ನ್ಯಾಷನಲ್ ಹೆರಾಲ್ಡ್ ವಿವಾದ: ತಡೆಯಾಜ್ಞೆ ನೀಡದ ಕೋರ್ಟ್, ಕಾಂಗ್ರೆಸ್ಗೆ ಹಿನ್ನಡೆ
ನವದೆಹಲಿ, ನವೆಂಬರ್ 15: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ತೆರವು ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕಾ ಕಚೇರಿಯ ಭೋಗ್ಯದ ಅವಧಿಯನ್ನು ಮುಕ್ತಾಯಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಅಲ್ಲದೆ, ಇದಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಲಾಗಿದೆ.

ಕಟ್ಟಡವನ್ನು ತೆರವುಗೊಳಿಸುವಂತೆ ನಗರಾಭಿವೃದ್ಧಿ ಸಚಿವಾಲಯ ನೀಡಿದ್ದ ನೋಟಿಸ್ ವಿರುದ್ಧ ನ್ಯಾಷನಲ್ ಹೆರಾಲ್ ಪತ್ರಿಕೆಯನ್ನು ನಡೆಸುವ ಅಸೋಸಿಯೇಟ್ಸ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು.
ತೆರವು ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡುವುದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು.
ಈ ಪ್ರಕರಣದ ವಿಚಾರಣೆಯನ್ನು ನವೆಂಬರ್ 22ಕ್ಕೆ ಮುಂದೂಡಲಾಯಿತು. ಅಲ್ಲಿಯವರೆಗೂ ತೆರವು ಪ್ರಕ್ರಿಯೆ ನಡೆಸುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ತಿಳಿಸಿದರು.

56 ವರ್ಷಗಳಿಂದ ಎಎಲ್ಜೆ ಸಂಸ್ಥೆಯು ಇಲ್ಲಿ ಕಚೇರಿಯನ್ನು ಭೋಗ್ಯಕ್ಕೆ ಪಡೆದು ಪತ್ರಿಕೆಯನ್ನು ನಡೆಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ಕಟ್ಟಡದ ಕಚೇರಿಯಲ್ಲಿ ಯಾವುದೇ ಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿಲ್ಲ. ಇದು ಭೋಗ್ಯ ಕರಾರಿನ ಉಲ್ಲಂಘನೆ. ಹೀಗಾಗಿ ಕೂಡಲೇ ಕಚೇರಿಯನ್ನು ತೆರವುಗೊಳಿಸಬೇಕು. ಕಟ್ಟಡವನ್ನು ಕೇಂದ್ರ ಸರ್ಕಾರದ ವಶಕ್ಕೆ ಒಪ್ಪಿಸಬೇಕು ಎಂದು ನಗರಾಭಿವೃದ್ಧಿ ಸಚಿವಾಲಯ ನೋಟಿಸ್ ನೀಡಿತ್ತು.
ನ.15ರ ಒಳಗೆ ಕಚೇರಿ ತೆರವುಗೊಳಿಸಿ ಅದನ್ನು ಕೇಂದ್ರ ಸರ್ಕಾರದ ವಶಕ್ಕೆ ನೀಡುವಂತೆ ಅ.30ರಂದು ನೀಡಲಾದ ನೋಟಿಸ್ನಲ್ಲಿ ಅದು ಸೂಚಿಸಿತ್ತು.
2005ರಲ್ಲಿ ಹರಿಯಾಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೂಪಿಂದರ್ ಸಿಂಗ್ ಹೂಡಾ ಅವರು ಪಂಚಕುಳದಲ್ಲಿ ಎಜೆಎಲ್ಗೆ ಪ್ಲಾಟ್ ಒಂದನ್ನು ವರ್ಗಾಯಿಸಿದ್ದರು ಎಂಬ ಆರೋಪ ಇದೆ. ಈ ಆರೋಪದಡಿ ಹರಿಯಾಣ ರಾಜ್ಯಪಾಲರು ಹೂಡಾ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ನೀಡಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications