ರೈಲಿನಲ್ಲಿ ಸಿಗಲಿದೆ ಎಂಟಿಆರ್ ಇಡ್ಲಿ, ಸಾಂಬಾರ್
ಬೆಂಗಳೂರು, ಮೇ 23 : ಎಂಟಿಆರ್ ಮತ್ತು ಐಟಿಸಿ ಕಂಪನಿಗಳ ತಿಂಡಿಗಳು ಶೀಘ್ರದಲ್ಲೇ ರೈಲಿನಲ್ಲಿ ದೊರೆಯಲಿದೆ. ಭಾರತೀಯ ರೈಲ್ವೆ ಪ್ರೀಮಿಯಂ ರೈಲುಗಳಲ್ಲಿ ಈ ಉತ್ಪನ್ನಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ.
ಐಷಾರಾಮಿ ರೈಲುಗಳಲ್ಲಿ ಪ್ರಸಿದ್ಧ ಕಂಪನಿಗಳಾದ ಎಂಟಿಆರ್ ಮತ್ತು ಐಟಿಸಿ ಕಂಪನಿಗಳ ಸಿದ್ಧಪಡಿಸಿದ ಆಹಾರಗಳನ್ನು ನೀಡಲು ಚಿಂತನೆ ನಡೆಸಲಾಗಿದೆ. ರಾಜಧಾನಿ ರೈಲುಗಳಿಗಿಂತ ಎರಡು-ಮೂರು ಪಟ್ಟು ದರ ಹೆಚ್ಚಿರುವ ಪ್ರೀಮಿಯಂ ರೈಲುಗಳಲ್ಲಿ ಈ ಆಹಾರ ಪದಾರ್ಥಗಳನ್ನು ನೀಡಲಾಗುತ್ತದೆ.

ಈ ಬಗೆಯ ಆಹಾರಗಳನ್ನು ನೀಡುವ ಮೂಲಕ ರೈಲಿನ ಪ್ರಯಾಣವನ್ನು ಮತ್ತಷ್ಟು ಪ್ರಸಿದ್ಧಿ ಪಡಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಈಗಾಗಲೇ ಈ ಬಗ್ಗೆ ರೈಲ್ವೆ ಪ್ರಯಾಣಿಕರ ಅಭಿಪ್ರಾಯ ಸಂಗ್ರಹಿಸಿದ್ದು, ಶೇ 80ರಷ್ಟು ಜನರು ಇದು ಉತ್ತಮ ಯೋಜನೆ ಎಂದು ಹೇಳಿದ್ದಾರೆ.
ಸ್ಥಳೀಯ ಪ್ರದೇಶಗಳಿಗೆ ತಕ್ಕಂತೆ ಈ ತಿಂಡಿಗಳ ಮೆನುವಿನಲ್ಲಿ ಬದಲಾವಣೆ ಮಾಡಲು ರೈಲ್ವೆ ಆಲೋಚಿಸಿದೆ. ದಕ್ಷಿಣ ಭಾರತದಲ್ಲಿ ಉಪ್ಪಿಟ್ಟು, ಇಡ್ಲಿ, ಸಾಂಬಾರ್. ಉತ್ತರ ಭಾರತದಲ್ಲಿ ದಾಲ್, ಸಾಹಿ ಪನ್ನೀರ್ ಸೇರಿದಂತೆ ಇತರ ತಿಂಡಿಗಳನ್ನು ವಿತರಿಸಲು ಚಿಂತನೆ ನಡೆಸಿದೆ.
ಈ ತಿಂಡಿಗಳಿಗೆ ರೈಲ್ವೆ ಹೆಚ್ಚಿನ ದರವನ್ನು ವಿಧಿಸುವುದಿಲ್ಲ. ಮೊದಲು ರೈಲಿನಲ್ಲಿ ಸರಬರಾಜು ಮಾಡುತ್ತಿದ್ದ ಊಟ, ತಿಂಡಿಗಿದ್ದ ದರವನ್ನು ನಿಗದಿಪಡಿಸುವ ಆಲೋಚನೆ ಇದೆ. ಮಾಂಸಹಾರಿ ಪ್ಯಾಕೆಟ್ ಗಳಿಗೆ ದರ ಸ್ವಲ್ಪ ಹೆಚ್ಚಾಗಿರುತ್ತದೆ. ಆದರೆ, ಒಮ್ಮೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ದರ ಕಡಿಮೆಯಾಗಬಹುದು.
ಈ ತಿಂಡಿಗಳ ಪ್ಯಾಕೆಟ್ ಮೇಲೆಯೇ ರೈಲ್ವೆ ಕಂಪನಿಗಳ ದೂರವಾಣಿ ಸಂಖ್ಯೆಯನ್ನು ಮುದ್ರಿಸಲಿದೆ. ಒಂದು ವೇಳೆ ತಿಂಡಿಗಳ ಬಗ್ಗೆ ಪ್ರಯಾಣಿಕರು ದೂರು ನೀಡಬೇಕಾದರೆ, ನೇರವಾಗಿ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ಎಲ್ಲವೂ ಅಂದುಕೊಡಂತೆ ನಡೆದರೆ ಕೆಲವು ದಿನಗಳಲ್ಲಿ ನಿಮ್ಮ ಕೈಯಲ್ಲಿ ಎಂಟಿಆರ್ ಬಿಸಿ-ಬಿಸಿ ಇಡ್ಲಿ ಇರುತ್ತದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications