ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಎನ್ನಲು ಅಡ್ಡಿಯಿಲ್ಲ!: ಹೈಕೋರ್ಟ್
ನವದೆಹಲಿ, ಅಕ್ಟೋಬರ್ 24: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ತಮ್ಮ ವಾಹಿನಿಯಲ್ಲಿ ಚರ್ಚೆಗಳು ಮತ್ತು ಸುದ್ದಿಗಳನ್ನು ಪ್ರಸ್ತುತಪಡಿಸುವ ವೇಳೆ 'ನೇಷನ್ ವಾಂಟ್ಸ್ ಟು ನೋ' ಎಂಬ ಟ್ಯಾಗ್ ಲೈನ್ ಬಳಸಲು ಸ್ವತಂತ್ರರಾಗಿದ್ದಾರೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಆದರೆ ರಿಪಬ್ಲಿಕ್ ಟಿವಿಯು 'ನ್ಯೂಸ್ ಅವರ್' ಅಥವಾ ಅದನ್ನೇ ಹೋಲುವಂತಹ ಯಾವುದೇ ಇತರೆ ಮುದ್ರೆಯನ್ನು ಬಳಸದಂತೆ ದೆಹಲಿ ಹೈಕೋರ್ಟ್ ನಿರ್ಬಂಧ ಹೇರಿದೆ.
ರಿಪಬ್ಲಿಕ್ ಟಿವಿಯ ಮಾಲೀಕತ್ವ ಹೊಂದಿರುವ ಎಆರ್ಜಿ ಔಟ್ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಚರ್ಚಾ ಕಾರ್ಯಕ್ರಮವೊಂದಕ್ಕೆ 'ನ್ಯೂಸ್ ಅವರ್' ಎಂಬ ಹೆಸರು ಇರಿಸಿರುವುದನ್ನು ತೆಗೆದುಹಾಕಬೇಕು ಮತ್ತು ಅರ್ನಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮಗಳಲ್ಲಿ ನೇಷನ್ ವಾಂಟ್ಸ್ ಟು ನೋ ಎಂಬ ಟ್ಯಾಗ್ ಲೈನ್ ಬಳಸದಂತೆ ನಿರ್ಬಂಧಿಸಬೇಕು ಎಂದು ಕೋರಿ 'ಟೈಮ್ಸ್ ನೌ' ವಾಹಿನಿಯ ಬೆನೆಟ್ ಆಂಡ್ ಕೋಲ್ಮನ್ ಆಂಡ್ ಕಂಪೆನಿ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು.

ಈ ಎರಡೂ ಪದಗಳನ್ನು ಬಳಕೆ ಮಾಡದಂತೆ ಅರ್ನಬ್ ಗೋಸ್ವಾಮಿ ಅವರ ವಾಹಿನಿಯ ಮೇಲೆ ಕಾಯಂ ನಿರ್ಬಂಧ ವಿಧಿಸುವಂತೆ ಟೈಮ್ಸ್ ನೌ ಕೋರಿತ್ತು. ಆದರೆ 'ನೇಷನ್ ವಾಂಟ್ಸ್ ಟು ನೌ' ಟ್ಯಾಗ್ ಲೈನ್ ಬಳಕೆ ನಿರ್ಬಂಧದ ಬಗ್ಗೆ ವಿವರವಾದ ಪರಿಶೀಲನೆ ಅಗತ್ಯವಿದೆ ಎಂದು ಕೋರ್ಟ್ ಹೇಳಿದೆ.
ಇಡೀ ಸಿಬ್ಬಂದಿ ವಿರುದ್ಧ ದೂರು
ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮತ್ತು ಮುಂಬೈ ಪೊಲೀಸರ ನಡುವಿನ ತಿಕ್ಕಾಟ ಮತ್ತಷ್ಟು ತೀವ್ರಗೊಂಡಿದೆ. ಮುಂಬೈ ಪೊಲೀಸರಿಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಅರ್ನಬ್ ಗೋಸ್ವಾಮಿ ಅವರ ರಿಪಬ್ಲಿಕ್ ವಾಹಿನಿಯ ಎಲ್ಲ ಸಂಪಾದಕ ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪಿಎಸ್ಐ ಶಶಿಕಾಂತ್ ಪವಾರ್ ಸಲ್ಲಿಸಿದ ದೂರಿನ ಅನ್ವಯ ಪೊಲೀಸ್ ಕಾಯ್ದೆ 1922 ಹಾಗೂ ಐಪಿಸಿ ಸೆಕ್ಷನ್ 500ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications