ಪಿವಿ ನರಸಿಂಹ ರಾವ್ ಸ್ಮಾರಕ, ಮೋದಿ ಚಾಲಾಕಿ ನಡೆ
ನವದೆಹಲಿ, ಏ.1: ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರ ದೇಶಕ್ಕೆ ನೀಡಿದ ಆರ್ಥಿಕ ಸುಧಾರಣಾ ಯೋಜನೆಗಳಿಗೆ ಬೆಲೆ ಸಿಗಲಿ ಎಂದು ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ನರಸಿಂಹ ರಾವ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿರುವುದು ಕಾಂಗ್ರೆಸ್ಸಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಪಿವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದ ಕಾಲದಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ವಿಭೂಷಣ ಎಲ್ ಕೆ ಅಡ್ವಾಣಿ ಸೇರಿದಂತೆ 19 ಮಂದಿಗೆ ಕೋರ್ಟಿನಿಂದ ಸಮನ್ಸ್ ಜಾರಿಗೊಂಡ ಸಂದರ್ಭದಲ್ಲೇ ಎನ್ ಡಿಎ ಸರ್ಕಾರ ಸ್ಮಾರಕ ನಿರ್ಮಾಣದ ಬಗ್ಗೆ ಘೋಷಣೆ ಮಾಡಿದೆ.[ಪಿವಿ ನರಸಿಂಹ ರಾವ್ ಗೆ ಭಾರತ ರತ್ನ ನೀಡಿ: ಸ್ವಾಮಿ]
ದೇಶದ ಆರ್ಥಿಕ ಸುಧಾರಣೆಗೆ ಮುನ್ನುಡಿ ಬರೆದು ಯಶಸ್ವಿ 5 ವರ್ಷಗಳ ಕಾಲ ಪ್ರಧಾನಿಯಾಗಿದ್ದ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ನವದೆಹಲಿಯ ಏಕ್ತಾ ಸ್ಥಳ ಸಮಾಧಿ ಬಳಿ ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ಈಗಾಗಲೇ ಭರದ ಸಿದ್ಧತೆಗಳು ಪ್ರಾರಂಭವಾಗಿವೆ. ಪುರಾತತ್ವ ಇಲಾಖೆ ಮೂಲಕ ಸ್ಮಾರಕ ತಲೆ ಎತ್ತಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

NDA govt plans a memorial for P V Narasimha Rao.A Tight slap on the face of Congress.
— Abhilash Sidd (@abhilash99) March 31, 2015 ಟಿಡಿಪಿ ಒತ್ತಾಯ: ನರಸಿಂಹರಾವ್ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕೆಂದು ಎನ್ಡಿಎ ಮಿತ್ರ ಪಕ್ಷವಾದ ತೆಲಗು ದೇಶಂ ಪಕ್ಷ ಕೇಂದ್ರದ ಮೇಲೆ ಒತ್ತಡ ಹೇರಿತ್ತು. ನರಸಿಂಹರಾವ್ ಕಾಂಗ್ರೆಸ್ನಲ್ಲಿದ್ದರೂ ಅವರನ್ನು ಆ ಪಕ್ಷ ಸಂಪೂರ್ಣವಾಗಿ ತಿರಸ್ಕಾರ ಮಾಡಿದೆ.
Bjp setting good example by planning to honour p v narasimha rao. He had sacked 4 bjp ruled states.Held bjp singularly responsible for babri
— rasheed kidwai (@rasheedkidwai) March 31, 2015 ಕಾಂಗ್ರೆಸ್ಗೆ ಮುಜುಗರ ಮಾಡುವ ಉದ್ದೇಶದಿಂದಲಾದರೂ ಸ್ಮಾರಕಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಡ ಹಾಕಿದ್ದರು. ಇದರ ಜೊತೆಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಕೂಡಾ ಪಿವಿ ನರಸಿಂಹ ರಾವ್ ಸ್ಮಾರಕಕ್ಕೆ ಒತ್ತಾಯಿಸಿದ್ದರು.[ಬಾಬ್ರಿ ಧ್ವಂಸ ಪ್ರಕರಣ: ಪದ್ಮವಿಭೂಷಣ ಅಡ್ವಾಣಿಗೆ ನೋಟಿಸ್]
P. V. Narasimha Rao & Vajpayee changed the direction of country Arun Shourie http://t.co/9xyqqWYodB pic.twitter.com/SikT2W9D2a
— Niti Central (@NitiCentral) March 19, 2015 ತೆಲಂಗಾಣದಲ್ಲಿ ನರಸಿಂಹರಾವ್ ಸ್ಮಾರಕ ನಿರ್ಮಾಣ ಮಾಡಲು ಟಿಡಿಪಿ ಕಳೆದ ಅಕ್ಟೋಬರ್ನಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಮುಂದಾಗಿರುವುದರಿಂದ ಕಾಂಗ್ರೆಸ್ಗೆ ಮುಜುಗರವುಂಟು ಮಾಡಿದೆ. ಏಕ್ತಾ ಸ್ಥಳವು ಮಾಜಿ ರಾಷ್ಟ್ರಪತಿ ಹಾಗೂ ಕಾಂಗ್ರೆಸ್ ನಾಯಕ ಗ್ಯಾನಿ ಜೇಲ್ಸಿಂಗ್ ಅವರ ಸಮಾಧಿಯೂ ಇದೆ. ಅನೇಕ ನಾಯಕರ ಸ್ಮಾರಕಗಳ ತಾಣವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications