ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ; ಮುನಾವರ್ ಫಾರುಕಿಗೆ ಮಧ್ಯಂತರ ಜಾಮೀನು
ನವದೆಹಲಿ, ಫೆಬ್ರುವರಿ 05: ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಣಾರ್ಹ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಜೈಲು ಸೇರಿದ್ದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರುಕಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಈ ಮಧ್ಯಂತರ ಜಾಮೀನು ತಾತ್ಕಾಲಿಕ ಜಾಮೀನಾಗಿದ್ದು, ಆರೋಪಿಯು ಈ ಅವಧಿಯಲ್ಲಿ ನಿರೀಕ್ಷಿತ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ.
ಮಧ್ಯ ಪ್ರದೇಶದ ಮೊನ್ರೋ ಕೆಫೆಯಲ್ಲಿ ಜನವರಿ 1ರಂದು ಮುನಾವರ್ ಹಾಸ್ಯ ಕಾರ್ಯಕ್ರಮ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ಹಾಸ್ಯದ ನೆಪದಲ್ಲಿ ಫಾರುಖ್ ಹಿಂದೂ ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳನ್ನು ಅವಮಾನಿಸಿದ್ದಾರೆ. ಗೃಹ ಸಚಿವ ಅಮಿತ್ ಶಾಗೂ ಅವಮಾನ ಮಾಡಿದ್ದಾರೆ ಎಂದು ಇಂದೋರ್ ನ ಬಿಜೆಪಿ ಶಾಸಕಿ ಮಾಲಿನಿ ಗೌರ್ ಅವರ ಮಗ ಏಕಲವ್ಯ ಗೌರ್ ದೂರು ದಾಖಲಿಸಿದ್ದರು. ಆನಂತರ ಇಂದೋರ್ ಪೊಲೀಸರು ಹಾಸ್ಯ ಕಲಾವಿದ ಫಾರುಕಿ ಹಾಗೂ ಎಡ್ವಿನ್ ಆಂಥೊನಿ, ಪ್ರಖರ್ ವ್ಯಾಸ್, ಪ್ರಿಯಂ ವ್ಯಾಸ್, ನಳಿನ್ ಯಾದವ್ ಅವರನ್ನು ಜನವರಿ 2ರಂದು ಬಂಧಿಸಿದ್ದರು.

ಎರಡು ಬಾರಿ ಫಾರುಕಿ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಜನವರಿ 28ರಂದು ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದ ಮಧ್ಯಪ್ರದೇಶ ಹೈಕೋರ್ಟ್ ಇಂದೋರ್ ನ್ಯಾಯಪೀಠ, ದೇಶದಲ್ಲಿ ಸಾಮರಸ್ಯ ಹಾಗೂ ಸಹೋದರತ್ವವನ್ನು ಉತ್ತೇಜಿಸುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಕರ್ತವ್ಯ ಎಂದು ಹೇಳಿ ಫಾರುಕಿಗೆ ಮೂರನೇ ಬಾರಿಯೂ ಜಾಮೀನು ನಿರಾಕರಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ ಮುನಾವರ್ ಫಾರುಕಿಗೆ ಮಧ್ಯಂತರ ಜಾಮೀನು ನೀಡಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications