ಅರವಿಂದ ಕೇಜ್ರಿವಾಲ್ ಪದಗ್ರಹಣಕ್ಕೆ ವಿಶೇಷ ಅತಿಥಿಗೆ ಆಹ್ವಾನ!
ನವದೆಹಲಿ, ಫೆಬ್ರವರಿ 13 : ದೆಹಲಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದೆ. ಫೆಬ್ರವರಿ 16ರಂದು ಅರವಿಂದ ಕೇಜ್ರಿವಾಲ್ 3ನೇ ಬಾರಿಗೆ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಅರವಿಂದ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮತ್ತೊಮ್ಮೆ ಅಧಿಕಾರ ನಡೆಸಲು ಅವಕಾಶ ನೀಡಿದ ದೆಹಲಿ ಜನರ ಸಮ್ಮುಖದಲ್ಲಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಅರವಿಂದ ಕೇಜ್ರಿವಾಲ್ ಪದಗ್ರಹಣ ಸಮಾರಂಭಕ್ಕೆ ಮುಖ್ಯ ಅತಿಥಿಯೊಬ್ಬರನ್ನು ಆಹ್ವಾನಿಸಲಾಗಿದೆ. ಅವರು ದೇಶದ ಪ್ರಧಾನಿಯಲ್ಲ, ಯಾವುದೇ ರಾಜ್ಯದ ಮುಖ್ಯಮಂತ್ರಿಯೂ ಅಲ್ಲ. ರಾಜಕೀಯ ಎಂದರೇನು? ಎಂದು ತಿಳಿಯದ ಒಂದು ವರ್ಷದ ಮಗು.
ದೆಹಲಿ ಚುನಾವಣೆ ಫಲಿತಾಂಶ ಪ್ರಕಟಗೊಂಡ ದಿನ ಆಮ್ ಆದ್ಮಿ ಪಕ್ಷದ ಕಚೇರಿ ಮುಂದೆ ಇದ್ದ ಮಗು ಎಲ್ಲರ ಗಮನ ಸೆಳೆದಿತ್ತು. ಕೇಜ್ರಿವಾಲ್ ರೀತಿ ಮಫ್ಲರ್ ಸುತ್ತಿಕೊಂಡು ಎಎಪಿ ಟೋಪಿ ಧರಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದ್ದವು.

1 ವರ್ಷದ ಕಂದಮ್ಮ ಅತಿಥಿ
ಅರವಿಂದ ಕೇಜ್ರಿವಾಲ್ ಪ್ರಮಾಣ ವಚನ ಸಮಾರಂಭಕ್ಕೆ 1 ವರ್ಷದ ಕಂದಮ್ಮ ಮುಖ್ಯ ಅತಿಥಿ. ಈ ಕುರಿತು ಟ್ವಿಟರ್ ಮೂಲಕ ಎಎಪಿ ಮಾಹಿತಿ ನೀಡಿದೆ. ಕೇಜ್ರಿವಾಲ್ರಂತೆ ವೇಷ ಧರಿಸಿದ್ದ ಕಂದಮ್ಮನನ್ನು ಪಕ್ಷ 'Baby Mufflerman' ಎಂದು ಕರೆದಿದೆ.

ಗಮನ ಸೆಳೆದಿದ್ದ ಮುದ್ದು ಕಂದಮ್ಮ
ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ದಿನ 1 ವರ್ಷದ ಮಗು ಅರವಿಂದ ಕೇಜ್ರಿವಾಲ್ ರೀತಿ ವೇಷ ಧರಿಸಿಕೊಂಡು ಎಎಪಿ ಕಚೇರಿ ಮುಂದೆ ಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಕಂದಮ್ಮನ ಚಿತ್ರ ವೈರಲ್ ಆಗಿತ್ತು.

10 ಗಂಟೆಗೆ ಪ್ರಮಾಣ ವಚನ
ಫೆಬ್ರವರಿ 16ರಂದು ಬೆಳಗ್ಗೆ 10ಗಂಟೆಗೆ ರಾಮ್ ಲೀಲಾ ಮೈದಾನದಲ್ಲಿ ಅರವಿಂದ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ದೆಹಲಿಯ ಜನರು ಸಾಕ್ಷಿಯಾಗಲಿದ್ದಾರೆ.

ಯಾವ ಗಣ್ಯರಿಗೂ ಆಹ್ವಾನವಿಲ್ಲ
ಎಎಪಿಯ ಹಿರಿಯ ನಾಯಕ ಗೋಪಾಲ್ ರೈ ಪ್ರಮಾಣ ವಚನ ಸಮಾರಂಭದ ಬಗ್ಗೆ ಹೇಳಿಕೆ ನೀಡಿದ್ದಾರೆ. "ಯಾವುದೇ ರಾಜ್ಯದ ಮುಖ್ಯಮಂತ್ರಿಗಳು, ರಾಜಕೀಯ ನಾಯಕರನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ. ದೆಹಲಿ ಜನರೇ ನಮ್ಮ ಗಣ್ಯರು" ಎಂದು ಹೇಳಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications