Get Updates
Get notified of breaking news, exclusive insights, and must-see stories!

ಪಿವಿ ನರಸಿಂಹ ರಾವ್ ಸ್ಮಾರಕ, ಮೋದಿ ಚಾಲಾಕಿ ನಡೆ

ನವದೆಹಲಿ, ಏ.1: ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ದೇಶಕ್ಕೆ ನೀಡಿದ ಆರ್ಥಿಕ ಸುಧಾರಣಾ ಯೋಜನೆಗಳಿಗೆ ಬೆಲೆ ಸಿಗಲಿ ಎಂದು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನರಸಿಂಹ ರಾವ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿರುವುದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ವಿಭೂಷಣ ಎಲ್ ಕೆ ಅಡ್ವಾಣಿ ಸೇರಿದಂತೆ 19 ಮಂದಿಗೆ ಕೋರ್ಟಿನಿಂದ ಸಮನ್ಸ್ ಜಾರಿಗೊಂಡ ಸಂದರ್ಭದಲ್ಲೇ ಎನ್ ಡಿಎ ಸರ್ಕಾರ ಸ್ಮಾರಕ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದೆ.[ಪಿವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಸ್ವಾಮಿ]

ದೇಶದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆದು ಯಶಸ್ವಿ 5 ವರ್ಷಗಳ ಕಾಲ ಪ್ರಧಾನಿಯಾಗಿದ್ದ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ನವದೆಹಲಿಯ ಏಕ್ತಾ ಸ್ಥಳ ಸಮಾಧಿ ಬಳಿ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಈಗಾಗಲೇ ಭರದ ಸಿದ್ಧತೆಗಳು ಪ್ರಾರಂಭವಾಗಿವೆ. ಪುರಾತತ್ವ ಇಲಾಖೆ ಮೂಲಕ ಸ್ಮಾರಕ ತಲೆ ಎತ್ತಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

NDA govt to set up memorial for former PM P V Narasimha Rao
ಮೋದಿ ಅವರ ಎಫ್ ಡಿಐ ನೀತಿಗೆ ಪಿವಿ ನರಸಿಂಹ ರಾವ್ ಅವರು ಹಾಕಿಕೊಟ್ಟ ಆರ್ಥಿಕ ಸುಧಾರಣೆ ನೀತಿಗೆ ಆಧಾರ ಎನ್ನಲಾಗಿದೆ. 1991ರಲ್ಲಿ ಹಳಿ ತಪ್ಪಿದ್ದ ದೇಶದ ಆರ್ಥಿಕ ಸುಧಾರಣೆಗೆ ನರಸಿಂಹರಾವ್ ತೆಗೆದುಕೊಂಡ ದಿಟ್ಟ ಕ್ರಮವೇ ಕಾರಣ. ಉತ್ಪಾದನಾ ವಲಯಕ್ಕೆ ವಿದೇಶಿ ಬಂಡವಾಳ ಹರಿದುಬಂದು ಅನೇಕ ಕೈಗಾರಿಕೆಗಳು ಸುಧಾರಣೆಯಾಯಿತು. ಇದರಿಂದ ಉದ್ಯೋಗ ಸೃಷ್ಟಿಯಾಯಿತು ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.[ಮಸೀದಿ ಧ್ವಂಸವಾದಾಗ ಅಂದಿನ ಪ್ರಧಾನಿ ಏನ್ಮಾಡ್ತಿದ್ರು?]

ಟಿಡಿಪಿ ಒತ್ತಾಯ: ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂದು ಎನ್‌ಡಿಎ ಮಿತ್ರ ಪಕ್ಷವಾದ ತೆಲಗು ದೇಶಂ ಪಕ್ಷ ಕೇಂದ್ರದ ಮೇಲೆ ಒತ್ತಡ ಹೇರಿತ್ತು. ನರಸಿಂಹರಾವ್ ಕಾಂಗ್ರೆಸ್‌ನಲ್ಲಿದ್ದರೂ ಅವರನ್ನು ಆ ಪಕ್ಷ ಸಂಪೂರ್ಣವಾಗಿ ತಿರಸ್ಕಾರ ಮಾಡಿದೆ.


ಕಾಂಗ್ರೆಸ್‌ಗೆ ಮುಜುಗರ ಮಾಡುವ ಉದ್ದೇಶದಿಂದಲಾದರೂ ಸ್ಮಾರಕಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಡ ಹಾಕಿದ್ದರು. ಇದರ ಜೊತೆಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಕೂಡಾ ಪಿವಿ ನರಸಿಂಹ ರಾವ್ ಸ್ಮಾರಕಕ್ಕೆ ಒತ್ತಾಯಿಸಿದ್ದರು.[ಬಾಬ್ರಿ ಧ್ವಂಸ ಪ್ರಕರಣ: ಪದ್ಮವಿಭೂಷಣ ಅಡ್ವಾಣಿಗೆ ನೋಟಿಸ್]

ತೆಲಂಗಾಣದಲ್ಲಿ ನರಸಿಂಹರಾವ್ ಸ್ಮಾರಕ ನಿರ್ಮಾಣ ಮಾಡಲು ಟಿಡಿಪಿ ಕಳೆದ ಅಕ್ಟೋಬರ್‌ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮುಂದಾಗಿರುವುದರಿಂದ ಕಾಂಗ್ರೆಸ್‌ಗೆ ಮುಜುಗರವುಂಟು ಮಾಡಿದೆ. ಏಕ್ತಾ ಸ್ಥಳವು ಮಾಜಿ ರಾಷ್ಟ್ರಪತಿ ಹಾಗೂ ಕಾಂಗ್ರೆಸ್ ನಾಯಕ ಗ್ಯಾನಿ ಜೇಲ್‌ಸಿಂಗ್ ಅವರ ಸಮಾಧಿಯೂ ಇದೆ. ಅನೇಕ ನಾಯಕರ ಸ್ಮಾರಕಗಳ ತಾಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+