ಅತ್ಯಾಚಾರ ಆರೋಪಿಗಳಿಂದ ಹಣಪಡೆದ ಇವರೆಂಥ ತಂದೆತಾಯಿಗಳು!?
ನವದೆಹಲಿ, ಏಪ್ರಿಲ್ 17: "ನನ್ನ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಂದ ತನ್ನ ತಂದೆ-ತಾಯಿ ಹಣ ಪಡೆದು, ಪ್ರಕರಣವನ್ನು ಮುಚ್ಚಿಹಾಕು ಎಂದು ಒತ್ತಾಯಿಸುತ್ತಿದ್ದಾರೆ" ಎಂದು ಅತ್ಯಾಚಾರ ಸಂತ್ರಸ್ಥೆಯೊಬ್ಬಳು ಪೊಲಿಸರಿಗೆ ದೂರು ನೀಡಿದ ವಿಚಿತ್ರ ಘಟನೆಯೊಂದು ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಯುವತಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪವನ್ನು ಇಬ್ಬರು ಎದುರಿಸುತ್ತಿದ್ದರು. ಈ ಕುರಿತು ಯುವತಿ ಪೊಲಿಸರಿಗೆ ದೂರು ನೀಡಿದ್ದಳು. ಪ್ರಕರಣ ಪ್ರಗತಿಯಲ್ಲಿರುವಾಗಲೇ, ಆರೋಪಿಗಳು ಸಂತ್ರಸ್ಥೆಯ ಪಾಲಕರಲ್ಲಿ ಹಣದ ಆಮಿಷವೊಡ್ಡಿದ್ದಾರೆ. ಪ್ರಕರಣವನ್ನು ತಿರುಚುವಂತೆ ಕೇಳಿದ್ದಾರೆ. ಇದಕ್ಕೆ ಒಪ್ಪಿದ ತಂದೆ-ತಾಯಿ, 5 ಲಕ್ಷ ರೂ. ಹಣ ಪಡೆದು ಸಂತ್ರಸ್ಥೆಯ ಬಳಿ ಪ್ರಕರಣವನ್ನು ತಿರುಚುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ.

ಈ ಕುರಿತು ಸಂತ್ರಸ್ಥೆ ನೀಡಿದ ದೂರಿನನ್ವಯ ಸಂತ್ರಸ್ಥೆಯ ಪಾಲಕರನ್ನು ಬಂಧಿಸಲು ಪೊಲೀಸರು ಮುಂದಾಗಿದ್ದಾರೆ ಈ ಸಂದರ್ಭದಲ್ಲಿ ತಂದೆ ನಾಪತ್ತೆಯಾಗಿದ್ದು, ತಾಯಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಳೆದ ಆಗಸ್ಟ್ ನಲ್ಲಿ ಯುವತಿಯನ್ನು ಅಪಹರಿಸಿ ಒಂದು ವಾರಗಳ ಕಾಲ ಇಬ್ಬರು ಯುವಕರು ನಿರಂತರ ಅತ್ಯಾಚಾರ ಎಸಗಿದ್ದರು. ಯುವತಿ ನಾಪತ್ತೆಯಾಗಿರುವ ಕುರಿತು ತಂದೆ-ತಾಯಿಯೇ ದೂರು ನೀಡಿದ್ದರು. ನಂತರ ಪತ್ತೆಯಾದ ಆಕೆ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ನೀದಿದ್ದಳಲು. ದೂರಿನನ್ವಯ ಆರೋಪಿಗಳನ್ನು ಬಂಧಿಸಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications