ಮೋದಿ ಸಂಪುಟ ಸೇರಲಿರುವ ಸಂಸದರ ಪ್ರಾಥಮಿಕ ಪಟ್ಟಿ
ನವದೆಹಲಿ, ಮೇ 30: ನರೇಂದ್ರ ಮೋದಿ ಅವರು ಇಂದು ಸಂಜೆ ಏಳು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ ಅದಕ್ಕೆ ಮುನ್ನಾ ತಮ್ಮ ಸಂಪುಟ ಸೇರಲಿರುವ ಸಚಿವರೊಂದಿಗೆ ಚಹಾ ಕೂಟದಲ್ಲಿ ಅವರು ಭಾಗವಹಿಸಲಿದ್ದಾರೆ.
ಸ್ಮೃತಿ ಇರಾನಿ, ರಾಮ್ವಿಲಾಸ್ ಪಾಸ್ವಾನ್, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಸೇರಿ ಇನ್ನೂ ಹಲವರಿಗೆ ಸಚಿವ ಸಂಪುಟದಲ್ಲಿ ಇದ್ದಾರೆ. ರಾಜ್ಯದ ಮೂವರು ಸಂಸದರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ ಆಗಿದೆ. ಅವರೂ ಸಹ ಇಂದು ಸಂಜೆ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೊಸ ಸಚಿವರಿಗೆ ಸ್ವತಃ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರೇ ಕರೆ ಮಾಡಿ ವಿಷಯ ತಿಳಿಸುತ್ತಿದ್ದು, ಸಂಜೆ ಸಭೆಗೆ ಆಹ್ವಾನ ನೀಡುತ್ತಿದ್ದಾರೆ. ಮೋದಿ ಸಂಪುಟ ಸೇರುತ್ತಿರುವವರ ಪಟ್ಟಿ ಇಂತಿದೆ...

ಸಚಿವರಾಗಲಿರುವವರ ಪಟ್ಟಿ
ಅಮಿತ್ ಶಾ, ಸ್ಮೃತಿ ಇರಾನಿ, ಸುಷ್ಮಾ ಸ್ವರಾಜ್, ನಿರ್ಮಲಾ ಸೀತಾರಾಮನ್, ನಿತಿನ್ ಗಡ್ಕರಿ, ಸದಾನಂದಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿ, ಕಿರಣ್ ರಿಜುಜು, ಅರ್ಜುನ್ ಮೇಘವಾಲ್, ಪಿಯೂಶ್ ಘೋಯಲ್, ರವಿಶಂಕರ್ ಪ್ರಸಾದ್, ರಾಮದಾಸ್ ಅಠಾವಳೆ, ಪ್ರಕಾಶ್ ಜಾವಡೇಕರ್, ಬಾಬುಲ್ ಸುಪ್ರಿಯೋ, ಕೈಲಾಶ್ ಚೌಧರಿ, ಜಿ.ಕೃಷ್ಣ ರೆಡ್ಡಿ ಇವರುಗಳು ಈವರೆಗೂ ಅಮಿತ್ ಶಾ ಅವರಿಂದ ಕರೆ ಸ್ವೀಕರಿಸಿದ್ದಾರೆ.

ಇವರುಗಳೂ ಸಚಿವರಾಗಲಿದ್ದಾರೆ
ರಾವ್ ಇಂದ್ರಜಿತ್ ಸಿಂಗ್, ಕ್ರಿಶನ್ ಪಾಲ್ ಗುರ್ಗಲ್, ಎಚ್.ಕೌರ್, ಜೀತೇಂದ್ರ ಸಿಂಗ್, ಪುರುಷೋತ್ತಮ ರೂಪಲ್, ತಾವರ್ ಚಂದ್ ಗೆಹ್ಲೋಟ್, ರತನ್ ಲಾಲ್ ಕಠಾರಿಯಾ, ರಮೇಶ್ ಪೋಕ್ರಿಯಾಲ್ ನಿಶಾಂಕ್, ಆರ್.ಸಿ.ಪಿ.ಸಿಂಗ್, ಕಿಶನ್ ರೆಡ್ಡಿ, ಎ.ರವೀಂದ್ರ ನಾಥ್, ಕೈಲಾಶ ಚೌಧರಿ, ಸೋಮ್ ಪ್ರಕಾಶ್, ರಾಮೇಶ್ವರ್ ಥೇಲಿ, ಸುಬ್ರಾತ್ ಪಾಠಕ್, ದೇಬಾಶ್ರೀ ಚೌಧರಿ, ಸುರೇಶ್ ಅಂಗಡಿ ಅವರುಗಳು ಸಚಿವರಾಗಲಿದ್ದಾರೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವವರು
ಶ್ರೀಪಾದ್ ಯೆಸ್ಸೋ ನಾಯಕ್, ದೇಬಶ್ರೀ ಚೌಧರಿ, ರಮೇಶ್ ಪೋಕಿರಿಯಾಲ್, ಸಂತೋಶ್ ಗಂಗ್ವಾರ್, ವಿ.ಕೆ.ಸಿಂಗ್, ನಿರಂಜನ್ ಜ್ಯೋತಿ, ಅರ್ಜುನ್ ರಾಂ ಮೇಘಾವಲ್, ನಿತ್ಯಾನಂದ ರೈ, ಮಾನ್ಶುಕ್ ಲಾಲ್ ಮಾಂಡವಿಯಾ, ಗಿರಿರಾಜ್ ಸಿಂಗ್, ಭೂಪೇಂದ್ರ ಯಾದವ್, ಧರ್ಮೇಂದ್ರ ಪ್ರಧಾನ್, ಮುಕ್ತೇಂದ್ರ ಅಬ್ಬಾಸ್, ಹರ್ಸಿಮ್ರತ್ ಕೌರ್ ಬಾದಲ್, ಬಾಬುಲ್ ಸುಪ್ರಿಯೋ (ಎಸ್ಎಡಿ) ಇವರುಗಳೂ ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸುಷ್ಮಾ ಸ್ವರಾಜ್ ಅವರಿಗೆ ಮತ್ತೆ ಅವಕಾಶ
ಸುಷ್ಮಾ ಸ್ವರಾಜ್ ಅವರು ತಾವು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದರು ಆದರೆ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡುವ ಉಮೇದನ್ನು ಬಿಜೆಪಿ ಹೊಂದಿದೆ. ಆದರೆ ಸಚಿವ ಸ್ಥಾನವನ್ನು ಅವರು ಒಪ್ಪಿಕೊಳ್ಳುತ್ತಾರೆಯೇ ಇಲ್ಲವೇ ಎಂಬುದು ಪ್ರಶ್ನೆಯಾಗಿದೆ. ಅರುಣ್ ಜೇಟ್ಲಿ ಅವರು ಈಗಾಗಲೇ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ.

ಮೋದಿ-ಅಮಿತ್ ಶಾ ನೇತೃತ್ವದಲ್ಲಿ ಹಲವು ಸಭೆ
ಮೋದಿ-ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿಯ ಪ್ರಮುಖ ಮುಖಂಡರು ಹಲವು ಸಭೆಗಳನ್ನು ನಡೆಸಿದ ನಂತರ ಈ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಇನ್ನೂ ಹಲವು ಮಂದಿ ಸಂಸದರನ್ನು ಸಚಿವರನ್ನಾಗಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಇಂದು ಮೋದಿ ಅವರ ಜೊತೆಗೆ ಕನಿಷ್ಟ 50 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸದಾನಂದಗೌಡ, ಅಂಗಡಿ, ಜೋಶಿಗೆ ಸಚಿವ ಸ್ಥಾನ
ರಾಜ್ಯದ ಮೂವರು ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ದೊರೆತಿದೆ. ಸದಾನಂದಗೌಡ ಅವರು ಎರಡನೇಯ ಬಾರಿ ಕೇಂದ್ರ ಮಂತ್ರಿ ಆಗುವವರಿದ್ದಾರೆ. ಅವರು ಕಳೆದ ಅವಧಿಯಲ್ಲೂ ಮಂತ್ರಿ ಆಗಿದ್ದರು. ಪ್ರಹ್ಲಾದ್ ಜೋಶಿ ಮತ್ತು ಸುರೇಶ್ ಅಂಗಡಿ ಅವರಿಗೆ ಮೊದಲ ಬಾರಿ ಕೇಂದ್ರದ ಮಂತ್ರಿ ಸ್ಥಾನ ದೊರೆತಿದೆ.

ಮಿತ್ರಪಕ್ಷಗಳಿಗೆ ಕೇವಲ ಒಂದು ಸ್ಥಾನ
ಮಿತ್ರ ಪಕ್ಷಗಳಲ್ಲಿ ರಾಮ್ವಿಲಾಸ್ ಪಾಸ್ವಾನ್ ಅವರಿಗೆ ಮಾತ್ರವೇ ಪ್ರಾರಂಭಿಕವಾಗಿ ಸಚಿವ ಸ್ಥಾನ ನೀಡಲಾಗಿದೆ. ಶಿವಸೇನೆಗೂ ಒಂದು ಸ್ಥಾನ ನೀಡುವ ಸಾಧ್ಯತೆ ಇದೆ. ಇದು ಪ್ರಾರಂಭಿಕ ಹಂತದ ಸಂಪುಟ ರಚನೆ ಆಗಿದ್ದು, ರಾಜ್ಯ ಖಾತೆಗಳು ಮತ್ತಿತರ ಉಳಿಕೆ ಖಾತೆಗಳನ್ನು ಕೆಲವೇ ದಿನಗಳಲ್ಲಿ ತುಂಬಲಾಗುತ್ತದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications