ಸಂಸತ್ ಮಂಗಾರು ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಓಂ ಬಿರ್ಲಾ
ನವದೆಹಲಿ, ಸಪ್ಟೆಂಬರ್.13: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದ ಸಿದ್ಧತೆಗಳನ್ನು ಸ್ವತಃ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪರಿಶೀಲನೆ ನಡೆಸಿದರು.
ನವದೆಹಲಿ ಸಂಸತ್ ಭವನಕ್ಕೆ ಭೇಟಿ ನೀಡಿದ ಲೋಕಸಭಾ ಸಭಾಪತಿ ಓಂ ಬಿರ್ಲಾ, ಕೊರೊನಾವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎನ್ನುವ ಬಗ್ಗೆ ಪರಿಶೀಲನೆ ನಡೆಸಿದರು.
ಸಪ್ಟೆಂಬರ್.14ರಿಂದ ಸಂಸತ್ ಉಭಯ ಕಲಾಪಗಳು ಆರಂಭವಾಗಲಿದೆ. ಮೊದಲ ದಿನ ಲೋಕಸಭೆ ಕಲಾಪ ಬೆಳಗ್ಗೆ 1 ರಿಂದ 3 ಗಂಟೆವರೆಗೂ ನಡೆಯಲಿದ್ದು, ರಾಜ್ಯಸಭಾ ಕಲಾಪ ಮಧ್ಯಾಹ್ನ 3 ರಿಂದ 7 ಗಂಟೆವರೆಗೂ ನಡೆಯಲಿದೆ. ಸಪ್ಟೆಂಬರ್.14ರ ನಂತರ ರಾಜ್ಯಸಭಾ ಕಲಾಪ ಬೆಳಗ್ಗೆ 1 ರಿಂದ 3 ಗಂಟೆವರಗೂ ಹಾಗೂ ಲೋಕಸಭಾ ಕಲಾಪ ಮಧ್ಯಾಹ್ನ 3 ರಿಂದ 7 ಗಂಟೆವರೆಗೂ ನಡೆಸಲು ಸಮಯ ನಿಗದಿಗೊಳಿಸಲಾಗಿದೆ.

ಕೊರೊನಾವೈರಸ್ ನಿಯಂತ್ರಣಕ್ಕೆ ನಿಯಮ ಪಾಲನೆ:
ಪ್ರತಿನಿತ್ಯ ಕೊರೊನಾವೈರಸ್ ಸೋಂಕಿನ ನಿಯಂತ್ರಣ ಕ್ರಮಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಂಸತ್ ಕಲಾಪ ನಡೆಸಲಾಗುತ್ತದೆ. ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಅಗತ್ಯವಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆರೋಗ್ಯ ಸಚಿವಾಲಯವು ಹೊರಡಿಸಿರುವ ಮಾರ್ಗಸೂಚಿಗಳೊಂದಿಗೆ ಯಾವ ರೀತಿ ಶಿಸ್ತುಕ್ರಮಗಳನ್ನು ಪಾಲನೆ ಮಾಡಬೇಕು ಎನ್ನುವುದರ ಕುರಿತು ಹಿರಿಯ ಅಧಿಕಾರಿಗಳಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಈಗಾಗಲೇ ನಿರ್ದೇಶನ ನೀಡಿದ್ದಾರೆ.
ಆರೋಗ್ಯಕರ ಚರ್ಚೆ ಬಗ್ಗೆ ಸ್ಪೀಕರ್ ವಿಶ್ವಾಸ:
ಕೊರೊನಾವೈರಸ್ ಬಿಕ್ಕಟ್ಟಿನ ನಡುವೆಯೂ ಸಂಸತ್ ಮುಂಗಾರು ಅಧಿವೇಶನವನ್ನು ನಡೆಸಲಾಗುತ್ತಿದ್ದು, ಸರ್ವ ಸದಸ್ಯರು ಭಾಗಿಯಾಗುವ ನಿರೀಕ್ಷೆಯಿದೆ. ಅಧಿವೇಶನ ಸಂದರ್ಭಗಳಲ್ಲಿ ಸರ್ವಪಕ್ಷದ ಸದಸ್ಯರು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸುವ ಮೂಲಕ ಆರೋಗ್ಯಕರ ಚರ್ಚೆಗೆ ಅವಕಾಶ ಮಾಡುವಂತೆ ಲೋಕಸಭಾ ಸಭಾಪತಿ ಓಂ ಬಿರ್ಲಾ ಮನವಿ ಮಾಡಿಕೊಂಡಿದ್ದಾರೆ. ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬಿರುಸಿನ ಬಾಣಗಳನ್ನು ಬೀಸುವುದಕ್ಕೆ ಪ್ರತಿಪಕ್ಷಗಳೂ ಸಿದ್ಧವಾಗಿವೆ. ಭಾರತದ ಜಿಡಿಪಿ, ನಿರುದ್ಯೋಗ ಸಮಸ್ಯೆ, ಕೊವಿಡ್-19 ಬಿಕ್ಕಟ್ಟು ಮತ್ತು ಭಾರತ-ಚೀನಾ ನಡುವಿನ ಗಡಿ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವುದಕ್ಕೆ ವಿರೋಧಪಕ್ಷಗಳು ಅಣಿಯಾಗಿವೆ.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications