ದೆಹಲಿ ಕೋರ್ಟ್ ನಿಂದ ವಿಜಯ್ ಮಲ್ಯಗೆ ಜಾಮೀನುರಹಿತ ವಾರಂಟ್
ಹಲವು ಬಾರಿ ಜ್ಞಾಪನಾ ಆದೇಶಗಳನ್ನು ಕಳಿಸಿದರೂ ವಿಜಯ್ ಮಲ್ಯ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಇದನ್ನು ಗಮನಿಸಿದರೆ ಅವರಿಗೆ ಕೋರ್ಟ್ ಬಗ್ಗೆ ಅಲ್ಪ ಗೌರವವೂ ಇದ್ದಂತಿಲ್ಲ
ನವದೆಹಲಿ, ನವೆಂಬರ್ 4: ಮದ್ಯ ಉದ್ಯಮಿ ವಿಜಯ್ ಮಲ್ಯಗೆ ದೆಹಲಿ ಪಟಿಯಾಲ ಹೌಸ್ ನಿಂದ ಮತ್ತೊಂದು ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ. ಮಲ್ಯ ಅವರನ್ನು ಕಟುವಾದ ಶಬ್ದಗಳಿಂದ ಟೀಕಿಸಿದ ಕೋರ್ಟ್, ಚೆಕ್ ಬೌನ್ಸ್ ಪ್ರಕರಣ ವಿಚಾರಣೆ ಕೈಗೆತ್ತಿಕೊಂಡಿತ್ತು.
ಉದ್ಯಮಿ ವಿಜಯ ಮಲ್ಯಗೆ ವಾಪಸಾಗುವ ಉದ್ದೇಶವೇ ಇದ್ದಂತಿಲ್ಲ ಎಂದು ಕೋರ್ಟ್ ಹೇಳಿದೆ. ಹಲವು ಬಾರಿ ಈ ಬಗ್ಗೆ ಜ್ಞಾಪನಾ ಆದೇಶಗಳನ್ನು ಕಳಿಸಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ. ಇದನ್ನು ಗಮನಿಸಿದರೆ ಅವರಿಗೆ ಕೋರ್ಟ್ ಬಗ್ಗೆ ಅಲ್ಪ ಗೌರವವೂ ಇದ್ದಂತಿಲ್ಲ ಎಂದು ಕೋರ್ಟ್ ಹೇಳಿದೆ.[ವಿಜಯ್ ಮಲ್ಯ ಅವರ ಆಪ್ತ ರಘುನಾಥನ್ ಗೆ ಜೈಲು ಶಿಕ್ಷೆ]

ಸಮನ್ಸ್ ಕಳಿಸಿದ ನಂತರವೂ ಅದಕ್ಕೆ ಮಲ್ಯ ಸ್ಪಂದಿಸಿಲ್ಲ. ಆದ್ದರಿಂದ ಜಾಮೀನುರಹಿತ ವಾರಂಟ್ ನೀಡಲಾಗಿದೆ ಎಂದು ತಿಳಿಸಿತು. ಮುಂಬೈ ಕೋರ್ಟ್ ಸಹ ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನುರಹಿತ ವಾರಂಟ್ ಹೊರಡಿಸಿತ್ತು.[ಇಂದಿಗೂ ಯುಬಿ ಗ್ರೂಪ್ ಗೆ ವಿಜಯ್ ಮಲ್ಯರೇ ಬಾಸ್!]
ಒಂದು ತಿಂಗಳ ಒಳಗಾಗಿ ವಿಜಯ ಮಲ್ಯಗೆ ಇರುವ ಸಂಫೂರ್ಣ ಆಸ್ತಿ ವಿವರದ ಅಫಿಡವಿಟ್ ಸಲ್ಲಿಸುವಂತೆ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಮುಂದಿನ ವಿಚಾರಣೆ ನವೆಂಬರ್ 24ರಂದು ನಡೆಯಲಿದೆ ಎಂದು ಕೂಡ ತಿಳಿಸಿತ್ತು. ವಿಜಯ ಮಲ್ಯರಿಂದ ಬಾಕಿ ಇರುವ ಒಂಬತ್ತು ಸಾವಿರ ಕೋಟಿ ವಸೂಲಿಗೆ ಸ್ಟೇಟ್ ಬ್ಯಾಂಕ್ ನೇತೃತ್ವದಲ್ಲಿ ಬ್ಯಾಂಕ್ ಗಳ ಸಮೂಹ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದ ವಿಚಾರಣೆ ಇದಾಗಿತ್ತು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications