Get Updates
Get notified of breaking news, exclusive insights, and must-see stories!

ಬಿಜೆಪಿ ವಲಯದಲ್ಲಿ ತಲ್ಲಣ ಸೃಷ್ಟಿಸಿದ ಮುರಳಿ ಮನೋಹರ್ ಜೋಷಿ ಪತ್ರ

ನವದೆಹಲಿ, ಮಾರ್ಚ್ 26: ಬಿಜೆಪಿ ಸಂಸದ, ಹಿರಿಯ ನಾಯಕ ಮುರಳೀ ಮನೋಹರ್ ಜೋಷಿ ಅವರು ಬರೆದ ಪತ್ರವೊಂದು ಇದೀಗ ಬಿಜೆಪಿ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಬಿಜೆಪಿಯಲ್ಲಿ ಹಿರಿತಲೆಗಳನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಎಂಬ ದೂರಿಗೆ ಪುಷ್ಠಿ ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

"ನಾನು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಬಿಜೆಪಿ ನಾಯಕರೇ ನನ್ನ ಬಳಿ ಹೇಳಿದ್ದಾರೆ" ಎಂದು 85 ವರ್ಷ ವಯಸ್ಸಿನ ಜೋಷಿ ತಮ್ಮ ಪತ್ರದಲ್ಲಿ ಬರೆದಿದ್ದು, ಈ ಕುರಿತು ಮಾಧ್ಯಮಗಳು ವರದಿ ಮಾಡಿವೆ.

ಕಾನ್ಪುರ ಮತದಾರರನ್ನು ಸಂಬೋಧಿಸಿ ಈ ಪತ್ರವನ್ನು ಬರೆಯಲಾಗಿದ್ದು, "ಕಾನ್ಪುರದ ಪ್ರೀತಿಯ ಮತದಾರರೇ, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ರಾಮಲಾಲ್ ಅವರು ಇಂದು ನೀವು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಸಂದೇಶವನ್ನು ನೀಡಿದ್ದಾರೆ" ಎಂದು ಈ ಪತ್ರದಲ್ಲಿ ಅವರು ಬರೆದಿದ್ದಾರೆ.

Murali Manohar Joshis letter becomes a matter of debate now

2014 ರಲ್ಲಿ ವಾರಣಾಸಿ ಕ್ಷೇತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟುಕೊಟ್ಟು ಉತ್ತರ ಪ್ರದೇಶದ ಕಾನ್ಪುರದಿಂದ ಜೋಷಿ ಸ್ಪರ್ಧಿಸಿ ಗೆದ್ದಿದ್ದರು.

ಆದರೆ ಈ ಬಾರಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳೀ ಮನೋಹರ್ ಜೋಷಿ ಅವರನ್ನು ಕಣಕ್ಕಿಳಿಸದಿರಲು ಬಿಜೆಪಿ ನಿರ್ಧರಿಸಿದ್ದು, ವ್ಯಾಪಕ ಟೀಕೆಗೂ ಕಾರಣವಾಗಿತ್ತು.

Murali Manohar Joshis letter becomes a matter of debate now

ಗುಜರಾತಿನ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ ಅವರ ಬದಲಾಗಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಗಾಂಧಿನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಳಿದಿದ್ದಾರೆ. ಈ ಬಗ್ಗೆ ಎಲ್ ಕೆ ಅಡ್ವಾಣಿ ಅವರು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+