ಕೃಷಿ ಮಸೂದೆ: ರಾಜ್ಯಸಭೆಯಲ್ಲಿ ಬಿಜೆಪಿಗೆ ಕೈಕೊಟ್ಟ ಬಿಜೆಡಿ
ನವದೆಹಲಿ, ಸೆಪ್ಟೆಂಬರ್ 21: ರಾಜ್ಯಸಭೆಯಲ್ಲಿ ಬಿಜು ಜನತಾದಳ ಪಕ್ಷವು ಕೃಷಿಗೆ ಸಂಬಂಧಿಸಿದ ಎರಡು ಮಸೂದೆಯನ್ನು ವಿರೋಧಿಸುವ ಮೂಲಕ ಆಡಳಿತರೂಢ ಬಿಜೆಪಿ ಹಾಗೂ ಎನ್ಡಿಎಗೆ ಅಶ್ಚರ್ಯ ನೀಡಿದೆ.
ಇತ್ತೀಚಿನ ಕೆಲವು ವರ್ಷಗಳಲ್ಲಿ ಸಾಕಷ್ಟು ವಿಧೇಯಕಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿಗೆ ಬೆಂಬಲ ನೀಡುತ್ತಿದ್ದ ಬಿಜೆಡಿ, ಈ ಬಾರಿ ಮಾತ್ರ ಕೃಷಿಗೆ ಸಂಬಂಧಿಸಿದ ವಿಧೇಯಕದಲ್ಲಿ ಯಾವುದೇ ಬೆಂಬಲವನ್ನು ನೀಡಿಲ್ಲ. ಲೋಕಸಭೆಯಲ್ಲೂ ವಿಧೇಯಕವನ್ನು ಸದನ ಸಮಿತಿಗೆ ಕಳಿಸಬೇಕು ಎನ್ನುವುದು ಬಿಜೆಪಿ ಸಂಸದರ ವಾದವಾಗಿತ್ತು .
ಆದರೆ ಲೋಕಸಭೆಯಲ್ಲಿ ಯಾವುದೇ ಮತದಾನ ನಡೆದಿರಲಿಲ್ಲ. ಹಾಗೆಯೇ ರಾಜ್ಯಸಭೆಯಲ್ಲೂ ಕೂಡ ವಿಧೇಯಕದ ಹಾಲಿ ಕೆಲವು ಅಂಶಗಳಿಗೆ ತನ್ನ ಆಕ್ಷೇಪವಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ. ರೈತರ ಹಿತದೃಷ್ಟಿಯಿಂದ ಬಿಜೆಡಿ ಇಂತಹ ನಿಲುವು ತಾಳಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಾಗೆಯೇ ಇತ್ತೀಚೆಗೆ ನಡೆದ ಉಪ ಸಭಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಡಿ ಆಡಳಿತಾರೂಢ ಬಿಜೆಪಿಗೆ ಬೆಂಬಲ ನೀಡಲು ನಿರ್ಧರಿಸಿತ್ತು. ಹಾಗೆಯೇ ಬಿಜೆಡಿ ಸಂಸದರಿಗೆ ಈ ಸ್ಥಾನವನ್ನು ನೀಡಲಾಗಿತ್ತು.
ಆದರೆ ಆ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನವೀನ್ ಪಟ್ನಾಯಕ್ ಅವರನ್ನು ಸಂಪರ್ಕಸಿ ಸರ್ಕಾರವನ್ನು ಬೆಂಬಲಿಸಲು ಮನವಿ ಮಾಡಿದ್ದರು ಎಂದು ಹೇಳಲಾಗಿದೆ.
ಆದರೆ ಈ ಬಾರಿ ಮಾತ್ರ ಬಿಜೆಪಿಗೆ ಬಿಜೆಡಿ ಶಾಕ್ ನೀಡಿದೆ, ಆದರೆ ಈ ಹಿಂದೆ ಕಾಶ್ಮೀರದ ವಿಶೇಷ ಮಾನ್ಯತೆ ನೀಡುವ 370 ವಿಧೇಯಕ ರದ್ದು, ತ್ರಿವಳಿ ತಲಾಖ್ ಕಾಯ್ದೆಗೆ ಸಂಬಂಧಿಸಿದಂತೆ ಬಿಜೆಪಿಗೆ ಬಿಜೆಡಿ ಬೆಂಬಲ ನೀಡಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications