ಜೈಲಿನಲ್ಲಿರುವ ಚಿದಂಬರಂಗೆ ತಮಿಳಿನಲ್ಲಿ ಬರ್ಥಡೇ ಶುಭ ಕೋರಿದ ಮೋದಿ!
Recommended Video
ನವದೆಹಲಿ, ಸೆಪ್ಟೆಂಬರ್ 24: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳುಹಿಸಿದ್ದ ಜನ್ಮದಿನದ ಶುಭಾಶಯ ತಿಳಿಸುವ ಪತ್ರ ಅವರ ಕೈಸೇರಿದೆ. ಈ ಬಗ್ಗೆ ಚಿದಂಬರಂ ಅವರು ಮಂಗಳವಾರ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಮೋದಿ ಅವರು ತಮಿಳಿನಲ್ಲಿ ಕಳುಹಿಸಿರುವ ಶುಭಾಶಯ ಪತ್ರದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ ಚಿದಂಬರಂ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ತಮಿಳುನಾಡಿನ ಸಿವಗಂಗಾದಲ್ಲಿರುವ ಚಿದಂಬರಂ ಅವರ ವಿಳಾಸಕ್ಕೆ ಪತ್ರ ಕಳುಹಿಸಲಾಗಿದ್ದು, 'ನಿಮ್ಮ ಜನ್ಮದಿನಕ್ಕೆ ನನ್ನ ಹೃದಯಪೂರ್ವಕ ಶುಭಾಶಯಗಳನ್ನು ವ್ಯಕ್ತಪಡಿಸಲು ಹರ್ಷಿಸುತ್ತೇನೆ. ಆ ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ನೀವು ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸಲು ಆಶೀರ್ವದಿಸಲಿ' ಎಂದು ತಮಿಳಿನಲ್ಲಿ ಬರೆಯಲಾಗಿದೆ.

ಚಿದಂಬರಂ ಅವರು ಸೆ. 16ರಂದು 74ನೇ ವಯಸ್ಸಿಗೆ ಕಾಲಿಟ್ಟಿದ್ದಾರೆ. ಜನ್ಮದಿನವನ್ನೂ ಅವರು ತಿಹಾರ್ ಜೈಲಿನಲ್ಲಿಯೇ ಕಳೆದಿದ್ದಾರೆ.
ಮೋದಿ ಅವರ ಹಾರೈಕೆಗೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ ನೀಡಿರುವ ಚಿದಂಬರಂ, ತಾವು ಜನರ ಸೇವೆ ಮುಂದುವರಿಸಲು ಬಯಸಿರುವುದಾಗಿ ಹೇಳಿದ್ದಾರೆ. ಆದರೆ ದುರದೃಷ್ಟವಶಾತ್ ಮೋದಿ ಅವರ ಸರ್ಕಾರದ ತನಿಖಾ ಸಂಸ್ಥೆಗಳು ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
'ಪ್ರಸ್ತುತದ ಹಿಂಸೆ ಅಂತ್ಯಗೊಂಡ ಬಳಿಕ ಮೋದಿ ಅವರ ಹಾರೈಕೆಯಂತೆಯೇ ನಾನು ಜನರ ಸೇವೆ ಸಲ್ಲಿಸಲು ಕಾತರನಾಗಿದ್ದೇನೆ' ಎಂದು ಚಿದಂಬರಂ ತಮಿಳಿನಲ್ಲಿಯೇ ಉತ್ತರ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications