ಪ್ರಧಾನಿಯಾದ ಬಳಿಕ ಮೊದಲ ಮಹತ್ವದ ನಿರ್ಧಾರ ಪ್ರಕಟಿಸಿದ ಮೋದಿ
ನವದೆಹಲಿ, ಮೇ 31: ಎರಡನೆಯ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶುಕ್ರವಾರ ನರೇಂದ್ರ ಮೋದಿ ಅವರ ತಮ್ಮ ಮೊಟ್ಟಮೊದಲ ನಿರ್ಧಾರವನ್ನು ಕೈಗೊಂಡಿದ್ದಾರೆ.
ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಸೈನಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನದಲ್ಲಿ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡಿದ್ದಾರೆ. ಈ ಯೋಜನೆಯನ್ನು ಪೊಲೀಸ್ ಸಿಬ್ಬಂದಿಗೂ ವಿಸ್ತರಿಸಿರುವುದು ಮತ್ತೊಂದು ಮಹತ್ವದ ನಡೆಯಾಗಿದೆ.
'ಪ್ರಧಾನಿಯಾಗಿ ನನ್ನ ಮೊದಲ ನಿರ್ಧಾರ ಭಾರತವನ್ನು ರಕ್ಷಿಸುವವರಿಗೆ ಅರ್ಪಿಸಲಾಗಿದೆ' ಎಂದು ಮೋದಿ ಅವರು ರಾಷ್ಟ್ರೀಯ ರಕ್ಷಣಾ ನಿಧಿ ಅಡಿಯಲ್ಲಿನ 'ಪ್ರಧಾನ ಮಂತ್ರಿಗಳ ವಿದ್ಯಾರ್ಥಿ ವೇತನ ಯೋಜನೆ'ಯಲ್ಲಿನ ಬದಲಾವಣೆಗಳನ್ನು ಅಂಗೀಕರಿಸಿದ್ದಾರೆ.
ಪ್ರಧಾನಿಯಾಗಿ ಎರಡನೆಯ ಅವಧಿಗೆ ಅಧಿಕಾರ ಸ್ವೀಕರಿಸಿದ ನಂತರ ಮೋದಿ ಅವರು ಮೊದಲ ಕಡತಕ್ಕೆ ಸಹಿಹಾಕಿದ್ದಾರೆ. ರಾಷ್ಟ್ರೀಯ ರಕ್ಷಣಾ ನಿಧಿ ಅಡಿಯಲ್ಲಿ ಬರುವ ವಿದ್ಯಾರ್ಥಿವೇತನದ ದರವನ್ನು ಹೆಚ್ಚಿಸಲು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ಯೋಜನೆಯಲ್ಲಿ ರಾಜ್ಯ ಪೊಲೀಸ್ ಸಿಬ್ಬಂದಿ ಕೂಡ ಸೇರ್ಪಡೆಗೊಂಡಿದ್ದಾರೆ.

ಗಂಡು ಮತ್ತು ಹೆಣ್ಣುಮಕ್ಕಳಿಗೆ ಪ್ರತ್ಯೇಕ
ಈ ನಿರ್ಧಾರದ ಅನ್ವಯ ಸೇವೆಯಲ್ಲಿರುವಾಗಲೇ ಬಲಿಯಾಗುವ ಯೋಧರ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಏರಿಸಲಾಗಿದೆ. ಇದರಲ್ಲಿ ಗಂಡುಮಕ್ಕಳಿಗೆ ಶೇ 25ರಷ್ಟು ಹೆಚ್ಚಳ ಮಾಡಿದ್ದರೆ, ಹೆಣ್ಣುಮಕ್ಕಳ ವಿದ್ಯಾರ್ಥಿ ವೇತನವನ್ನು ಶೇ 33ರಷ್ಟು ಹೆಚ್ಚಿಸಲಾಗಿದೆ.
|
ರಾಜ್ಯ ಪೊಲೀಸರ ಕುಟುಂಬಕ್ಕೂ ವಿಸ್ತರಣೆ
ಈ ಮಹತ್ವದ ಸ್ಕಾಲರ್ಷಿಪ್ ಯೋಜನೆಯನ್ನು ಭಯೋತ್ಪಾದಕರು ಅಥವಾ ನಕ್ಸಲ್ ದಾಳಿಗಳಲ್ಲಿ ಹುತಾತ್ಮರಾಗುವ ರಾಜ್ಯ ಪೊಲೀಸ್ ಅಧಿಕಾರಿಗಳ ಮಕ್ಕಳಿಗೂ ವಿಸ್ತರಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ.

ಹುತಾತ್ಮ ಪೊಲೀಸರ ಮಕ್ಕಳಿಗೆ ಸಿಗುತ್ತಿರಲಿಲ್ಲ
ಈ ಮುಂಚೆ ತುಕಾರಾಂ ಒಂಬ್ಳೆ ಅವರಂತಹ ಹುತಾತ್ಮರ ಮಕ್ಕಳು ಈ ಯೋಜನೆಗೆ ಅರ್ಹರಾಗಿರಲಿಲ್ಲ. ಈ ಕೊರತೆಯನ್ನು ಈಗ ನಿವಾರಿಸಲಾಗಿದೆ. ಹಾಗೂ ರಾಜ್ಯ ಪೊಲೀಸ್ ಪಡೆಗಳಲ್ಲಿ ಭಯೋತ್ಪಾದನೆ/ನಕ್ಸಲರ ವಿರುದ್ಧ ಹೋರಾಡುವಾಗ ಮೃತಪಟ್ಟವರ ಕುಟುಂಬದವರಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ. ಪೊಲೀಸ್ ಅಧಿಕಾರಿ ತುಕಾರಾಂ ಒಂಬ್ಳೆ ಅವರು ಮುಂಬೈನಲ್ಲಿ ನಡೆದ 26/11 ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟಿದ್ದರು.

ಮೊದಲ ಸಂಪುಟ ಸಭೆ
ಪ್ರಧಾನಿ ಮೋದಿ ಅವರು ಶುಕ್ರವಾರ ಸಂಜೆ ಸಚಿವ ಸಂಪುಟದ ಮೊದಲ ಸಭೆ ನಡೆಸಿದ್ದಾರೆ. ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೋದಿ ಹಾಗೂ 58 ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದರು. 17ನೇ ಲೋಕಸಭೆಯ ಹೊಸ ಕೇಂದ್ರ ಸಂಪುಟದಲ್ಲಿ 24 ಸಂಪುಟ ದರ್ಜೆ ಸಚಿವರು, 9 ರಾಜ್ಯ ಖಾತೆ ಸಚಿವರು (ಸ್ವತಂತ್ರ) ಮತ್ತು 24 ರಾಜ್ಯ ಸಚಿವರು ಇದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications