ನ್ಯಾಷನಲ್ ಹೆರಾಲ್ಡ್ ಕೇಸ್ : ಮೂರೇ ನಿಮಿಷದಲ್ಲಿ ಜಾಮೀನು!
ನವದೆಹಲಿ, ಡಿಸೆಂಬರ್ 19 : ಮೂರೇ ಮೂರು ನಿಮಿಷ! ಜಸ್ಟ್ 3 ಮಿನಿಟ್ಸ್!
ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಪಟಿಯಾಲಾ ಹೌಸ್ ನ್ಯಾಯಾಲಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಲು ತೆಗೆದುಕೊಂಡಿರುವಂಥ ಸಮಯ.
ಕೋರ್ಟ್ ಸೋನಿಯಾ, ರಾಹುಲ್ ಮತ್ತಿತರನ್ನು ಜೈಲಿಗಟ್ಟುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ, ಟಿವಿಯಲ್ಲಿ ಎಲ್ಲೆಡೆ ಚರ್ಚೆ ನಡೆಯುತ್ತಿರುವ ಹಂತದಲ್ಲಿ ಕೆಲವೇ ಕ್ಷಣಗಳಲ್ಲಿ ಜಾಮೀನು ಹಿಡಿದುಕೊಂಡು ಇಬ್ಬರೂ ಹೊರನಡೆದಿದ್ದಾರೆ.
ಆದರೆ, ಅವರೊಂದಿಗೆ ಬಂದವರು ಎಂತೆಂಥವರು? ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರು ಖುದ್ದಾಗಿ ಸೋನಿಯಾ ಜೊತೆ ನ್ಯಾಯಾಲಯಕ್ಕೆ ಆಗಮಿಸಿದ್ದರು. ಅಂಥ ದೊಡ್ಡ ಹುದ್ದೆಯನ್ನು ಹತ್ತು ವರ್ಷಗಳ ಕಾಲ ಅಲಂಕರಿಸಿದವರಿಗೆ ನ್ಯಾಯಾಲಯಕ್ಕೆ ಬರುವುದು ಬೇಕಿತ್ತಾ? [ಹೆರಾಲ್ಡ್ : ಒಂದಿಷ್ಟು ತಮಾಷೆಯ, ಕೆಣಕುವ ಟ್ವೀಟುಗಳು]

ಜೊತೆಗೆ, ಮಾಜಿ ಕೇಂದ್ರ ಸಚಿವ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ, ಮಗಳು ಪ್ರಿಯಾಂಕಾ ವದ್ರಾ, ಅಳಿಯ ರಾಬರ್ಟ್ ವದ್ರಾ, ಗುಲಾಮ್ ನಬಿ ಆಜಾದ್, ಮಾಜಿ ಲೋಕಸಭಾಧ್ಯಕ್ಷೆ ಮೀರಾ ಕುಮಾರ್... ಇನ್ನೂ ಯಾರ್ಯಾರೋ! ಎಲ್ಲಿ ನೋಡಿದಲ್ಲಿ ಕಾಂಗ್ರೆಸ್ ಬೆಂಬಲಿಗರೇ ಅಲ್ಲಿ ನೆರೆದಿದ್ದರು.
ಈ ಮೂರು ಕ್ಷಣಗಳಿಗಾಗಿ ಮೂರು ದಿನಗಳಿಂದ ಭಾರೀ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್, ದೆಹಲಿ ಪೊಲೀಸ್ ಮತ್ತು ಜಾಗೃತ ದಳ ಕೋರ್ಟಿನ ಸುತ್ತು ಹೊಡೆದು ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದವು. ಕೋರ್ಟಿನ ಸುತ್ತಲೂ 16 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಕೋರ್ಟ್ ಆವರಣದಲ್ಲಿದ್ದ ಎಲ್ಲಾ ಅಂಗಡಿಗಳಿಗೆ ಬೀಗ ಜಡಿಯಲಾಗಿತ್ತು. ವಿಚಾರಣೆ ನಡೆಸಲಿರುವ ಕೋರ್ಟ್ ಬಳಿಯಿರುವ 2ನೇ ಗೇಟ್ ಬಳಿ ಯಾರೂ ಸುಳಿಯದಂತೆ ನಿಗಾವಹಿಸಲಾಗಿತ್ತು. ಇಲ್ಲಿ ಎಲ್ಲೆಡೆ ಬಹುಸ್ತರದ ಭದ್ರತೆಯನ್ನು ಒದಗಿಸಲಾಗಿತ್ತು. [ಕಾಂಗ್ರೆಸ್ ಬುಡ ಅಲ್ಲಾಡಿಸುತ್ತಿರುವ ನ್ಯಾಷನಲ್ ಹೆರಾಲ್ಡ್]
ಯಾವುದೇ ಅವಘಡ ಸಂಭವಿಸದಂತೆ ತಡೆಯಲು ಸುಮಾರು 50 ಸಾವಿರ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಾರ್ವಜನಿಕರು ಹತ್ತಿರ ಕೂಡ ಸುಳಿಯದಂತೆ ಎಚ್ಚರವಹಿಸಲಾಗಿತ್ತು. ಇನ್ನೂ ರಾಹುಲ್ ಗಾಂಧಿ ಕೋರ್ಟಿಗೆ ಬರುತ್ತಿರುವಾಗ ಸೂಟ್ ಬೂಟ್ ಧಾರಿ ರಕ್ಷಣಾ ಸಿಬ್ಬಂದಿಗಳ ದಂಡೇ ನೆರೆದಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications