದ ಲೋಕಸಭೆ ನಾಯಕ
"ಲೋಕಸಭೆಯಲ್ಲಿ ಎಂಥ ಸನ್ನಿವೇಶ ಎದುರಾದರೂ ಹೇಗೆ ನಗುನಗುತ್ತ ಅದನ್ನು ಸ್ವೀಕರಿಸಬೇಕು ಮತ್ತು ಹೇಗೆ ತಾಳ್ಮೆ ಕಳೆದುಕೊಳ್ಳದೆ ಇರಬೇಕು ಎಂಬುದನ್ನು ಈ ಹಿಂದಿನ ಸ್ಪೀಕರ್(ಸುಮಿತ್ರಾ ಮಹಾಜನ್) ತೋರಿಸಿಕೊಟ್ತಿದ್ದಾರೆ"- ನರೇಂದ್ರ ಮೋದಿ, ಪ್ರಧಾನಿ
"ಓಂ ಬಿರ್ಲಾ (ಸ್ಪೀಕರ್)ಅವರೊಂದಿಗೆ ನಾನು ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದು ನನಗೆ ವೈಯಕ್ತಿಕವಾಗಿ ನೆನಪಿದೆ. ಅವರು ಸಾರ್ವಜನಿಕ ಬದುಕಿನಲ್ಲಿ ಹಲವು ವರ್ಷಗಳಿಂದ ಇದ್ದವರು. ವಿದ್ಯಾರ್ಥಿಯಾಗಿದ್ದಾಗಿನಿಂದಲೂ ಅವರು ನಾಯಕರಾಗಿ ಬೆಳೆದು, ಸಮಾಜ ಸೇವೆಯಲ್ಲಿ ತೊಡಗಿದರು. ಇಂದಿಗೂ ಅವರು ಅದನ್ನು ಮುಂದುವರಿಸಿಕೊಂಡು ಬಂದಿದ್ದಾರೆ"- ನರೇಂದ್ರ ಮೋದಿ, ಪ್ರಧಾನಿ
ಲೋಕಸಭೆಯ ಹದಿನೇಳನೇ ಸ್ಪೀಕರ್ ಆಗಿ ರಾಜಸ್ಥಾನದ ಕೋಟಾ ಬಂಡಿ ಲೋಕಸಭಾ ಕ್ಷೇತ್ರದ ಸಂಸದ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ .
ನೂತನ್ ಸ್ಪೀಕರ್ ಅನ್ನು ಆಯ್ಕೆಯ ನಂತರ ಪ್ರಧಾನಿ ನರೇಂದ್ರ ಮೊದಿ ಅವರು ಬಿರ್ಲಾ ಅವರನ್ನು ಅಭಿನಂದಿಸಿ, 'ಅವರು ನಮ್ಮ ಹೆಮ್ಮೆ' ಎಂದರು.
ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಓಂ ಬಿರ್ಲಾ ಅವಿರೋಧವಾಗಿ ಆಯ್ಕೆಯಾದರು.
More From
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications