ಅನಂತತಾನಂತವಾಗಿ.... ಅಗಲಿದ ನಾಯಕಗೆ ಗಣ್ಯರ ಅಶ್ರುತರ್ಪಣ
ನವದೆಹಲಿ, ನವೆಂಬರ್ 12: ರಾಜ್ಯ ರಾಜಕಾರಣದ ಅಗ್ರಪಂಕ್ತಿಯ ನಾಯಕರ ಸಾಲಲ್ಲಿ ಒಬ್ಬರಾಗಿದ್ದ ಅನಂತ್ ಕುಮಾರ್ ಅವರ ಹಠಾತ್ ನಿಧನ ಅವರ ಅಭಿಮಾನಿಗಳಲ್ಲಿ, ಸಹೋದ್ಯೋಗಿಗಳಲ್ಲಿ ಸಾಕಷ್ಟು ಆಘಾತವನ್ನುಂಟು ಮಾಡಿದೆ.
ಮೂರ್ನಾಲ್ಕು ತಿಂಗಳ ಹಿಂದೆ ದಿನ ದಿನವೂ ಹತ್ತಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತ, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಅನಂತ್ ಕುಮಾರ್ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ, ಸೋಮವಾರ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಅನಂತ್ ಕುಮಾರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾವುಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
|
ರಾಮನಾಥ್ ಕೋವಿಂದ್
ಕೇಂದ್ರ ಸಚಿವ ಮತ್ತು ಅತ್ಯುತ್ತಮ ಸಂಸದೀಯ ಪಟು ಎಚ್ ಎನ್ ಅನಂತಕುಮಾರ್ ಅವರ ನಿಧದ ಸುದ್ದಿ ಕೇಳಿ ಸಾಕಷ್ಟು ಬೇಸರವಾಯಿತು. ಇದು ನಮ್ಮ ದೇಶದ ಸಾರ್ವಜನಿಕ ಬದುಕಿನ ಅತೀ ದೊಡ್ಡ ನಷ್ಟ. ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಭರಿಸಲಾರದ ನಷ್ಟ. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯ ಅಭಿಮಾನಿಗಳಿಗೆ ನನ್ನ ಸಂತಾಪಗಳು- ರಾಮನಾಥ್ ಕೋವಿಂದ್, ರಾಷ್ಟ್ರಪತಿ
| Array |
ವೆಂಕಯ್ಯ ನಾಯ್ಡು
ಅನಂತ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ಅವರು ಕೆಲದಿನಗಳಿಂದ ಅನಾರೋಗ್ಯಪೀಡಿತರಾಗಿದ್ದರು, ಆದರೆ ಇಷ್ಟು ಬೇಗ ನಮ್ಮನ್ನಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಅವರು ಗುಣಮುಖರಾಗಿ ಮತ್ತೆ ನಮ್ಮೊಂದಿಗೆ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸದಲ್ಲಿದ್ದೆವು. ಅವರ ಪತ್ನಿ ಮತ್ತು ಮಕ್ಕಳಿಗೆ ನನ್ನ ಸಂತಾಪಗಳು- ಎಂ ವೆಂಕಯ್ಯ ನಾಯ್ಡು, ಉಪರಾಷ್ಟ್ರಪತಿ
|
ಅಮಿತ್ ಶಾ
ಕೇಂದ್ರ ಸಚಿವ ಮತ್ತು ಹಿರಿಯ ನಾಯಕ ಅನಂತ್ ಕುಮಾರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ನನಗೆ ಸಾಕಷ್ಟು ಆಘಾತವಾಯಿತು. ಅದ್ವಿತೀಯ ಎಂಬಂತೆ ಅವರು ಪಕ್ಷ ಮತ್ತು ಸಂಘಕ್ಕಾಗಿ ದುಡಿದವರು, ತಮ್ಮ ಬದುಕನ್ನು ಸಮರ್ಪಿಸಿದರು. ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟುವಲ್ಲಿ ಅವರ ಅವಿರತ ಶ್ರಮವನ್ನು ಎಂದಿಗೂ ಮರೆತುವುದಕ್ಕೆ ಸಾಧ್ಯವಿಲ್ಲ- ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ
| Array |
ರಾಹುಲ್ ಗಾಂಧಿ
ಅನಂತ್ ಕುಮಾರ್ ಜೀ ಅವರ ಅಗಲಿಕೆಯ ಸುದ್ದಿ ತಿಳಿದು ತೀವ್ರ ಬೇಸರವಾಯಿತು. ಅವರ ಕುಟುಂಬಕ್ಕೆ ಮತ್ತು ಬಂಧು, ಸ್ನೇಹಿತರಿಗೆ ನನ್ನ ಸಂತಾಪಗಳು. ಅವರ ಆಟ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ- ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
|
ಯೋಗಿ ಆದಿತ್ಯನಾಥ್
ಇದು ನಿಜಕ್ಕೂ ಒಂದು ಆಘಾತಕಾರಿ ಘಟನೆ. ಇದು ಸರ್ಕಾರ ಮತ್ತು ಪಕ್ಷಕ್ಕೆ ಅತೀ ದೊಡ್ಡ ನಷ್ಟ. ಒಬ್ಬ ಅತ್ಯುತ್ತಮ ಆಡಳಿತಗಾರ ಮತ್ತು ಜನಪ್ರಿಯ ನಾಯಕರಾಗಿ ಅನಂತ್ ಕುಮಾರ್ ಜೀ ಎಂದಿಗೂ ನೆನಪಿನಲ್ಲುಳಿಯುತ್ತಾರೆ. ಉತ್ತರ ಪ್ರದೇಶ ಸರ್ಕಾರದ ಪರವಾಗಿ ನಾನು ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ- ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಮುಖ್ಯಮಂತ್ರಿ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications