ವಿಶಾಖಪಟ್ಟಣಂ ವಿಷಾನಿಲ ದುರಂತ: NGT ಹೇಳಿದ್ದೇನು?
ನವದೆಹಲಿ, ಮೇ 8: ವಿಶಾಖಪಟ್ಟಣಂ ವಿಷಾನಿಲ ಸೋರಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಶುಕ್ರವಾರ ಎಲ್ಜಿ ಪಾಲಿಮರ್ಸ್ಗೆ, ಪರಿಹಾರ ಕಾರ್ಯಕ್ಕೆ ಕೂಡಲೇ 50 ಕೋಟಿ ರುಪಾಯಿ ಆರಂಭಿಕ ಠೆವಣಿ ಇಡಬೇಕು ಎಂದು ತಾಕೀತು ಮಾಡಿದೆ.
Recommended Video
ಅಲ್ಲದೇ ಘಟನೆ ಬಗ್ಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಗೆ ಎನ್ಜಿಟಿ ನೋಟಿಸ್ ನೀಡಿದೆ.
ಎನ್ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಬಗ್ಗೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸೂಚಿಸಿದೆ.

ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್ ಜಿ ಪಾಲಿಮರ್ಸ್ ಎಂಬ ಎಂಎನ್ಸಿ ಕಂಪೆನಿಯ ಕಾರ್ಖಾನೆಯಲ್ಲಿ ನಿನ್ನೆ ಮಹಾ ದುರಂತ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 11 ಜನ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ.












Click it and Unblock the Notifications