ಕಾಂಗ್ರೆಸ್ನ ಯಾವ ವಿಧವೆಗೆ ಲಾಭವಾಗಿದೆ? ಮೋದಿ ಹೇಳಿಕೆಗೆ ಕೆರಳಿದ ಕೈ ಪಡೆ
ನವದೆಹಲಿ, ಡಿಸೆಂಬರ್ 8: ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಡುವಿನ ಮಾತಿನ ಚಕಮಕಿ ಇನ್ನೊಂದು ಮಜಲಿಗೆ ತಲುಪಿದೆ.
ರಾಜಸ್ತಾನದ ಜೈಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅನ್ನು ಟೀಕಿಸಿ ಮೋದಿ ಬಳಸಿದ 'ವಿಧವೆ' ಪದ ಭಾರಿ ವಿವಾದ ಸೃಷ್ಟಿಸಿದೆ.
ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಹುಟ್ಟದೇ ಇರುವ ಹೆಣ್ಣುಮಕ್ಕಳನ್ನು ವಿಧವೆಯರೆಂದು ಪಟ್ಟಿ ಮಾಡಿ ಅವರ ಹೆಸರಿನಲ್ಲಿ ಪಿಂಚಣಿ ಪಡೆದುಕೊಳ್ಳಲಾಗಿತ್ತು. ಈ ಹಣ ಕಾಂಗ್ರೆಸ್ನ ಯಾವ ವಿಧವೆಯ ಬ್ಯಾಂಕ್ ಖಾತೆಗೆ ಹೋಗಿದೆ? ಎಂದು ಮೋದಿ ಪ್ರಶ್ನಿಸಿದ್ದರು.
ಕಾಂಗ್ರೆಸ್ನ ವಿಧವೆ ಎಂಬ ಪದವನ್ನು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಕುರಿತಾಗಿ ಆಡಿದ್ದು. ಈ ಮೂಲಕ ಸೋನಿಯಾ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
'ನಗರದ ಹುಡುಗಿ'ಯರನ್ನು 'ವಿಧವೆ'ಯರು ಎಂದು ಪಟ್ಟಿ ಮಾಡಿ 'ಪಿಂಚಣಿ ಸ್ವೀಕರಿಸಲಾಗಿದೆ' ಎಂದು ನಮೂದಿಸುವ ಹಗರಣವನ್ನು ಕಾಂಗ್ರೆಸ್ ಸರ್ಕಾರ ನಡೆಸಿತ್ತು ಎಂದು ಮೋದಿ ಟೀಕಿಸಿದ್ದರು.
ಮೋದಿ ಅವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ನ ಅನೇಕ ಮುಖಂಡರು ಅವರ ವಿರುದ್ಧ ಹರಿಹಾಯ್ದಿದ್ದಾರೆ.

ಸಾರ್ವಜನಿಕರ ಹಣ ಕದ್ದಿದ್ದರು
ಮಂಗಳವಾರ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಮತ್ತು ದುರಾಡಳಿತದ ಆರೋಪ ಮಾಡಿದ್ದ ನರೇಂದ್ರ ಮೋದಿ, ರಾಜಸ್ಥಾನದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಹಿರಿಯ ನಾಗರಿಕರ ಪಿಂಚಣಿಗಳು ಮತ್ತು ಶಾಲಾ ಮಕ್ಕಳ ವಿದ್ಯಾರ್ಥಿವೇತನ ಸೇರಿದಂತೆ ಸಾರ್ವಜನಿಕರ ಹಣವನ್ನು ಕದ್ದಿದ್ದರು ಎಂದು ಆರೋಪಿಸಿದ್ದರು.
'ಅವರು ಹಿರಿಯ ನಾಗರಿಕ ಪಿಂಚಣಿ ಹಣವನ್ನು ಕದ್ದಿದ್ದರು. ದಿವ್ಯಾಂಗರ ಪಿಂಚಣಿ ಹಣವನ್ನೂ ಕದ್ದಿದ್ದರು. ಶಾಲಾ ಮಕ್ಕಳ ವಿದ್ಯಾರ್ಥಿವೇತನವನ್ನು ಲೂಟಿ ಮಾಡಲಾಯಿತು. ಮಧ್ಯಾಹ್ನದ ಬಿಸಿಯೂಟ ಯೋಜನೆಯಿಂದಲೂ ಹಣ ದೋಚಿದ್ದರು' ಎಂದು ಆರೋಪಿಸಿದ್ದರು.

ಹುಟ್ಟದಿರುವವರೂ ವಿಧವೆಯರು!
'ನಾಮದಾರಿಗಳು ಏಕೆ ಚಿಂತಾಕ್ರಾಂತರಾಗಿದ್ದಾರೆ? ಕಾಂಗ್ರೆಸ್ ಸದಸ್ಯರಿಗೆ ಏಕೆ ನಿದ್ದೆ ಬರುತ್ತಿಲ್ಲ? ಅದಕ್ಕೆ ಕಾರಣವಿದೆ. ಮೋದಿ ತೆಗೆದುಕೊಳ್ಳುವ ಪ್ರತಿ ಕ್ರಮವೂ ಅವರೆಲ್ಲರ ಅಂಗಡಿಗಳನ್ನು ಒಂದೊಂದಾಗಿ ಮುಚ್ಚಲು ಕಾರಣವಾಗುತ್ತಿವೆ. ಹುಟ್ಟದೇ ಇರುವ ಹೆಣ್ಣುಮಕ್ಕಳನ್ನು ಕಾಂಗ್ರೆಸ್ ಸರ್ಕಾರದ ದಾಖಲೆಗಳಲ್ಲಿ ವಿಧವೆ ಎಂದು ದಾಖಲಿಸುವಂತಹ ಸರ್ಕಾರವನ್ನು ಕಾಂಗ್ರೆಸ್ ನಡೆಸಿತ್ತು.

ಕಾಂಗ್ರೆಸ್ನ ಯಾವ ವಿಧವೆಗೆ ಹಣ?
ಜನಿಸದೆಯೇ ಇರುವ ಹೆಣ್ಣುಮಕ್ಕಳು ವಿಧವೆಯರಾಗುತ್ತಾರೆ ಮತ್ತು ಪಿಂಚಣಿ ಪಡೆಯಲೂ ಆರಂಭಿಸುತ್ತಾರೆ. ಈ ಹಣವನ್ನು ಪಡೆದುಕೊಂಡ ಈ ವಿಧವೆಯರು ಯಾರು? ಈ ಹಣವನ್ನು ಕಾಂಗ್ರೆಸ್ನ ಯಾವ ವಿಧವೆಯ ಬ್ಯಾಂಕ್ ಖಾತೆ ಪಡೆದುಕೊಂಡಿದೆ?' ಎಂದು ಮೋದಿ ಪ್ರಶ್ನಿಸಿದ್ದರು.
|
ಮಾನಸಿಕ ಅಸ್ವಸ್ಥತೆಯಿಂದ ಹೊರಬರಲಿ
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ವಿಧವೆಯರನ್ನು ಹೀಯಾಳಿಸುವ ಮೂಲಕ ಸಮಸ್ತ ಸ್ತ್ರಿಕುಲವನ್ನು ಅವಮಾನಿಸಿದ್ದಾರೆ. ಮಾಡಿದ್ದಾರೆ. ತನ್ನ ತಾಯಿ ಕೂಡಾ ವಿಧವೆ ಎನ್ನುವುದನ್ನು ಮರೆತಿರುವ ಮೋದಿಯವರು ದ್ವೇಷಾಸೂಯೆಯ ರಸಾತಲ ತಲುಪಿದ್ದಾರೆ. ಅವರು ಇಂತಹ ಮಾನಸಿಕ ಅಸ್ವಸ್ಥತೆಯಿಂದ ಹೊರಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಹೀಯಾಳಿಸದೆ ಇರುವರೇ?
ತನ್ನ ದೇಹ ಸೌಂದರ್ಯಕ್ಕೆ ಅಣಬೆ ತಿನ್ನಲು ಹಿಮಾಲಯಕ್ಕೆ ಹೋಗುವುದೊಂದೆ ಘನಕಾರ್ಯ! ಸೈನಿಕರ ಸಂಬಳ ಹೆಚ್ಚಿಸೊ ಬೇಡಿಕೆ ಕೂಡ ನಿರ್ದಾಕ್ಷಣ್ಯವಾಗಿ ನಿರಾಕರಿಸಿದ ಪುಣ್ಯಾತ್ಮ! ದೇಶವಿದೇಶ ಸೂಟು ಬೂಟುಗಳ ಸರದಾರ! ಹೆಣ್ಣಿನ ಬಗ್ಗೆ ಗೌರವ ಇರಲು ತಾಯಿ ಹೆಂಡತಿ ಅಕ್ಕ ತಂಗಿ ಯಾರ ಹಂಗೂ ಇಲ್ಲ ಅಂದಮೇಲೆ ಒಬ್ಬ ಯೋಧನ ಪತ್ನಿಯನ್ನು ವಿಧವೆ ಅಂತ ಹೀಯಾಳಿಸದೆ ಏನು ಮಾಡುತ್ತಾರೆ ಎಂದು ಜಯಂತಿ ಎಂಬುವವರು ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
|
ಪ್ರಾರ್ಥನೆ ಫಲಿಸುವುದಿಲ್ಲ
ತಾಯಿಯ ಆಶೀರ್ವಾದ ಪಡೆಯುವುದನ್ನೇ ಒಂದು ಡಜನ್ಗೂ ಅಧಿಕ ಕ್ಯಾಮೆರಾಗಳನ್ನು ಇಟ್ಟುಕೊಂಡು ಶೂಟ್ ಮಾಡಿ ಮಾರ್ಕೆಟಿಂಗ್ ಮಾಡುತ್ತಿರುವ ವ್ಯಕ್ತಿಯ ಬಗೆಗಿನ ನಿಮ್ಮ ಪ್ರಾರ್ಥನೆ ಫಲಿಸುವುದಿಲ್ಲ!! ಎಂದು ಲೋಕೇಶ್ ಎಂಬುವವರು ಸಿದ್ದರಾಮಯ್ಯ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications