ವಿಮಾನದ ಟಿಕೆಟ್ಗಾಗಿ ವರ್ಷದ ವೇತನ ಕೊಟ್ಟಿದ್ದರು ನನ್ನ ತಂದೆ: ಸುಂದರ್ ಪಿಚೈ
ನವದೆಹಲಿ, ಜೂನ್ 9: ನಾನು ಭಾರತದಿಂದ ಅಮೆರಿಕಾಕ್ಕೆ ಬರಲು ವಿಮಾನದ ಟಿಕೆಟ್ಗಾಗಿ ನನ್ನ ತಂದೆ ತನ್ನ ಒಂದು ವರ್ಷದ ವೇತನಕ್ಕೆ ಸಮವಾದ ಮೊತ್ತವನ್ನು ಖರ್ಚು ಮಾಡಿದ್ದರು. ಹೀಗಾಗಿಯೇ ನಾನು ಸ್ಟ್ಯಾನ್ಫೋರ್ಡ್ ವಿವಿಗೆ ಬರಲು ಸಾಧ್ಯವಾಯಿತು. ಅದೇ ನನ್ನ ಮೊದಲ ವಿಮಾನಯಾನ ಎಂದು ಅಲ್ಫಾಬೆಟ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.
Recommended Video
ಕೊರೋನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ಗೂಗಲ್ನ ವೀಡಿಯೊ ಪ್ಲಾಟ್ಫಾರ್ಮ್ ಯೂಟ್ಯೂಬ್ ಆಯೋಜಿಸಿದ್ದ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಿಚೈ, ''ಅಮೆರಿಕಾ ಅನ್ನುವುದು ದುಬಾರಿ ವೆಚ್ಚಗಳ ದೇಶ. ಮನೆಗೆ ಫೋನ್ ಮಾಡಲು ನಿಮಿಷಕ್ಕೆ ಎರಡು ಡಾಲರ್ ಖರ್ಚಾಗುತ್ತಿತ್ತು. ಇದು ಭಾರತದಲ್ಲಿ ನಮ್ಮ ತಂದೆಯ ತಿಂಗಳ ವೇತನಕ್ಕೆ ಸಮ. ನಾನು ಇಂದು ಉನ್ನತ ಸ್ಥಾನದಲ್ಲಿದ್ದೇನೆ. ಅದೃಷ್ಟದ ಹೊರತಾಗಿ ಅಂದು ಪರಿಸ್ಥಿತಿಯನ್ನು ನಾನು ನಿಭಾಯಿಸಿದ ಪರಿಯೇ ಇದೆಲ್ಲಕ್ಕೂ ಕಾರಣ. ತಂತ್ರಜ್ಞಾನದ ಬಗೆಗಿನ ತುಡಿತ, ಆಸಕ್ತಿ ಮತ್ತು ಮುಕ್ತ ಮನಸ್ಸು ನನಗೆ ಅವಕಾಶಗಳನ್ನು ಸೃಷ್ಟಿಸಿದೆ," ಎಂದು ಪಿಚೈ ವಿವರಿಸಿದ್ದಾರೆ.
ಇದೇ ವೇಳೆ ತಾವು ಅಮೆರಿಕಕ್ಕೆ ಬಂದಾಗ ಎದುರಿಸಿದ ನಾನಾ ಸವಾಲುಗಳನ್ನು ನಿಭಾಯಿಸಿದ್ದನ್ನು ಅವರು ಹಂಚಿಕೊಂಡಿದ್ದಾರೆ. ಹಾಗೂ 2019-20ರ ಸಾಲಿನ ಪದವೀಧರನ್ನು ಉದ್ದೇಶಿಸಿ ಪಿಚೈ ಈ ಮಾತನಾಡಿದ್ದು, ವಿದ್ಯಾರ್ಥಿಗಳಲ್ಲಿ ಭರವಸೆ ತುಂಬಿದ್ದಾರೆ.

"ಮುಕ್ತರಾಗಿರಿ, ತಾಳ್ಮೆಯಿಂದಿರಿ, ಭರವಸೆಯಿಡಿ. ಇದನ್ನು ಮಾಡಲು ನಿಮ್ಮಿಂದ ಸಾಧ್ಯವಾದರೆ, ಇತಿಹಾಸವು 2020 ರ ತರಗತಿಯನ್ನು ನೆನಪಿಸಿಕೊಳ್ಳುತ್ತದೆ. ನೀವು ಕಳೆದುಕೊಂಡದ್ದಕ್ಕಾಗಿ ಅಲ್ಲ, ಆದರೆ ನೀವು ಏನು ಬದಲಾಯಿಸಿದ್ದೀರಿ ಎಂಬುದಕ್ಕೆ. ಎಲ್ಲವನ್ನೂ ಬದಲಾಯಿಸಲು ನಿಮಗೆ ಅವಕಾಶವಿದೆ. ನಾನು ಆಶಾವಾದಿಯಾಗಿದ್ದೇನೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications