ಮುಂಬೈ ಟೆರರ್ ಅಟ್ಯಾಕ್ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬಂಧನ
ನವದೆಹಲಿ, ಜುಲೈ 17: ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.
ಲಷ್ಕರ್-ಎ-ತೊಯಿಬಾ ಭಯೋತ್ಪಾದಕ ಸಂಘಟನೆಯ ಪ್ರಮುಖನಾಗಿದ್ದ ಈತ ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ 23 ಪ್ರಕರಣಗಳನ್ನು ಎದುರಿಸುತ್ತಿದ್ದ. 26/11 ಯಾರಿಗೆ ತಾನೆ ನೆನಪಿಲ್ಲ ಹೇಳಿ, ಮುಂಬೈನ ತಾಜ್ ಹೋಟೆಲ್ ಮೇಲೆ ದಾಳಿ ನಡೆಸಿ ನೂರಾರು ಮಂದಿ ಸಾವಿಗೆ ಕಾರಣವಾಗಿತ್ತು.
ಭಾರತದ ವಿರುದ್ಧವಾಗಿ ಪಾಕಿಸ್ತಾನದಲ್ಲಿ ಹಲವು ಪ್ರತಿಭಟನೆಗಳಲ್ಲಿ ಈತ ಮುಕ್ತವಾಗಿ ಪಾಲ್ಗೊಳ್ಳುತ್ತಿದ್ದ. ಅಂತಾರಾಷ್ಟ್ರೀಯ ಒತ್ತಡದಿಂದಾಗಿ ಪಾಕಿಸ್ತಾನವು ಆತನ ಮೇಲೆ ಭಯೋತ್ಪಾದನೆ ಪ್ರಕರಣ ದಾಖಲಿಸಿತ್ತು.

ಮುಂಬೈ ದಾಳಿ ನಡೆದು 10 ವರ್ಷ ಕಳೆದ ಸಂದರ್ಭದಲ್ಲಿ ಅಮೆರಿಕವು ಭಯೋತ್ಪಾದಕರನ್ನು ಬಂಧಿಸುವಂತೆ ಪಾಕಿಸ್ತಾನವನ್ನು ಒತ್ತಾಯಿಸಿತ್ತು.
2008ರ ನವೆಂಬರ್ 26ರಂದು ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.
ಮುಂಬಯಿ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗು ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲು ಸಫಲವಾಯಿತು.
2008ರ ನವೆಂಬರ್ 26 ರಂದು ಆರಂಭವಾದ ದಾಳಿ 29ರ ಶನಿವಾರದವರೆಗೂ ಬಿರುಸಾಗಿ ನಡೆಯಿತು. ಅಷ್ಟರಲ್ಲಿ ದೇಶದ ಸೇನಾ ಪಡೆಯೂ ಮುಂಬಯಿಗೆ ಧಾವಿಸಿ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ಮೊದಲಾಯಿತು. ದಾಳಿಯ ಫಲವಾಗಿ ಸರ್ಕಾರಿ ಅಧಿಕಾರಿಗಳೂ, ಸಿಪಾಯಿಗಳು, ಸಾರ್ವಜನಿಕರೂ ಸೇರಿದಂತೆ 168 ಜನ ಪ್ರಾಣ ಕಳೆದುಕೊಂಡರು ಹಾಗೂ 400ಕ್ಕೂ ಮಿಗಿಲಾಗಿ ಗಾಯಾಳುಗಳಾಗಿ ಚಿಕಿತ್ಸೆ ಪಡೆದರು.
ಮುಂಬಯಿ ನಾಗರೀಕರು, ವಾಣಿಜ್ಯವಲಯದ ಪ್ರಮುಖರು ಒಳಗೊಂಡು ಮುಂಬಯಿ ವಾಸಿಗಳೆಲ್ಲರೂ ತಾವ್ರ ಆತಂಕಕ್ಕೆ ಈಡಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಭದ್ರತಾ ಸುರಕ್ಷತೆಯ ಬಗ್ಗೆ ಚರ್ಚೆಗಳು ನಡೆದವು. ಈ ಮಧ್ಯೆ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ತಾನೇ ಹೊತ್ತುಕೊಂಡಿತು.
ದಕ್ಷಿಣ ಮುಂಬಯಿನ ಎಂಟು ವಿವಿಧ ಸ್ಥಳಗಳಲ್ಲಿ ದಾಳಿಗಳು ನಡೆದವು. ಮುಂಬಯಿ ಹೃದಯ ಭಾಗವಾದ ಛತ್ರಪತಿ ಶಿವಾಜಿ ಟರ್ಮಿನಸ್, ಗಣ್ಯರು ಹಾಗು ವಿದೇಶಿಗಳು ಹೆಚ್ಚಾಗಿ ಇರುವಂತಹ ಒಬೆರಾಯ್ ಟ್ರೈಡೆಂಟ್, ವಿಶ್ವ ವಿಖ್ಯಾತ ತಾಜ್ ಹೋಟೆಲ್, ಲಿಯೋಪೋಲ್ಡ್ ಕೆಫೆ, ಕಾಮಾ ಹಾಸ್ಪಿಟಲ್, ನಾರಿಮನ್ ಹೌಸ್, ಮೆಟ್ರೋ ಸಿನೆಮಾ, ಸೆಂಟ್ ಕ್ಸೇವಿಯರ್ ಕಾಲೇಜು ದಾಳಿಗೆ ಸಾಕ್ಷಿಯಾದ ಸ್ಥಳಗಳು. ಮೇಜ್ ಗಾವ್ ನಲ್ಲಿ ಒಂದು ಬಾಂಬನ್ನು ಸ್ಪೋಟಿಸಲಾಗಿತ್ತು.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications