ಮುಂಗಾರು ಅಧಿವೇಶನ LIVE: ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣ
ನವದೆಹಲಿ, ಜೂನ್ 20: ಮುಂಗಾರು ಅಧಿವೇಶನದ ನಾಲ್ಕನೇ ದಿನವಾದ ಗುರುವಾರ, ಹದಿನೇಳನೇ ಲೋಕಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.
ಅಧಿವೇಶನದ 2ನೇದಿನದ ಅಪ್ಡೇಟ್ಸ್ : ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಎನ್ಡಿಎ ಅಭ್ಯರ್ಥಿ
2019 ರ ಲೋಕಸಭೆ ಚುನಾವಣೆಯ ನಂತರ ಭರ್ಜರಿ ಜನಾದೇಶದೊಂದಿಗೆ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಮುಂಗಾರು ಅಧಿವೇಶನ ಇದಾಗಿರುವುದರಿಂದ ಸಾಕಷ್ಟು ಮಹತ್ವ ಪಡೆದಿದೆ.
ಮುಂಗಾರು ಅಧಿವೇಶನ LIVE: ನೂತನ ಸ್ಪೀಕರ್ ನಮ್ಮ ಹೆಮ್ಮೆ ಎಂದ ಮೋದಿ
ಮೂರನೇ ದಿನವಾದ ನಿನ್ನೆ ಸ್ಪೀಕರ್ ಆಯ್ಕೆ ಬಡೆದಿತ್ತು. ಹದಿನೇಳನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ನೇಮಿಸಲಾಗಿತ್ತು.
ಈ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಬಜೆಟ್, ತ್ರಿವಳಿ ತಲಾಕ್ ಸೇರಿದಂತೆ ಅನೇಕ ವಿಧೇಯಕಗಳ ಕುರಿತು ಚರ್ಚೆಯಾಗಲಿದೆ. ಸಂಸತ್ ಕಲಾಪದ ಮೊದಲೆರಡು ದಿನಗಳಲ್ಲಿ 542 ನೂತನ ಸದಸ್ಯರು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಅವರಲ್ಲಿ ಹಲವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದು, ಗೈರಾದ ಕೆಲವರ ಪ್ರಮಾಣ ವಚನ ಬಾಕಿ ಇದೆ.