Get Updates
Get notified of breaking news, exclusive insights, and must-see stories!

ವಿಶಾಖಪಟ್ಟಣಂ ವಿಷಾನಿಲ ದುರಂತ: NGT ಹೇಳಿದ್ದೇನು?

ನವದೆಹಲಿ, ಮೇ 8: ವಿಶಾಖಪಟ್ಟಣಂ ವಿಷಾನಿಲ ಸೋರಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಶುಕ್ರವಾರ ಎಲ್‌ಜಿ ಪಾಲಿಮರ್ಸ್‌ಗೆ, ಪರಿಹಾರ ಕಾರ್ಯಕ್ಕೆ ಕೂಡಲೇ 50 ಕೋಟಿ ರುಪಾಯಿ ಆರಂಭಿಕ ಠೆವಣಿ ಇಡಬೇಕು ಎಂದು ತಾಕೀತು ಮಾಡಿದೆ.

Recommended Video

      ಗ್ಯಾಸ್ ಸೋರಿಕೆಯನ್ನು ನಿಲ್ಲಿಸಲಾಗಿದೆ ಎಂದ ಅಧಿಕಾರಿ | Vizag | Oneindia Kannada

      ಅಲ್ಲದೇ ಘಟನೆ ಬಗ್ಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಸಚಿವಾಲಯ ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಗೆ ಎನ್‌ಜಿಟಿ ನೋಟಿಸ್ ನೀಡಿದೆ.

      ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇತೃತ್ವದ ನ್ಯಾಯಪೀಠವು ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ಬಗ್ಗೆ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸೂಚಿಸಿದೆ.

      National Green Tribunal Issued The Notice To LG Polymar Company

      ವಿಶಾಖಪಟ್ಟಣಂ ಹೊರವಲಯದ ಆರ್ ಆರ್ ವೆಂಕಟಾಪುರಂ ಬಳಿಯ ಎಲ್‌ ಜಿ ಪಾಲಿಮರ್ಸ್ ಎಂಬ ಎಂಎನ್‌ಸಿ ಕಂಪೆನಿಯ ಕಾರ್ಖಾನೆಯಲ್ಲಿ ನಿನ್ನೆ ಮಹಾ ದುರಂತ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೆ 11 ಜನ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+