ಮುಲಾಯಂ ಹುಟ್ಟುಹಬ್ಬಕ್ಕೆ ತಾಲಿಬಾನ್ ಫಂಡ್: ಅಜಂ
ನವ ದೆಹಲಿ, ನ. 21: ಅಜಂ ಖಾನ್... ಇದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದಲ್ಲಿ ಪ್ರಭಾವಿ ಹೆಸರು. ಮುಸ್ಲಿಂ ಸಮುದಾಯದ ಓಟುಗಳನ್ನು ದೊಡ್ಡ ಪ್ರಮಾಣದಲ್ಲಿ ಸೆಳೆಯಬಲ್ಲ ವರ್ಚಸ್ಸು ಹೊಂದಿರುವ ನಾಯಕ ಹಾಗೂ ಪಕ್ಷದ ಪ್ರಶ್ನಾತೀತ ನಾಯಕ ಮುಲಾಯಂ ಸಿಂಗ್ ಅವರ ನೆಚ್ಚಿನ ಬಂಟ ಕೂಡ ಹೌದು. ಆದರೆ, ಅದೇ ಅಜಂ ಇಂದು ಮುಲಾಯಂಗೆ ಭಾರೀ ಮುಜುಗರ ತಂದೊಡ್ಡಿದ್ದಾರೆ.
ವಿಷಯ ಏನೆಂದರೆ... ಮುಲಾಯಂಸಿಂಗ್ ಯಾದವ್ ನ. 22ರಂದು ತನ್ನ 76ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳಲು ತಯಾರಿ ನಡೆಸಿದ್ದಾರೆ. ಇದಕ್ಕಾಗಿ ತಯಾರಿಸಿದ 75 ಅಡಿ ಉದ್ದದ ಕೇಕ್ ಹಾಗೂ ಲಂಡನ್ನಿಂದ ತರಿಸಿರುವ 'ಬಗ್ಗಿ' ಸಮಾರಂಭದ ಪ್ರಮುಖ ಆಕರ್ಷಣೆಗಳಾಗಿವೆ. ಅಭಿಮಾನಿಗಳ ಪಾಲಿಗೆ ಇದು ಹಬ್ಬವಾಗಿದ್ದರೂ, ವಿರೋಧ ಪಕ್ಷಗಳ ಕಟು ಟೀಕೆಗೆ ಗುರಿಯಾಗಿದೆ.
ಅದ್ದೂರಿ ಹುಟ್ಟುಹಬ್ಬದ ಹಣದ ಮೂಲವನ್ನು ಬಿಜೆಪಿ ಈಗಾಗಲೇ ಪ್ರಶ್ನಿಸಿದೆ. ಇದಕ್ಕೆ ಅಜಂ ಖಾನ್ "ತಾಲಿಬಾನ್ ನೆ ದಿಯಾ, ದಾವೂದ್ ನೆ ದಿಯಾ, ಸಾರಾ ತಾಲಿಬಾನ್ ಕಾ ಫಂಡ್ ಹೈ" (ತಾಲಿಬಾನ್ ಕೊಟ್ಟಿದೆ, ದಾವೂದ್ ಇಬ್ರಾಹಿಂ ಕೊಟ್ಟಿದ್ದಾನೆ. ಪೂರ್ತಿ ಹಣ ತಾಲಿಬಾನ್ನದು) ಎಂದು ಪ್ರತಿಕ್ರಿಯಿಸಿದ್ದಾರೆ. [ಸೈಕಲ್ ಪಂಕ್ಚರ್ ಮಾಡಿ ಕೈ ಹಿಡಿದ ಯೋಗೇಶ್ವರ್]

ಪಕ್ಷದ ಮೂಲಗಳ ಪ್ರಕಾರ ಇದಾವುದಕ್ಕೂ ತಲೆ ಕೆಡಿಸಿಕೊಳ್ಳದ ಮುಲಾಯಂ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಗ್ನರಾಗಿದ್ದಾರೆ. ಶುಕ್ರವಾರ ರಾತ್ರಿ 12 ಗಂಟೆ ನಂತರ 75 ಅಡಿಗಳಷ್ಟು ಉದ್ದದ ಕೇಕ್ ಕತ್ತರಿಸಲಿದ್ದಾರೆ. ಈ ಸಮಾರಂಭದ ನಿಮಿತ್ತ ಸಮಾಜವಾದಿ ಪಕ್ಷದ ಕಾರ್ಯಕರ್ತರು ಸಂಪೂರ್ಣ ರಾಮಪುರ ನಗರವನ್ನು ಸಿಂಗರಿಸಿದ್ದಾರೆ.
ಇದಕ್ಕೂ ಮೊದಲು ಹನ್ಸ್ ರಾಜ್ ಹನ್ಸ್ ಹಾಗೂ ಸಬ್ರಿ ಸಹೋದರರ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಲ್ಲದೆ, ಇದೇ ಸಂದರ್ಭದಲ್ಲಿ ಒಂದು ವೈದ್ಯಕೀಯ ಮಹಾವಿದ್ಯಾಲಯ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಲಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications