ಕಾಂಗ್ರೆಸ್ ಭ್ರಷ್ಟಾಚಾರದಲ್ಲಿಯೇ ಕಾಲಹರಣ ಮಾಡಿದೆ
ನವದೆಹಲಿ, ಮಾ. 31 : "ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಸಾಧಿಸಿದ್ದೇನು ಇಲ್ಲ. ಹಗರಣನ್ನು ಮೈಮೇಲೆ ಎಳೆದುಕೊಂಡು ಅವುಗಳನ್ನು ಮುಚ್ಚಿಹಾಕುವುದರಲ್ಲೇ ಕಾಲಹರಣ ಮಾಡಿದೆ" ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಅಸ್ಸಾಂನ ಇಟಾನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕಾಂಗ್ರೆಸ್ ಸರ್ಕಾರದ ಈಗಿನ ಪರಿಸ್ಥಿತಿಯನ್ನು ನೋಡಿದರೆ, ಅದು ಚುನಾವಣೆಯಲ್ಲಿ ಎರಡಂಕಿಯಷ್ಟು ಸ್ಥಾನಗಳನ್ನು ಪಡೆಯುವುದು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಹಗರಣಗಳನ್ನು ಮೈಮೇಲೆ ಎಳೆದುಕೊಂಡು ಅವುಗಳನ್ನು ಮುಚ್ಚಿಹಾಕುವುದರಲ್ಲೇ ಕಾಲಹರಣ ಮಾಡುತ್ತಿದೆ. ಜನರಿಗಾಗಿ ಸರ್ಕಾರ ಏನೂ ಮಾಡಿಲ್ಲ, ದೇಶದ ಜನತೆ ಇದಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಮೋದಿ ಹೇಳಿದರು. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿ]
ಮೋದಿ ಭಾಷಣದ ಮುಖ್ಯಾಂಶಗಳು
* ಕಾಂಗ್ರೆಸ್ ಸರ್ಕಾರ 10 ವರ್ಷಗಳಲ್ಲಿ ದುರಾಡಳಿತ ನಡೆಸಿ, ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ
* ಹಗರಣಗಳನ್ನು ಮುಚ್ಚಿ ಹಾಕುವುದರಲ್ಲೇ ಕಾಂಗ್ರೆಸ್ ಕಾಲಹರಣ ಮಾಡಿದೆ
* ಭ್ರಷ್ಟಾಚಾರದಿಂದ ತುಂಬಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನರು ತಕ್ಕಪಾಠ ಕಲಿಸುತ್ತಾರೆ
* ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಎರಡಂಕಿಯಷ್ಟು ಸ್ಥಾನಗಳಿಸುವುದಿಲ್ಲ
Madam Sonia says Congress fulfils its promises but what happened to Congress promise of reducing prices in 100 days: Narendra Modi
— narendramodi_in (@narendramodi_in) March 31, 2014 * ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಸುಮಾರು 10 ಬಾರಿ ದೆಹಲಿಗೆ ಆಗಮಿಸಿ, ಮೇಡಂ (ಸೋನಿಯಾ ಗಾಂಧಿ)ರನ್ನು ಭೇಟಿ ಮಾಡಿದ್ದಾರೆ.
* ತಮ್ಮ ರಾಜ್ಯದ ಜನತೆಯನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲು ನಿಮ್ಮ ಸಿಎಂಗೆ ಸಮಯ ಸಿಗುತ್ತಿಲ್ಲ
* ಗಡಿಯಲ್ಲಿ ಎರಡು ರಾಜ್ಯಗಳ ಜನರು ಬಡಿದಾಡಿಕೊಂಡು ಸಾಯುತ್ತಿದ್ದಾರೆ. ಅಲ್ಲಿನ ಸಮಸ್ಯೆ ನಿವಾರಣೆ ಆಗಿಲ್ಲ
* ಕಾಂಗ್ರೆಸ್ ನಾಯಕರು ಎಂದೂ ಜನರ ಬಳಿಗೆ ಹೋಗಿ ಸಮಸ್ಯೆ ಕೇಳಿಲ್ಲ
Why should people of Assam remember those who have forgotten the state and their people: Narendra Modi in Assam http://t.co/FsxK4LRG1I
— narendramodi_in (@narendramodi_in) March 31, 2014 * ಕಾಂಗ್ರೆಸ್ ಗಡಿ ಭಾಗದ ರಾಜ್ಯಗಳನ್ನು ಯಾವಾಗಲೂ ನಿರ್ಲಕ್ಷಿಸುತ್ತದೆ
* ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ, ರಾಜ್ಯದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ
Your Congress leaders have all the time to go to meet Soniaji but not to meet people. Our leaders went to wipe people's tears:Narendra Modi
— narendramodi_in (@narendramodi_in) March 31, 2014 -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications