ಜಾರ್ಖಂಡ್ ಗುಂಪು ಹತ್ಯೆ: ಘಟನೆ ಬಗ್ಗೆ ಅಪಾರ ನೋವಿದೆ ಎಂದ ಮೋದಿ
ನವದೆಹಲಿ, ಜೂನ್ 26: ದೇಶದಾದ್ಯಂತ ಚರ್ಚೆ ಆಗುತ್ತಿರುವ ಜಾರ್ಖಂಡ್ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ಥಳಿಸಿ ಹತ್ಯೆ ಮಾಡಿರುವ ಬಗ್ಗೆ ಕೊನೆಗೂ ಪ್ರಧಾನಿ ಮೋದಿ ಅವರು ಮೌನ ಮುರಿದಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಮಾತನಾಡಿದ ನರೇಂದ್ರ ಮೋದಿ ಅವರು, ಜಾರ್ಖಂಡ್ನ ಗುಂಪು ಹತ್ಯೆಯಿಂದ ನೋವಾಗಿದೆ ಆದರೆ ಇದಕ್ಕೆ ಜಾರ್ಖಂಡ್ ರಾಜ್ಯವನ್ನು ದೂಷಿಸಲು ಸಾಧ್ಯವಿಲ್ಲ ಎಂದು ಸರ್ಕಾರದ ಬೆನ್ನಿಗೆ ನಿಂತಿದ್ದಾರೆ.
ರಾಜ್ಯಸಭೆಯಲ್ಲಿ ಕೆಲವರು ಜಾರ್ಖಂಡ್ ಅನ್ನು ಗುಂಪು ಹತ್ಯೆಗಳ ತವರು ಎಂದು ಕರೆದಿದ್ದಾರೆ, ಒಂದು ರಾಜ್ಯವನ್ನು ಅವಮಾನಿಸುವ ಹಕ್ಕು ಇಲ್ಲಿ ಯಾರಿಗೂ ಇಲ್ಲ. ಅಷ್ಟೆ ಅಲ್ಲದೆ, ಜಾರ್ಖಂಡ್ ಅನ್ನು ಗುಂಪು ಹತ್ಯೆಯ ತವರು ಎಂದ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.

'ಜಾರ್ಖಂಡ್ನಲ್ಲಿ ನಡೆದ ಘಟನೆಯಿಂದ ದುಖಃವಾಗಿದೆ'
ಜಾರ್ಖಂಡ್ನಲ್ಲಿ ನಡೆದ ಘಟನೆಯಿಂದ ತೀವ್ರ ದುಖಃವಾಗಿದೆ, ಹತ್ಯೆಯಲ್ಲಿ ಭಾಗೀಧಾರರಾದವರಿಗೆ ಗರಿಷ್ಟ ಶಿಕ್ಷೆ ಆಗಬೇಕಿದೆ, ಆದರೆ ಈ ವಿಷಯದಲ್ಲಿ ರಾಜ್ಯವನ್ನು ದೂಶಿಸುವುದು ಸರಿಯಲ್ಲ ಎಂದು ಮೋದಿ ಹೇಳಿದ್ದಾರೆ.

'ಜೈ ಶ್ರೀರಾಮ್, ಜೈ ಹನುಮಾನ್ ಹೇಳುವಂತೆ ಒತ್ತಾಯ'
ಜೂನ್ 18 ರಂದು 22 ವರ್ಷದ ತಬ್ರೇಜ್ ಅನ್ಸಾರಿ ಎಂಬಾತ ಬೈಕ್ ಕದ್ದಿದ್ದಾನೆ ಎಂದು ಆರೋಪಿಸಿ ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಅಷ್ಟೆ ಅಲ್ಲದೆ, ಆತನಿಂದ ಜೈ ಶ್ರೀರಾಮ್, ಜೈ ಹನುಮಾನ್ ಎಂದು ಒತ್ತಾಯದಿಂದ ಹೇಳಿಸಲಾಗಿದೆ.

ಕಂಬಕ್ಕೆ ಕಟ್ಟಿ ಗಂಟೆಗಟ್ಟಲೆ ಹಲ್ಲೆ
ಕಂಬಕ್ಕೆ ಕಟ್ಟಿ ಗಂಟೆ ಗಟ್ಟಲೆ ಆತನ ಮೇಲೆ ಹಲ್ಲೆ ಮಾಡಲಾಗಿದ್ದು, ಆ ನಂತರ ಆತನನ್ನು ಪೊಲೀಸ್ಗೆ ಒಪ್ಪಿಸಲಾಗಿದೆ. ಆದರೆ ತೀವ್ರ ಗಾಯಗಳಿಂದ ಘಾಸಿಗೊಂಡಿದ್ದ ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆ ವಿರುದ್ಧ ಭಾರಿ ಆಕ್ರೋಶ ದೇಶದಾದ್ಯಂತ ಕೇಳಿಬರುತ್ತಿದೆ.

ಗುಲಾಂ ನಬಿ ಆಜಾದ್ ಮಾತನಾಡಿದ್ದರು
ನಿನ್ನೆಯಷ್ಟೆ ಕಾಂಗ್ರೆಸ್ನ ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಅವರು ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿ, ಗುಂಪು ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದರು. ಮತ್ತು ಜಾರ್ಖಂಡ್ನಲ್ಲಿ ಈ ಹಿಂದೆ ನಡೆದಿದ್ದ ಗುಂಪು ಹತ್ಯೆಗಳ ಬಗ್ಗೆ ಮಾಹಿತಿ ನಿಡಿ, ಜಾರ್ಖಂಡ್ ಸರ್ಕಾರವನ್ನು ಟೀಕಿಸಿದ್ದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications