ಸ್ಮಾರ್ಟ್ ಸಿಟಿ ಯೋಜನೆ: ಕರ್ನಾಟಕದ 6 ಪ್ರದೇಶಗಳು ಆಯ್ಕೆ
ನವದೆಹಲಿ , ಜೂ 24 : ಪ್ರಧಾನ ಮಂತ್ರಿ ನರೇಂದ್ರಮೋದಿ ಅವರ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಗೆ ಕರ್ನಾಟಕ ರಾಜ್ಯದ 6 ಪ್ರದೇಶಗಳಿಗೆ ಹಸಿರು ನಿಶಾನೆ ದೊರೆತಿದೆ.
ಲೋಕಸಭಾ ಚುನಾವಣೆಯ ಪ್ರಚಾರದ ಅವಧಿಯಲ್ಲಿ ಬಿಜೆಪಿ ಈ ಯೋಜನೆಯನ್ನು ಹಾಕಿಕೊಂಡಿತ್ತು. ಅದು ಈಗ ಕಾರ್ಯರೂಪಕ್ಕೆ ಬಂದಿದೆ. ಕೇಂದ್ರ ಸರ್ಕಾರ ಹಾಕಿಕೊಂಡ 100 ಸ್ಮಾರ್ಟ್ ಸಿಟಿ, ೫೦೦ ಅಮೃತ್ ನಗರ ಯೋಜನೆಯ ಸಾಕಾರಕ್ಕಾಗಿ ನಗರಗಳ ಆಯ್ಕೆ ಪಟ್ಟಿ ಪ್ರಕಟವಾಗಿದೆ. ಜೊತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಎಲ್ಲಾ ಯೋಜನೆಯು ಅಟಲ್ ಮಿಷನ್ ಫಾರ್ ರೆಜುವೆನೇಷನ್ ಮತ್ತು ಅರ್ಬನ್ ಟ್ರಾನ್ಸ್ ಫರ್ಮೇಶನ್ ಯೋಜನೆಯ ಅಡಿಯಲ್ಲಿ ಸಾಕಾರಗೊಳ್ಳಲಿದೆ. [ಮೋದಿ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದ 11 ನಗರ]

ಸುಮಾರು 48 ಕೋಟಿ ವೆಚ್ಚದ ಈ ಯೋಜನೆಗೆ ಮುಖ್ಯವಾಗಿ ಕರ್ನಾಟಕ ಸೇರಿದಂತೆ ಮಹಾರಾಷ್ಟ್ರ, ಗುಜಾರಾತ್, ತಮಿಳುನಾಡು, ನವದೆಹಲಿ, ಪಶ್ಚಿಮ ಬಂಗಾಳ, ರಾಜಸ್ಥಾನ, ಆಂಧ್ರ ಪ್ರದೇಶ ಇನ್ನು ಮುಂತಾದ ರಾಜ್ಯಗಳು ಆಯ್ಕೆಯಾಗಿವೆ. ನಾಮಾಂಕಿತಗೊಂಡ ರಾಜ್ಯಗಳಲ್ಲಿ ಉತ್ತರ ಪ್ರದೇಶದ 13 ನಗರಗಳು ಈ ಯೋಜನೆಯ ಪಾಲನ್ನು ಪಡೆದುಕೊಳ್ಳಲಿವೆ.
ಕರ್ನಾಟಕದ ಗುಲ್ಬಗಾ, ಬೀದರ್, ಪಟ್ಟದಕಲ್ಲು, ಬಾದಾಮಿ, ಮಹಾಕೂಟ, ಬಿಜಾಪುರ ಜಿಲ್ಲೆಗಳು ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಬರುವ ಅಮೃತ್ ಯೋಜನೆಯ ಮೂಲಕ ಪೂರ್ಣಗೊಳ್ಳಲಿದೆ. ಉಳಿದಂತೆ ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ತಲಾ 4, ಬಿಹಾರ, ಆಂಧ್ರಪ್ರದೇಶ ಮತ್ತು ಪಂಜಾಬ್ ತಲಾ 3, ಒಡಿಶಾ, ಹರಿಯಾಣ, ತೆಲಂಗಾಣ ಮತ್ತು ಛತ್ತೀಸ್ಗಢ ತಲಾ 2, ಜಮ್ಮು ಮತ್ತು ಕಾಶ್ಮೀರ, ಕೇರಳ, ಜಾರ್ಖಂಡ್, ಅಸ್ಸಾಂ, ಹಿಮಾಚಲಪ್ರದೇಶ, ಗೋವಾ, ಅರುಣಾಚಲಪ್ರದೇಶ, ಚಂಡೀಗಢ ಮತ್ತು ದೆಹಲಿ ತಲಾ 1 ನಗರಗಳ ನಾಮಾಂಕಿತಕ್ಕೆ ಅವಕಾಶ ಲಭ್ಯವಾಗಲಿದೆ. ಉಳಿದಂತೆ ಉತ್ತರಾಖಂಡ, ಮಧ್ಯಪ್ರದೇಶ, ಈಶಾನ್ಯ ರಾಜ್ಯಗಳು ಮತ್ತು ಇತರ ಕೆಲ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟಾರೆ 25 ಹೆಸರು ಸೂಚಿಸುವ ಅವಕಾಶ ನೀಡಲಾಗಿದೆ.
ಏನಿದು ಅಮೃತ್?
ಯುಪಿಎ ಸರ್ಕಾರದ ನರ್ಮ್ ಯೋಜನೆಯಲ್ಲಿ ಬದಲಾವಣೆ ಮಾಡಿ ತರಲಾಗಿರುವ ಯೋಜನೆಯ ಹೆಸರು "ಅಮೃತ್' (ಅಟಲ್ ಮಿಷನ್ ಫಾರ್ ರಿಜ್ಯುವಿನೇಷನ್ ಆ್ಯಂಡ್ ಅರ್ಬನ್ ಟ್ರಾನ್ಸ್ಫಾರ್ಮೆàಷನ್ ಸ್ಕೀಮ್). ಅಟಲ್ ನಗರ ನವೀಕರಣ ಯೋಜನೆಯಡಿ ದೇಶಾದ್ಯಂತ 500 ನಗರಗಳನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೂ ಕೂಡಾ ನಗರಗಳ ಹೆಸರು ಸೂಚಿಸುವ ಅವಕಾಶವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿದೆ.
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications